ಕುಂದಾಪುರ ವಾಜಪೇಯಿ ಹಾಲಾಡಿ ದಿಗ್ವಿಜಯ
ಬೆಂಗಳೂರು, ಮೇ.8: ಕುಂದಾಪುರದ ವಾಜಪೇಯಿ ಎಂದೇ ಖ್ಯಾತರಾದ ಹಾಲಾಡಿ ಶ್ರೀನಿವಾಸ ಶೆಟ್ಟಿ ಅವರಿಗೆ ನಿರೀಕ್ಷೆಯಂತೆ ಗೆಲುವು ಲಭಿಸಿದೆ. ಈ ಮೂಲಕ ಬಿಜೆಪಿಗೆ ಎರಡನೇ ಹೊಡೆತ ಬಿದ್ದಿದೆ. ಶಕುಂತಲಾ ಶೆಟ್ಟಿ ಗೆಲುವಿನ ನಂತರ ಹಾಲಾಡಿ ಶೆಟ್ಟಿ ಗೆಲುವು ಬಿಜೆಪಿಗೆ ಮರ್ಮಾಘಾತವಾಗಿದೆ. ಬಿಜೆಪಿ ಹೊರ ಹಾಕಿದ ಅಭ್ಯರ್ಥಿಗಳು ತಿರುಗಿ ಬಿದ್ದು ಗೆಲುವಿನ ಬಾವುಟ ಹಿಡಿದಿದ್ದಾರೆ.
ಕಾಂಗ್ರೆಸ್ ನಿಂದ ಮಲ್ಯಾಡಿ ಶಿವರಾಮ್ ಶೆಟ್ಟಿ ಹಾಗೂ ಬಿಜೆಪಿಯಿಂದ ಕಿಶೋರ್ ಕುಮಾರ್ ಸ್ಪರ್ಧೆಯಲ್ಲಿದ್ದರೂ ಹಾಲಾಡಿ ಅವರ ಸಮಕ್ಕೆ ಹೋರಾಟ ನೀಡಲು ವಿಫಲರಾಗಿದ್ದಾರೆ. ಹಾಲಾಡಿ ಅವರು ಭಾರಿ ಅಂತರದಿಂದ ಜಯ ಗಳಿಸಿದ್ದಾರೆ. [ 2013 ಫಲಿತಾಂಶ: ಗೆದ್ದವರು, ಸೋತವರ ವಿವರ]
ವಿಧಾನಸಭೆ ಚುನಾವಣೆಯಲ್ಲಿ ಕುಂದಾಪುರ ಗೆಲ್ಲುವುದಕ್ಕೆ ಸಮರ್ಥ ಅಭ್ಯರ್ಥಿ ಸಿಗದೆ ಪರದಾಡುತ್ತಿರುವ ಬಿಜೆಪಿ ಹಾಗೂ ಕಾಂಗ್ರೆಸ್ ಒದ್ದಾಡಿತ್ತು. ಈ ಸಂದರ್ಭದಲ್ಲಿ ಜೆಡಿಎಸ್ ತನ್ನ ಕಾರ್ಯತಂತ್ರ ಸಿದ್ಧಿಸಿಕೊಂಡಿತ್ತು. ಹ್ಯಾಟ್ರಿಕ್ ವಿಜೇತ ಹಾಲಾಡಿ ಶ್ರೀನಿವಾಸ ಶೆಟ್ಟಿ ವಿರುದ್ಧ ಸಮರ್ಥ ಅಭ್ಯರ್ಥಿಯನ್ನು ನಿಲ್ಲಿಸಲು ಕಷ್ಟಸಾಧ್ಯ ಎಂಬುದರನ್ನು ಅರಿತ ಜೆಡಿಎಸ್ ಇಬ್ಬರ ಜಗಳದ ನಡುವೆ ಲಾಭ ಪಡೆದುಕೊಂಡಿತ್ತು.
1999ರಲ್ಲಿ ರಾಜಕೀಯ ಜೀವನ ಆರಂಭಿಸಿದ ಹಾಲಾಡಿ ಶ್ರೀನಿವಾಸ ಶೆಟ್ಟಿ ಅವರು ಕಾಂಗ್ರೆಸ್ ಪ್ರಭಾವಿ ನಾಯಕ ಪ್ರತಾಪಚಂದ್ರ ಶೆಟ್ಟಿ ಅವರನ್ನು ಸೋಲಿಸಿದರು. 2004ರಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಕುಮಾರ್ ಶೆಟ್ಟಿ ಅವರನ್ನು ಹಾಗೂ 2008ರನ್ನು ಕೆ ಜಯಪ್ರಕಾಶ್ ಹೆಗ್ಡೆ ಅವರನ್ನು 25,083 ಅಂತರದಿಂದ ಸೋಲಿಸಿ ಹ್ಯಾಟ್ರೆಕ್ ಸಾಧಿಸಿದರು. ಹಾಲಾಡಿ ಅವರು 1,24,716 ಮತ ಗಳಿಸಿದ್ದರು.
-
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಇರಾನ್ ಪರಮಾಣು ವಿಜ್ಞಾನಿ ಕಥೆ ಮುಗಿಸಿದ ಇಸ್ರೇಲ್, ಮತ್ತಷ್ಟು ತಿಕ್ಕಾಟ ಶುರು | Operation Roaring Lion -
ಹೊಸೂರು ವಿಮಾನ ನಿಲ್ದಾಣ: ಬೆಂಗಳೂರು ಸಮೀಪ 2,979 ಎಕರೆ ಭೂಮಿ ಸ್ವಾಧೀನ; ಕನ್ನಡದಲ್ಲೇ ಮಾತನಾಡಿದ ತಮಿಳುನಾಡು ಶಾಸಕ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
Rashmika Mandanna: ಆ ಆಡಿಯೋ, ವಿಷಯವನ್ನ 24 ಗಂಟೆಯೊಳಗೆ ಡಿಲೀಟ್ ಮಾಡದಿದ್ದರೆ ಕಾನೂನು ಕ್ರಮ ಎಂದ ರಶ್ಮಿಕಾ ಮಂದಣ್ಣ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
ವಿಶ್ವಗುರು ಬಸವಣ್ಣ ಮತ್ತು ಅಕ್ಕಮಹಾದೇವಿ ಬಗ್ಗೆ ಅವಹೇಳನಕಾರಿ ಪೋಸ್ಟ್: ಆರೋಪಿ ಬಂಧನಕ್ಕೆ ಆಗ್ರಹ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ












Click it and Unblock the Notifications