ಬಳ್ಳಾರಿ ಬಿರು ಬಿಸಿಲಿನ ಕ್ಷೇತ್ರ ಪರಿಚಯ
ಬಳ್ಳಾರಿ ಎಂದರೆ ಬಿಸಿಲು, ಬಳ್ಳಾರಿ ಎಂದರೆ ಗಣಿಧಣಿಗಳು, ಚುನಾವಣೆ ಸಂದರ್ಭದಲ್ಲಿ ಗರಿ ಗರಿ ಗಾಂಧಿನೋಟು ಅದಕ್ಕೆ ಮೆತ್ತಿದ ಕೆಂಪುಧೂಳು ಎಂದಷ್ಟೇ ಎಲ್ಲರಿಗೂ ಹೊರಗಡೆಯಿಂದ ಕಾಣಿಸುತ್ತದೆ. ಆದರೆ, ಬಳ್ಳಾರಿ, ಕನ್ನಡ ನಾಡಿನ ಪ್ರಮುಖ ವ್ಯಾಪಾರಿ ಕೇಂದ್ರ. ರಾಜಕೀಯವಾಗಿ 'ಕೈ' ಪಾಳಯದ ಆಡ್ಡವಾಗಿ ಬೆಳೆದಿದ್ದ ಬಳ್ಳಾರಿಯನ್ನು ಗಾಲಿ ಜನಾರ್ದನ ರೆಡ್ಡಿ ಅಂಡ್ ಕೋ ಬಿಜೆಪಿ ಕಡೆಗೆ ವಾಲುವಂತೆ ಮಾಡಿದ್ದು ದೊಡ್ಡ ಸಾಧನೆ.
ಗಣಿ ಧೂಳು, ವಿಶ್ವ ಖ್ಯಾತ ಸಿದ್ದ ಉಡುಪು ಕೇಂದ್ರಗಳಿಗೆ ಸಿಗದ ಮನ್ನಣೆ, ಬಳ್ಳಾರಿ ಸೇರಿದಂತೆ ನಗರಗಳಲ್ಲಿನ ಕುಡಿಯುವ ನೀರಿನ ಸಮಸ್ಯೆ, ಹಿಂದುಳಿದ ಜಿಲ್ಲೆಗಳ ಪಟ್ಟಿ ಜೊತೆಗೆ ಅತಿವೃಷ್ಟಿಯ ಪ್ರಹಾರ. ಶೈಕ್ಷಣಿಕವಾಗಿ ಒಂದೆರಡು ವಿವಿಗಳನ್ನು ಹೊಂದಿರುವುದು ಬಿಟ್ಟರೆ ಸಾಕ್ಷರತೆ ಪ್ರಮಾಣ ಈಗಲೂ ಮೇಲಕ್ಕೆದ್ದಿಲ್ಲ.
ಕೃಷಿ ಬಳ್ಳಾರಿ ಜಿಲ್ಲೆಯ ಮುಖ್ಯ ವೃತ್ತಿ. ಕೃಷಿಗೆ ನೀರಿನ ಸರಬರಾಜು ತುಂಗಭದ್ರಾ ನದಿ ಮತ್ತು ಹೊಸಪೇಟೆಯಲ್ಲಿನ ತುಂಗಭದ್ರಾ ಅಣೆಕಟ್ಟಿನಿಂದ ಆಗುತ್ತದೆ. ಇಲ್ಲಿ ಬೆಳೆಯಲ್ಪಡುವ ಮುಖ್ಯ ಬೆಳೆಗಳು ಹತ್ತಿ, ಜೋಳ, ನೆಲಗಡಲೆ, ಭತ್ತ, ಸೂರ್ಯಕಾಂತಿ.
ಚಾರಿತ್ರಿಕವಾಗಿ, ಬಳ್ಳಾರಿ ಜಿಲ್ಲೆ ಪ್ರಾಮುಖ್ಯತೆಗೆ ಬಂದದ್ದು ವಿಜಯನಗರ ಸಾಮ್ರಾಜ್ಯದ ಕಾಲದಲ್ಲಿ. ಇದಕ್ಕೆ ಮೊದಲು ಈ ಪ್ರದೇಶ ಶಾತವಾಹನ, ಕಲ್ಯಾಣಿ ಚಾಲುಕ್ಯರು, ಕದಂಬರು, ಸೇವುಣರು ಮತ್ತು ಹೊಯ್ಸಳರ ನಿಯಂತ್ರಣದಲ್ಲಿತ್ತು. ವಿಜಯನಗರ ಸಾಮ್ರಾಜ್ಯ ಬಳ್ಳಾರಿ ಜಿಲ್ಲೆಯಲ್ಲೇ ರಾಜಧಾನಿಯನ್ನು ಹೊಂದಿದ್ದರಿಂದ ಆ ಸಮಯದಲ್ಲಿ ಈ ಜಿಲ್ಲೆ ಪ್ರಾಮುಖ್ಯತೆಗೆ ಬಂದಿತು. ಬ್ರಿಟಿಷ್ ಆಡಳಿತದ ಕಾಲದಲ್ಲಿ ಮದರಾಸು ಪ್ರಾಂತ್ಯಕ್ಕೆ ಸೇರಿದ್ದ ಬಳ್ಳಾರಿ ಜಿಲ್ಲೆ 1953 ರಲ್ಲಿ ಮೈಸೂರು ರಾಜ್ಯಕ್ಕೆ ವರ್ಗಾಯಿಸಲ್ಪಟ್ಟಿತು.

ವಿಧಾನಸಭಾ ಕ್ಷೇತ್ರಗಳು: ಹಡಗಲಿ, ಹಗರಿಬೊಮ್ಮನಹಳ್ಳಿ, ವಿಜಯನಗರ, ಕಂಪ್ಲಿ, ಸಿರುಗುಪ್ಪ, ಸಂಡೂರು, ಕೂಡ್ಲಿಗಿ
ನೈಸರ್ಗಿಕ ಖನಿಜ ಸಂಪತ್ತು: ಜಿಲ್ಲೆಯಲ್ಲಿ ಕಬ್ಬಿಣ, ಮ್ಯಾಂಗನೀಸ್, ತಾಮ್ರ ಮತ್ತು ಸೀಸದ ಗಣಿಗಳು ಸಾಕಷ್ಟಿವೆ.
ಪ್ರಮುಖ ಭಾಷೆ: ಕನ್ನಡ, ತೆಲುಗು, ಲಂಬಾಣಿ
ಪ್ರಮುಖ ಜನಾಂಗ: ಹಿಂದುಳಿದ ಜಾತಿ ವರ್ಗ, ಪಂಗಡಗಳ ಮತದಾರರೇ ಪ್ರಮುಖವಾಗಿದ್ದಾರೆ, ರೆಡ್ಡಿಗಳು, ಲಂಬಾಣಿ ನಾಯಕರು, ಅಲ್ಪಸಂಖ್ಯಾರ ವೋಟ್ ಬ್ಯಾಂಕ್ ಕೂಡಾ ಶಕ್ತಿಯುತವಾಗಿದೆ.
ಈ ಜಿಲ್ಲೆಯಲ್ಲಿ 07 ತಾಲ್ಲೂಕುಗಳಿದ್ದು, ಹೊಸಪೇಟೆ ತಾಲೂಕು ವಿಧಾನಸಭಾ ಕ್ಷೇತ್ರವಾಗಿಲ್ಲ.
ಸಾರಿಗೆ: 2 ರಾಷ್ಟೀಯ ಹೆದ್ದಾರಿಗಳಿದೆ. ರೈಲ್ವೆ ಹಾದಿ ನಿರ್ಮಾಣವಾಗಿದೆ. ಖಾಸಗಿ ವಿಮಾನ ನಿಲ್ದಾಣ ಜೊತೆ ಸಣ್ಣ ವಿಮಾನ ನಿಲ್ದಾಣ ಇದೆ. ಪೂರ್ಣ ಪ್ರಮಾಣದ ವಿಮಾನ ನಿಲ್ದಾಣದ ಅಗತ್ಯವಿದೆ.
ಒಟ್ಟು ಮತದಾರರು: 1.72 ಲಕ್ಷ ಎಸ್ಟಿ: 40 ಸಾವಿರ ಎಸ್ಸಿ: 35 ಸಾವಿರ ಲಿಂಗಾಯತ: 28 ಸಾವಿರ ಕುರುಬ: 24 ಸಾವಿರ ಮುಸ್ಲೀಂ: 30 ಸಾವಿರ ಬಲಿಜ, ಬ್ರಾಹ್ಮಣ, ರೆಡ್ಡಿ, ಒಕ್ಕಲಿಗ, ಈಡಿಗ, ಬೋವಿ ಸೇರಿ ಒಟ್ಟಾರೆ: 15 ಸಾವಿರ. ಹೀಗಾಗಿ ಲಿಂಗಾಯತ, ಕುರುಬ ಉಳಿದ ಮತಗಳನ್ನು ಸೆಳೆಯುವುದರ ಜೊತೆಗೆ ಮುಸ್ಲಿಂ ಮತಗಳನ್ನು ಒಗ್ಗೂಡಿ 90 ಸಾವಿರ ಜನರ ಮತ ಗಳಿಕೆ ಎಲ್ಲಾ ಪಕ್ಷಗಳಿಗೆ ಮುಖ್ಯವಾಗಿದೆ.
ನೀರಿನ ಆಸರೆ: ತುಂಗಾ, ಭದ್ರಾ,
ಪ್ರವಾಸಿ ತಾಣಗಳು : ಹಂಪೆ, ತುಂಗ ಭದ್ರಾ ಡ್ಯಾಂ
ಪ್ರಮುಖ ವ್ಯಕ್ತಿಗಳು: ರಾಷ್ಟ್ರೀಯ ಖ್ಯಾತವೆತ್ತ ನಟ, ಗಾಯಕ, ಗಮಕಿಗಳಾಗಿದ್ದಂತಹ ದೊಡ್ಡನಗೌಡರಿಗರ ಜನ್ಮ ನೀಡಿದ, ಕಾರ್ಯಭೂಮಿಯಾಗಿದ್ದ ಸ್ಥಳ. ಗಮಕ ಕಲಾನಿಧಿ ಜೋಳದರಾಶಿ ದೊಡ್ಡನಗೌಡರ ಮನೆ ಅವರ ಗಾಯನದ ಧ್ವನಿಸುರುಳಿಗಳು ಪ್ರಸಿದ್ಧ
ಹಡಗಲಿ: ಬಿ ಚಂದ್ರ ನಾಯ್ಕ(ಬಿಜೆಪಿ) 91,132 ಮತಗಳು
ಹಗರಿಬೊಮ್ಮನಹಳ್ಳಿ: ಕೆ ನೇಮರಾಜ್ ನಾಯಕ್(ಬಿಜೆಪಿ) 1,14,072
ವಿಜಯನಗರ: ಆನಂದ್ ಸಿಂಗ್ (ಬಿಜೆಪಿ) 1,08,097
ಬಳ್ಳಾರಿ ನಗರ: ಜಿ ಸೋಮಶೇಖರ ರೆಡ್ಡಿ 1.15.631
ಬಳ್ಳಾರಿ ಗ್ರಾಮಾಂತರ : ಶ್ರೀರಾಮುಲು (ಅಂದು ಬಿಜೆಪಿ) 1,10,239
ಕಂಪ್ಲಿ: ಟಿಎಚ್ ಸುರೇಶ್ ಬಾಬು(ಬಿಜೆಪಿ) 1,20,474
ಸಿರುಗುಪ್ಪ: (ಎಸ್ ಟಿ) ಸೋಮಲಿಂಗಪ್ಪ ಎಂಎಸ್(ಬಿಜೆಪಿ) 1,15,020
ಸಂಡೂರು : (ಎಸ್ ಟಿ) ಇ ತುಕಾರಮ್ (ಕಾಂಗ್ರೆಸ್) 1,06,235
ಕೂಡ್ಲಿಗಿ : (ಎಸ್ ಟಿ) ಬಿ ನಾಗೇಂದ್ರ(ಬಿಜೆಪಿ) 1,12,203
ಕ್ಷೇತ್ರದ ಸಮಸ್ಯೆಗಳ ಕಿರು ಪರಿಚಯ:
* ವಿಶ್ವ ಖ್ಯಾತ ಸಿದ್ದ ಉಡುಪು ಕೇಂದ್ರಗಳಿಗೆ ಸಿಗದ ಮನ್ನಣೆ
* ಗಣಿ ಮುಚ್ಚಿದ್ದರಿಂದ ಉದ್ಯೋಗ ಸಿಗದೆ ಕಂಗಾಲಾದ ಕಾರ್ಮಿಕರು
* ಮಿತಿ ಮೀರದ ಗಣಿಗಾರಿಕೆಯಿಂದ ನಾಶವಾದ ಪರಿಸರ, ವಾತಾವರಣ
* ಬಳ್ಳಾರಿ ಸೇರಿದಂತೆ ನಗರ ಪ್ರದೇಶಗಳಲ್ಲಿನ ಕುಡಿಯುವ ನೀರಿನ ಬವಣೆ
* ಶೈಕ್ಷಣಿಕವಾಗಿ ಹಿಂದುಳಿದ ಜನಾಂಗಕ್ಕೆ ಸಿಗದ ಮಾನ್ಯತೆ
* ಶಾಶ್ವತವಾದ ವಿಮಾನ ನಿಲ್ದಾಣದ ಬೇಡಿಕೆ ಈಡೇರಿಲ್ಲ. ಸಾರಿಗೆ ಸಂಪರ್ಕ ಸಮರ್ಪಕವಾಗಿಲ್ಲ
-
Sachin Tendulkar: ಅಭಿಷೇಕ್ ಶರ್ಮಾಗೆ ಕ್ರಿಕೆಟ್ ದೇವರು ಸಚಿನ್ ತೆಂಡ್ಯೂಲ್ಕರ್ ವಿಶೇಷ ಸಂದೇಶ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
ಟೀಕೆಗಳು ಸಾಯುತ್ತವೆ, ಕೆಲಸಗಳು ಉಳಿಯುತ್ತವೆ ಎಂಬ ಮಾತಿನಂತೆ ನಡೆದುಕೊಂಡ ಯುವರಾಜ್ ಸಿಂಗ್ ಶಿಶ್ಯ ಅಭಿಷೇಕ್ ಶರ್ಮಾ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Property: ಬೆಂಗಳೂರಿನ 510 ಕೋಟಿ ಮೌಲ್ಯದ 14 ಎಕರೆ ಭೂಮಿ ವಶಕ್ಕೆ ಪಡೆದ ಜಿಬಿಎ, ಕಾರಣವೇನು -
Jaggery: ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್, ಬಣ್ಣ, ಸಕ್ಕರೆ ಮಿಶ್ರಣ: ಪರಿಶೀಲನೆ ಮಾಡುವ ಸರಳ ವಿಧಾನಗಳು -
ಟಿ20 ವಿಶ್ವಕಪ್ 2026 ಭಾರತದ ಮುಡಿಗೆ: ಬಾಲ ಮುದುರಿಕೊಂಡ 'ಸೈಲೆಂಟ್' ಸ್ಯಾಂಟ್ನರ್












Click it and Unblock the Notifications