ವಿಶೇಷ ಗೊತ್ತೆ: 30 ವರ್ಷದ ನಂತರ ಪಿಯು ಪರೀಕ್ಷೆಯಲ್ಲಿ ಸಾ ರಾ ಮಹೇಶ್ ಪತ್ನಿ ಪಾಸ್!
ಬೆಂಗಳೂರು, ಜೂನ್ 18: ಕರ್ನಾಟಕದಲ್ಲಿ 2021-22ನೇ ಸಾಲಿನಲ್ಲಿ ನಡೆದ ದ್ವಿತೀಯ ಪಿಯುಸಿ ಫಲಿತಾಂಶ ಶನಿವಾರ ಹೊರ ಬಿದ್ದಿದ್ದು, 30 ವರ್ಷಗಳ ನಂತರ ಪಿಯುಸಿ ಪರೀಕ್ಷೆ ಬರೆದ ಮಾಜಿ ಸಚಿವ ಸಾ ರಾ ಮಹೇಶ್ ಪತ್ನಿ ಅನಿತಾ ಅತ್ಯಧಿತ ಅಂಕಗಳೊಂದಿಗೆ ಉತ್ತೀರ್ಣರಾಗಿದ್ದಾರೆ.
ಕಳೆದ 1993ರಲ್ಲಿ ಅನಿತಾ ಸಾ. ರಾ. ಮಹೇಶ್ ಎಸ್ಎಸ್ಎಲ್ ಸಿ ಪರೀಕ್ಷೆಯಲ್ಲಿ ಪಾಸ್ ಆಗಿದ್ದರು. ತದನಂತರದಲ್ಲಿ ವಿದ್ಯಾಭ್ಯಾಸವನ್ನು ಮುಂದುವರಿಸಿರಲಿಲ್ಲ. ಇದೀಗ ಖಾಸಗಿಯಾಗಿ ಪಿಯುಸಿ ಪರೀಕ್ಷೆಯನ್ನು ಬರೆದ ಅವರು ಕಲಾ ವಿಭಾಗದಲ್ಲಿ 419 ಅಂಕಗಳನ್ನು ಪಡೆದುಕೊಂಡು ಉತ್ತೀರ್ಣರಾಗಿದ್ದಾರೆ.
ಸಾ ರಾ ಮಹೇಶ್ ಮತ್ತು ಅನಿತಾ ದಂಪತಿಗೆ ಇಬ್ಬರು ಮಕ್ಕಳಿದ್ದು, ಹಿರಿಯ ಪುತ್ರ ಧನುಷ್ ಎಂಬಿಬಿಎಸ್ ಮುಗಿಸಿ ಎಂಎಸ್ ಮಾಡುತ್ತಿದ್ದಾರೆ. ಅದೇ ರೀತಿ ಕಿರಿಯ ಪುತ್ರ ಜಯಂತ್ ಉದ್ಯಮಿ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.

ಅನಿತಾ ಸಾ. ರಾ. ಮಹೇಶ್ ಗಳಿಸಿದ ಅಂಕಗಳೆಷ್ಟು?: ಬರೋಬ್ಬರಿ 30 ವರ್ಷಗಳ ನಂತರ ಪಿಯುಸಿ ಪರೀಕ್ಷೆಯನ್ನು ಎದುರಿಸಿದ ಅನಿತಾ ಸಾ ರಾ ಮಹೇಶ್ ಮೊದಲ ಗ್ರೇಡ್ ಪಡೆದುಕೊಂಡು ಪಾಸ್ ಆಗಿದ್ದಾರೆ. ಹಾಗಿದ್ದರೆ ಅವರು ಪಡೆದುಕೊಂಡ ಅಂಕಗಳೆಷ್ಟು ಎಂಬುದನ್ನು ಒಮ್ಮೆ ನೋಡೋಣ.
ವಿಷಯ - ಪಡೆದ ಅಂಕಗಳು
* ಕನ್ನಡ - 98/100
* ಇಂಗ್ಲೀಷ್ - 70/100
* ಇತಿಹಾಸ - 70/100
* ಅರ್ಥಶಾಸ್ತ್ರ - 56/100
* ಸಮಾಜಶಾಸ್ತ್ರ - 70/100
* ರಾಜಕೀಯಶಾಸ್ತ್ರ - 55/100
ಮಧ್ಯಮ ವರ್ಗದ ಅನಿತಾ ಸಾ.ರಾ. ಮಹೇಶ್: ಸಾ.ರಾ. ಮಹೇಶ್ ಪತ್ನಿ ಅನಿತಾ ಮೂಲತಃ ಮಧ್ಯಮ ವರ್ಗದವರಾಗಿದ್ದು, ಮೈಸೂರಿನ ಚಾಮರಾಜ ಮೊಹಲ್ಲಾದವರಾಗಿದ್ದಾರೆ. ಇವರ ತಂದೆ ನಾರಾಯಣ್ ಖಾಸಗಿ ಕಾಲೇಜಿನಲ್ಲಿ ಕೆಲಸ ಮಾಡುತ್ತಿದ್ದು, ತಾಯಿ ರಾಧಮ್ಮ ಗೃಹಿಣಿಯಾಗಿದ್ದರು.
ನಾರಾಯಣ್ ಮತ್ತು ರಾಧಮ್ಮ ದಂಪತಿಗೆ ಅನಿತಾ ಸೇರಿದಂತೆ ಮೂವರು ಹೆಣ್ಣು ಮಕ್ಕಳಿದ್ದು, ಅನಿತಾ ಮನೆಯ ಹಿರಿಯ ಮಗಳಾಗಿದ್ದಾರೆ. ಮನೆಯ ಹಿರಿಯ ಪುತ್ರಿಯಾಗಿದ್ದ ಅವರ ಹೆಗಲಿಗೆ ಮನೆಯ ಜವಾಬ್ದಾರಿಯಿತ್ತು. ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಉತ್ತಮ ಅಂಕಗಳನ್ನು ಪಡೆದುಕೊಂಡಿದ್ದರೂ, ವಿದ್ಯಾಭ್ಯಾಸವನ್ನು ಮುಂದುವರಿಸುವುದಕ್ಕೆ ಕುಟುಂಬದ ಪರಿಸ್ಥಿತಿ ಪೂರಕವಾಗಿರಲಿಲ್ಲ.
ಪಿಯುಸಿ ಪರೀಕ್ಷೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಗೆ ಮೊದಲ ಸ್ಥಾನ: ದಕ್ಷಿಣ ಕನ್ನಡ ಜಿಲ್ಲೆ ಎಂದಿನಂತೆ ಮೊದಲ ಸ್ಥಾನವನ್ನು ಗಳಿಸಿದೆ. ಕಳೆದ ವರ್ಷ ಶೇ. 90. 71 ಫಲಿತಾಂಶ ಗಳಿಸುವ ಮೂಲಕ ಮೊದಲ ಸ್ಥಾನ ಗಳಿಸಿದ್ದ ದಕ್ಷಿಣ ಕನ್ನಡ ಜಿಲ್ಲೆ ಈ ಬಾರಿಯೂ 88.02 ರಷ್ಟು ಫಲಿತಾಂಶ ದಾಖಲಿಸುವ ಮೂಲಕ ಮೊದಲ ಸ್ಥಾನವನ್ನು ಈ ವರ್ಷವೂ ತನ್ನದಾಗಿಸಿಕೊಂಡಿದೆ.
-
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್












Click it and Unblock the Notifications