ನಟಿ ಪೂಜಾಗಾಂಧಿಗೆ ಎರಡೂ ಕೈಕೊಟ್ಟ ಮತದಾರ
ರಾಯಚೂರಿನ ಬಿಸಿಲನ್ನೂ ಲೆಕ್ಕಿಸದೆ ಸಾಕಷ್ಟು ಬೆವರು ಹರಿಸಿದ್ದ ನಟಿ ಪೂಜಾಗಾಂಧಿ ಅವರಿಗೆ ಮತದಾರಪ್ರಭು ಕೈ ಕೊಟ್ಟಿದ್ದಾನೆ. ಬಿಎಸ್ಆರ್ ಕಾಂಗ್ರೆಸ್ ಪಕ್ಷದಿಂದ ಸ್ಪರ್ಧಿಸಿದ್ದ ಪೂಜಾಗಾಂಧಿ ಅವರು ನಾಲ್ಕನೇ ಸ್ಥಾನಕ್ಕೆ ತೃಪ್ತಿಪಡಬೇಕಾಯಿತು. ಅವರು ಇದೇ ಮೊದಲ ಬಾರಿಗೆ ರಾಜಕೀಯ ಪರೀಕ್ಷೆಗೆ ಮುಂದಾಗಿದ್ದರು. ಆದರೆ ಮೊದಲ ಹೆಜ್ಜೆಯಲ್ಲೇ ಮುಗ್ಗರಿಸಿದ್ದಾರೆ.
ಜೆಡಿಎಸ್ ನ ಡಾ. ಎಸ್. ಶಿವರಾಜ್ ಪಾಟೀಲ್ ಗೆದ್ದಿದ್ದಾರೆ. ಎರಡನೇ ಸ್ಥಾನದಲ್ಲಿ ಕಾಂಗ್ರೆಸ್ ನ ಸೈಯದ್ ಯಾಸಿನ್ ಅವರಿದ್ದರೆ ಮೂರನೇ ಸ್ಥಾನದಲ್ಲಿ ಬಿಜೆಪಿಯ ತ್ರಿವಿಕ್ರಮ್ ಜೋಶಿ ಇದ್ದಾರೆ. ಪೂಜಾಗಾಂಧಿ ಅವರು ಗೆದ್ದೇ ಗೆಲ್ಲುತ್ತೇನೆ ಎಂಬ ಉತ್ಸಾಹದಲ್ಲಿದ್ದರು. ಆದರೆ ಮತದಾರರು ಅವರ ಉತ್ಸಾಹಕ್ಕೆ ತಣ್ಣೀರೆರಚಿದ್ದಾರೆ.

ಪ್ರಚಾರ ಸಂದರ್ಭದಲ್ಲಿ ಪೂಜಾಗಾಂಧಿ ಅವರು ತಾನೂ ಸೋತರು ಅಷ್ಟೇ ಗೆದ್ದರೂ ಅಷ್ಟೇ ರಾಯಚೂರು ಜನರ ಸೇವೆ ಮಾಡುತ್ತೇನೆ ಎಂದಿದ್ದರು. ಈಗ ಅವರು ರಾಯಚೂರಿನಲ್ಲೇ ಉಳಿಯುತ್ತಾರೋ ಅಥವಾ ಬೆಂಗಳೂರಿಗೆ ಮರಳುತ್ತಾರೋ ಕಾದುನೋಡಬೇಕು.
ಡಾ.ಎಸ್.ಶಿವರಾಜ್ ಪಾಟೀಲ್ ಮತಗಳು 17759
ಸೈಯದ್ ಯಾಸಿನ್ ಮತಗಳು 14010
ತ್ರಿವಿಕ್ರಮ್ ಜೋಶಿ ಮತಗಳು 1884
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications