ಕೃಷ್ಣರಾಜ : ರಾಮದಾಸ್ಗೆ ಟಕ್ಕರ್ ಕೊಡೋರು ಯಾರು?

ರಾಜಕೀಯ ಮಹತ್ವ : ಮೈಸೂರು ಅರಮನೆ ಇರುವ ಕೃಷ್ಣರಾಜ ಕ್ಷೇತ್ರವನ್ನು ಸಚಿವ ರಾಮದಾಸ್ ಮೂರು ಬಾರಿ ಪ್ರತಿನಿಧಿಸಿದ್ದಾರೆ. ನಾಲ್ಕು ಬಾರಿ ಚುನಾವಣೆಗೆ ಸ್ಪರ್ಧಿಸಿದ್ದ ಇವರು ಒಂದು ಬಾರಿ ಸೋತಿದ್ದಾರೆ.
ಪ್ರಮುಖ ಸ್ಪರ್ಧಿಗಳು : ಸಚಿವ ರಾಮದಾಸ್ ಬಿಜೆಪಿ ಅಭ್ಯರ್ಥಿ. ಜೆಡಿಎಸ್ನಿಂದ ಕೆ. ವಾಸು, ಕಾಂಗ್ರೆಸ್ನಿಂದ ಮಾಜಿ ಶಾಸಕ ಎಂ.ಕೆ. ಸೋಮಶೇಖರ್ ಹಾಗೂ ರಘು ಆಚಾರ್ ಆಕಾಂಕ್ಷಿಗಳು. ಕೆಜೆಪಿಯಿಂದ ಹೆಚ್.ವಿ ರಾಜೀವ್ ಸ್ಪರ್ಧಿ.
ಗೆಲುವಿನ ಲೆಕ್ಕಾಚಾರ : ಬ್ರಾಹ್ಮಣರು ತಮ್ಮ ಬೆನ್ನಿಗೆ ಸಂಪೂರ್ಣವಾಗಿ ನಿಲ್ಲೋ ವಿಶ್ವಾಸ ಹಾಗೂ ಸಚಿವರಾಗಿ ತಾವು ಮಾಡಿದ ಅಭಿವೃದ್ಧಿ ಕೆಲಸಗಳು ತಮ್ಮ ಕೈ ಹಿಡಿಯಬಹುದು ಎಂಬ ನಿರೀಕ್ಷೆ ರಾಮದಾಸ್ರಲ್ಲಿದೆ. ಆಡಳಿತ ವಿರೋಧಿ ಅಲೆಯ ಲಾಭ ಹಾಗೂ ಬ್ರಾಹ್ಮಣ ಸಮುದಾಯದ ಎಚ್.ವಿ. ರಾಜೀವ್ ಕೆಜೆಪಿ ಅಭ್ಯರ್ಥಿಯಾಗೋ ಮೂಲಕ ಬಹುಸಂಖ್ಯಾತ ಬ್ರಾಹ್ಮಣ ಮತದಾರರನ್ನು ವಿಭಜಿಸುವ ಹಿನ್ನೆಲೆಯಲ್ಲಿ ತಮಗೆ ಗೆಲುವ ಸಿಗಬಹುದು ಎಂಬುದು ಕಾಂಗ್ರೆಸ್ ಲೆಕ್ಕ. ಇನ್ನೂ ಕೆಜೆಪಿ ಅಭ್ಯರ್ಥಿ ಕೂಡ ಲಿಂಗಾಯತರ ಮತಗಳು ಮತ್ತು ಬ್ರಾಹ್ಮಣರ ಮತಗಳು ಹೆಚ್ಚು ಸಿಗುವ ಲೆಕ್ಕ ಮಾಡಿದ್ದಾರೆ. ಅಲ್ಲದೆ, ಜೆಡಿಎಸ್ ಅಭ್ಯರ್ಥಿ ಪರಿಶಿಷ್ಟ ಜಾತಿಗೆ ಸೇರಿದವರಾಗಿರೋ ಕಾರಣ ಕಾಂಗ್ರೆಸ್ ಓಟ್ ಬ್ಯಾಂಕ್ಗೆ ಅವರು ಕೈ ಹಾಕೋ ಹಿನ್ನೆಲೆಯಲ್ಲಿ ತಮಗೆ ಗೆಲುವ ಅನ್ನೋದು ಕೆಜೆಪಿ ಲೆಕ್ಕ.
ಸ್ಥಳೀಯ ಸಂಸ್ಥೆ ಚುನಾವಣೆ : ಒಟ್ಟು ವಾರ್ಡ್ ಸಂಖ್ಯೆ - 22. ಕಾಂಗ್ರೆಸ್ಗೆ - 37,380 ಮತ, ಬಿಜೆಪಿ - 36,982 ಮತಗಳು, ಜೆಡಿಎಸ್ - 19,505 ಮತಗಳು, ಕೆಜೆಪಿ - 14, 144 ಮತಗಳು. 2007ರಲ್ಲಿ 15 ಸ್ಥಾನಗಳನ್ನು ಬಿಜೆಪಿ ಗೆದ್ದಿತ್ತು. ಆದ್ರೆ ಈ ಬಾರಿ ಕೆವಲ 7 ಸ್ಥಾನಗಳಿಸಿದೆ.
ಹಾಲಿ ಶಾಸಕ - ಎಸ್.ಎ ರಾಮದಾಸ್(ಬಿಜೆಪಿ)
ಸೋತ ಅಭ್ಯರ್ಥಿ - ಎಂ.ಕೆ. ಸೋಮಶೇಖರ್(ಕಾಂಗ್ರೆಸ್)
ಗೆಲುವಿನ ಅಂತರ 20,000 ಮತಗಳು
ಜಾತಿವಾರು ಮತದಾರರು : ಕುರುಬರು - 25 ಸಾವಿರ, ಬ್ರಾಹ್ಮಣರು - 60 ಸಾವಿರ, ಲಿಂಗಾಯಿತರು - 40 ಸಾವಿರ, ಒಕ್ಕಲಿಗರು - 22 ಸಾವಿರ, ಎಸ್ಸಿ - 38 ಸಾವಿರ, ಎಸ್ಟಿ -18 ಸಾವಿರ, ಕ್ರಿಶ್ಚಿಯನ್ನರು - 6 ಸಾವಿರ, ಮುಸ್ಲಿಂ -13 ಸಾವಿರ, ಇತರೆ - 18 ಸಾವಿರ.
ನೀವೇ ಆಗಿರಿ ಕರ್ನಾಟಕದ ಗುರು | ಮತ ಹಾಕ್ತೀನಂತ ಪ್ರಮಾಣ ಮಾಡಿ
-
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
New Railway Line: ಗದಗ-ಹೊಟಗಿ ರೈಲು ಡಬ್ಲಿಂಗ್ ಪೂರ್ಣ, ಮಹಾರಾಷ್ಟ್ರವರೆಗೂ ಸಂಚಾರ ಸುಧಾರಣೆ












Click it and Unblock the Notifications