ದೆಹಲಿಯಲ್ಲಿ ಕಾಂಗ್ರೆಸ್ ಪಟಾಕಿ, ಸಿದ್ದು ಕಣ್ಣಲ್ಲಿ ಹೊಳಪು

ಎಲ್ಲಕ್ಕಿಂತ ಹೆಚ್ಚಾಗಿ ಬೀಗುತ್ತಿರುವುದು ವರುಣಾ ಕ್ಷೇತ್ರದಿಂದ ಸ್ಪರ್ಧಿಸಿರುವ ಕಾಂಗ್ರೆಸ್ಸಿನ ಮುಖ್ಯಮಂತ್ರಿ ಪಟ್ಟದ ಪ್ರಬಲ ಆಕಾಂಕ್ಷಿ ಸಿದ್ದರಾಮಯ್ಯನವರು ಮತ್ತು ಅವರ ಬೆಂಬಲಿಗರು. ಇದಕ್ಕೆ ಎರಡು ಕಾರಣಗಳಿವೆ. ಮೊದಲನೇಯದು ಅವರು ವರುಣಾ ಕ್ಷೇತ್ರದಲ್ಲಿ ಭಾರೀ ಮುನ್ನಡೆ ಸಾಧಿಸಿದ್ದಾರೆ. ಎರಡನೇಯದಾಗಿ, ಅವರಿಗೆ ಅಡ್ಡಗಾಲಾಗಿರುವ ಕೆಪಿಸಿಸಿ ಅಧ್ಯಕ್ಷ ಡಾ. ಜಿ. ಪರಮೇಶ್ವರ್ ಅವರು ಕೊರಟಗೆರೆಯಲ್ಲಿ ಹಿನ್ನಡೆ ಕಂಡಿರುವುದು.
ಕಾಂಗ್ರೆಸ್ ಏಕ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿ, ಸಿದ್ದರಾಮಯ್ಯ ಅವರು ವರುಣಾದಲ್ಲಿ ಜಯಭೇರಿ ಬಾರಿಸಿ, ಪರಮೇಶ್ವರ್ ಅವರು ಮಣ್ಣುಮುಕ್ಕಿದರೆ, ಸಿದ್ದರಾಮಯ್ಯನವರ ಮುಖ್ಯಮಂತ್ರಿಯಾಗುವ ಕನಸು ನನಸಾದಂತೆಯೆ. ಸದ್ಯಕ್ಕಂತೂ ಬಿಜೆಪಿ ಮತಗಳನ್ನು ಕೆಜೆಪಿ ಒಡೆದುಹಾಕಿರುವುದು ಕಾಂಗ್ರೆಸ್ಸಿನ ರೊಟ್ಟಿ ಜಾರಿ ತುಪ್ಪದಲ್ಲಿ ಬಿದ್ದಂತಾಗಿದೆ. ಕಾಂಗ್ರೆಸ್ಸಿನಲ್ಲಿ ಮುಖ್ಯಮಂತ್ರಿ ಪಟ್ಟದ ಆಕಾಂಕ್ಷಿಗಳು ಹೊಸಬಟ್ಟೆಗಳನ್ನು ಈಗಾಗಲೆ ರೆಡಿ ಮಾಡಿಟ್ಟುಕೊಂಡಿದ್ದಾರೆ.
ಕಾಂಗ್ರೆಸ್ ಭಾರೀ ಮುನ್ನಡೆ ಸಾಧಿಸಿದ್ದರೂ, ಬಿಜೆಪಿ ಮತ್ತು ಜೆಡಿಎಸ್ ಜಂಟಿಯಾಗಿ ಕಾಂಗ್ರೆಸ್ಸಿಗೆ ಹತ್ತತ್ತಿರ ಸಾಗುತ್ತಿವೆ. ಅನಂತ್ ಕುಮಾರ್ ಅವರನ್ನು ಹಿಂಬಾಗಿಲ ಮಾತುಕತೆ ನಡೆಸಲು ಬಿಜೆಪಿ ನಿಯೋಜಿಸಿದೆ. ಕಾಂಗ್ರೆಸ್ಸಿಗೆ ಬಹುಮತ ದೊರೆಯುವುದಾ? ಬಹುಮತ ದೊರೆಯದಿದ್ದರೆ ಕೆಜೆಪಿ ಕೈಜೋಡಿಸುವುದಾ? ಅಥವಾ ಕಾಂಗ್ರೆಸ್ಸನ್ನು ಹಣಿದುಹಾಕಲು ಬಿಜೆಪಿ ಜೊತೆ ಜೆಡಿಎಸ್ ಮೈತ್ರಿ ಬೆಳೆಸುವುದಾ?
-
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Sanju Samson Father: ಅಂದು ಮಗನನ್ನು ಅಲೆದಾಡಿಸಿದವರು ಇಂದು ಕ್ಷಮೆ ಕೇಳುತ್ತಿದ್ದಾರೆ: ಸಂಜು ಸ್ಯಾಮ್ಸನ್ ತಂದೆಯ ಭಾವುಕ ನುಡಿ












Click it and Unblock the Notifications