ಯಾದಗಿರಿಯಲ್ಲಿ ಚುನಾವಣಾ ಕಾವೇರಿಸಿದ ಅಭ್ಯರ್ಥಿಗಳು

ಸುರಪುರ ಕ್ಷೇತ್ರದಲ್ಲಿ ಭಾರತೀಯ ಜನತಾ ಪಕ್ಷದಿಂದ ಕರ್ನಾಟಕ ಜನತಾ ಪಕ್ಷಕ್ಕೆ ಹಾರಿರುವ ನರಸಿಂಹ ನಾಯಕ್ (ರಾಜೂಗೌಡ) ಅವರು ಕಾಂಗ್ರೆಸ್ನ ರಾಜಾ ವೆಂಕಟಪ್ಪ ನಾಯಕ್ ಮತ್ತು ಬಿಜೆಪಿಯ ರಾಜಾ ಮದನಗೋಪಾಲ ನಾಯಕ್ ಅವರಿಗೆ ಸೆಡ್ಡು ಹೊಡೆದಿದ್ದಾರೆ. ಒಟ್ಟಿನಲ್ಲಿ ನಾಯಕ್ ಜನಾಂಗದವರ ನಡುವಿನ ಬಡಿದಾಟಕ್ಕೆ ಸುರಪುರ ಸಾಕ್ಷಿಯಾಗಲಿದೆ. [ 2013 ಫಲಿತಾಂಶ: ಗೆದ್ದವರು, ಸೋತವರ ವಿವರ]
ಮಲ್ಲಿಕಾರ್ಜುನ ಖರ್ಗೆ ಅವರ ಹಿಂದಿನ ಕ್ಷೇತ್ರ ಗುರುಮಿಠಕಲ್ ಈ ಬಾರಿ ಸಾಕಷ್ಟು ಆಸಕ್ತಿಯನ್ನು ಕೆರಳಿಸಿದೆ. ಬಿಜೆಪಿಯಿಂದ ಬಿಸಿರಕ್ತದ ಗಿರೀಶ್ ಮಟ್ಟಣ್ಣನವರ್ ಅವರು ಕಳೆದ ಬಾರಿಯ ಶಾಸಕ ಕಾಂಗ್ರೆಸ್ ಪಕ್ಷದ ಬಾಬುರಾವ್ ಚಿಂಚನಸೂರ್ ಅವರಿಗೆ ಸವಾಲೆಸೆದಿದ್ದಾರೆ. ಹೈಟೆಕ್ ವಾಹನವನ್ನು ಬಾಡಿಗೆ ಪಡೆದಿರುವ ಬಾಬುರಾವ್ ಚಿಂಚನಸೂರ್ ತಣ್ಣಗೆ ಪ್ರಚಾರ ಆರಂಭಿಸಿದ್ದಾರೆ.
ಯಾದಗಿರಿಯಲ್ಲಿ ಕಾಂಗ್ರೆಸ್ನ ಡಾ. ಎ.ಬಿ. ಮಾಲಕರೆಡ್ಡಿ ಅವರು ಗೆಲುವಿನ ಕುದುರೆಯಾಗಿದ್ದಾರೆ. ಇನ್ನು ಶಹಾಪುರದಲ್ಲಿ ಕೂಡ ಕಾಂಗ್ರೆಸ್ ತನ್ನ ಅಧಿಪತ್ಯವನ್ನು ಸ್ಥಾಪಿಸಿದೆ. 2008ರ ಚುನಾವಣೆಯಲ್ಲಿ ಶರಣಬಸಪ್ಪ ದರ್ಶನಾಪುರ ಅವರು ಜಯಭೇರಿ ಬಾರಿಸಿದ್ದರು.
| ಕ್ಷೇತ್ರ ಸಂಖ್ಯೆ | ಕ್ಷೇತ್ರದ ಹೆಸರು | ಬಿಜೆಪಿ | ಕಾಂಗ್ರೆಸ್ | ಜೆಡಿಎಸ್ | ಕೆಜೆಪಿ | ಬಿಎಸ್ಆರ್ ಸಿಪಿ/ಪಕ್ಷೇತರರು/ಇತರೆ |
| 36 | ಸುರಪುರ (ಎಸ್ ಟಿ) | ರಾಜಾ ಮದನಗೋಪಾಲ ನಾಯಕ್ | ರಾಜಾ ವೆಂಕಟಪ್ಪ ನಾಯಕ್ | ನರಸಿಂಹ ನಾಯಕ್ (ರಾಜೂಗೌಡ) | ಶಿವರಾಜ ಮಲ್ಲೇಶಿ | ನಂದಕುಮಾರ್ ಪಾಟೀಲ (ಬಿಎಸ್ಆರ್) |
| 37 | ಶಹಾಪುರ | ವೀರಣ್ಣಗೌಡ ಮಲ್ಲಾಬಾದಿ | ಶರಣಬಸಪ್ಪ ದರ್ಶನಾಪುರ | ಶರಣಪ್ಪ ಸಲಾದಪುರ | ಗುರು ಪಾಟೀಲ | ಶಂಕ್ರಣ್ಣ ವಣಿಕ್ಯಾಳ (ಬಿಎಸ್ಆರ್) |
| 38 | ಯಾದಗಿರಿ | ಚಂದ್ರಶೇಖರ ಮಾಗನೂರ | ಡಾ. ಎ.ಬಿ. ಮಾಲಕರೆಡ್ಡಿ | ಎ.ಸಿ. ಕಾಡ್ಲೂರ | ಡಾ. ವೀರಬಸವಂತ ರೆಡ್ಡಿ ಮುದ್ನಾಳ್ | ಮೌಲಾಲಿ ಅನ್ಪೂರು (ಬಿಎಸ್ಆರ್) |
| 39 | ಗುರುಮಿಠಕಲ್ | ಗಿರೀಶ್ ಮಟ್ಟಣ್ಣನವರ್ | ಬಾಬುರಾವ್ ಚಿಂಚನಸೂರ್ | ನಾಗನಗೌಡ ಕುಂದಕೂರ | ವೆಂಕಟರೆಡ್ಡಿ ಮುದ್ನಾಳ್ | ಬಾಬು ಚವ್ಹಾಣ್ (ಬಿಎಸ್ಆರ್) |
ನೀವೇ ಆಗಿರಿ ಕರ್ನಾಟಕದ ಗುರು | ಮತ ಹಾಕ್ತೀನಂತ ಪ್ರಮಾಣ ಮಾಡಿ
-
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
ವಂದೇ ಭಾರತ್ ರೈಲಿನ ಊಟ ಸೇವಿಸಿದ ಮಹಿಳೆಗೆ ತೀವ್ರ ಅಲರ್ಜಿ, 2 ವರ್ಷದ ಮಗನಿಗೆ ಅತಿಸಾರ: IRCTC ಹೇಳಿದ್ದೇನು? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಬೆಂಗಳೂರು ಸೇರಿ ಪ್ರಮುಖ ನಗರಗಳಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ? -
Oracle: ಒರಾಕಲ್ ಸಂಸ್ಥೆಯಲ್ಲಿ ವೆಚ್ಚ ಕಡಿತದ ಭಾಗವಾಗಿ ಕೆಲಸ ಕಳೆದುಕೊಂಡ 12,000 ಜನ, 30,000 ಜನರಿಗೆ ಸಂಕಷ್ಟ -
KSRTC: ಏಪ್ರಿಲ್ 10ರವರೆಗೆ ವಿದ್ಯಾರ್ಥಿಗಳ ಬಸ್ಪಾಸ್ ಅವಧಿ ವಿಸ್ತರಣೆ -
ಏಪ್ರಿಲ್ ಮೊದಲ ವಾರ ಬ್ಯಾಂಕ್ ಬಂದ್: ಗ್ರಾಹಕರು ಮುಂಚಿತವಾಗಿ ಯೋಜನೆ ಮಾಡಬೇಕು -
ನಮ್ಮ ಮೆಟ್ರೋ ಪ್ರಯಾಣಿಕರಿಗೆ ನಿರಾಸೆ: ಮೇ ತಿಂಗಳಿನಲ್ಲಿ ಆರಂಭವಾಗಬೇಕಿದ್ದ ಪಿಂಕ್ ಲೈನ್ ಸಂಚಾರ ವಿಳಂಬ ಸಾಧ್ಯತೆ -
ವಾಸ್ತು ಪ್ರಕಾರ ಬಾತ್ರೂಮ್ನಲ್ಲಿ ಉಪ್ಪು ಇಡುವುದರಿಂದ ಏನು ಲಾಭ? -
ಚಲಿಸುವ ರೈಲಿನ ಬೋಗಿಯಲ್ಲಿ ಬಟ್ಟೆ ಒಣಗಿಸಿದ ಪ್ರಯಾಣಿಕರು: Viral Video ನೋಡಿ ನೆಟ್ಟಿಗರು ಗರಂ -
ಹೋಟೆಲ್, ರೆಸ್ಟೋರೆಂಟ್ ಮಾಲೀಕರಿಗೆ ಶಾಕ್: ವಾಣಿಜ್ಯ ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ ಬರೋಬ್ಬರಿ 195 ರೂ. ಭಾರಿ ಏರಿಕೆ












Click it and Unblock the Notifications