ಚಿಂತಾಮಣಿ: ಆಂಧ್ರ ಶೈಲಿ ರಾಜಕಾರಣ, ಪಕ್ಷಗಳು ಇಲ್ಲಿ ಗೌಣ
ಚಿಕ್ಕಬಳ್ಳಾಪುರ ಜಿಲ್ಲಾ ಕೇಂದ್ರವಾದರೂ ಚಿಂತಾಮಣಿ ಪ್ರಮುಖ ವಾಣಿಜ್ಯ ನಗರಿ. ಇದು ಹಿರಿ ಮಗನಿಗಿಂತ ಕಿರಿ ಮಗ ಎತ್ತರ-ಗಾತ್ರ ಬೆಳೆದರೆ ಹೇಗೋ ಹಾಗೆ. ಚಿಂತಾಮಣಿಯು ಜಿಲ್ಲಾ ಕೇಂದ್ರವನ್ನೂ ಮೀರಿ ಬೆಳೆದಿದೆ. ನೆನಪಿರಲಿ, ಇದು ಕೋಲಾರ ಲೋಕಸಭಾ ಕ್ಷೇತ್ರಕ್ಕೆ ಸೇರಿದ್ದು, ಕೋಲಾರ ಜೊತೆಗೆ ಹೆಚ್ಚು ನಂಟು ಹೊಂದಿದೆ. ಕೈವಾರ ನಾರೇಯಣ ತಾತಯ್ಯ ದೇಗುಲ, ಮುರುಗಮಲ್ಲಾ ದರ್ಗಾ ಪ್ರಮುಖ ಧಾರ್ಮಿಕ ಹಾಗೂ ಜಾತ್ಯತೀತ ಕ್ಷೇತ್ರ.
ಚಿಂತಾಮಣಿಯ ಮಾವು ಬಲೇ ರುಚಿಕಟ್ಟು. ಶ್ರೀನಿವಾಸಪುರ ಮಾವಿಗೂ ಇಲ್ಲಿನ ಮಾವಿಗೂ ಪೈಪೋಟಿ. ಒಕ್ಕಲಿಗರ ಪ್ರಾಬಲ್ಯವಿದ್ದು, ಕುಟುಂಬ ರಾಜಕಾರಣ ಮೇಲುಗೈ ಪಡೆದಿದೆ. ಕಾಂಗ್ರೆಸ್ ನಿಂದ ಡಾ.ಎಂ.ಸಿ.ಸುಧಾಕರ್ ಎರಡು ಬಾರಿ ಶಾಸಕರಾದರೆ, ಈಗ ಜೆಡಿಎಸ್ ನಿಂದ ಜೆ.ಕೆ.ಕೃಷ್ಣಾರೆಡ್ಡಿ ಶಾಸಕರಾಗಿದ್ದಾರೆ.
ವಿಧಾನಸಭೆ ಚುನಾವಣೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ | ಯಾವ ಪಕ್ಷಕ್ಕೆಷ್ಟು ಸೀಟು? ನೀವೇ ಊಹಿಸಿ
ಇಲ್ಲಿ ಹಿಂಸಾಚಾರ ಪ್ರಮಾಣ ಹೆಚ್ಚು ಅಂತ ಬಿಂಬಿಸಲಾಗಿದೆ. ಆ ಮಾತಿಗೆ ತಕ್ಕ ಹಾಗೆ ಕಂಬಾಲಪಲ್ಲಿ ದಲಿತರ ಮಾರಣಹೋಮ ಮತ್ತು ಯರ್ರಕೋಟೆಯಲ್ಲಿ ಕಳ್ಳರೆಂದು ಭಾವಿಸಿ ಗ್ರಾಮಸ್ಥರಿಂದ 10 ಜನರ ಹತ್ಯೆ ಮುಂತಾದ ವಿಚಾರಗಳಿಗೆ ಸುದ್ದಿಯೂ ಆಗಿದೆ. ಕೋಲಾರ ಸಂಸದ ಕೆ.ಎಚ್.ಮುನಿಯಪ್ಪ ಸತತ ಏಳು ಬಾರಿ ಗೆಲುವು ಸಾಧಿಸಿದ್ದು, ಈ ವಿಧಾನಸಭಾ ಕ್ಷೇತ್ರದ ಮೇಲೆ ತಮ್ಮ ಹಿಡಿತ ಹೊಂದಿದ್ದಾರೆ.

ಇಲ್ಲಿನ ಕೆಲ ಬಡಾವಣೆಗಳು ಅಭಿವೃದ್ಧಿಯಿಂದ ಸುಧಾರಿಸಿದ್ದು, ಆದರೂ ಇನ್ನಷ್ಟು ಪ್ರಗತಿ ಆಗಬೇಕಿದೆ. ಅಂದಹಾಗೆ, ಸಾಹಿತ್ಯ ಮತ್ತು ಸಾಂಸ್ಕೃತಿಕ ಚಟುವಟಿಕೆಗೆ ಹೆಚ್ಚು ಒತ್ತು ಇರುವ ಕ್ಷೇತ್ರವಿದು. ಭಾರತ ರತ್ನ ಪ್ರೊ ಸಿಎನ್ ಆರ್ ರಾವ್ ಅವರ ತಾತನವರ ಮೂಲ ಇದೇ ಚಿಂತಾಮಣಿ.
ಇಲ್ಲಿನ ಹೋಬಳಿ ಕೇಂದ್ರಗಳು ಸುಧಾರಣೆ ಆಗಬೇಕು ಎಂಬುದು ತುಂಬ ಹಳೇ ಬೇಡಿಕೆ. ಜತೆಗೆ ಸಂಚಾರ ವ್ಯವಸ್ಥೆಯೂ ಇನ್ನೂ ಚೆನ್ನಾಗಿ ಆಗಬೇಕು ಎಂಬುದು ಸ್ಥಳೀಯವಾಗಿರುವ ಬೇಡಿಕೆ. ಇಲ್ಲಿನ ರಾಜಕಾರಣಕ್ಕೆ ಸಮಾಜ ಸೇವೆ ಎಂಬ ಹೊಸ ಬಾಗಿಲು ತೆರೆದಿದ್ದು ಕಳೆದ ಬಾರಿಯ ಚುನಾವಣೆಯಲ್ಲಿ. ಕೆ.ಎಚ್.ಮುನಿಯಪ್ಪ ಅವರೊಂದಿಗಿನ ಎಂ.ಸಿ.ಸುಧಾಕರ್ ವಿರಸ ಬಹಳ ದುಬಾರಿಯಾಯಿತು. ಇದರಿಂದ ನುಕ್ಸಾನು ಆಗಿದ್ದು ಕಾಂಗ್ರೆಸ್ಸಿಗೆ ಹಾಗೂ ಸುಧಾಕರ್ ಗೆ.
ಹಾಗೆ ನೋಡಿದರೆ ಇಲ್ಲಿ ಪಕ್ಷಗಳು ಗೌಣ. ವ್ಯಕ್ತಿನಿಷ್ಠ ರಾಜಕಾರಣ ಮುನ್ನೆಲೆಯಲ್ಲಿದೆ. ಸ್ವಲ್ಪ ಮಟ್ಟಿಗೆ ಆಂಧ್ರ ಶೈಲಿಯ ರಾಜಕಾರಣವನ್ನೂ ಇಲ್ಲಿ ಕಾಣಬಹುದು.
-
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Shivam Dube: ಶಿವಂ ದುಬೆ ಸಾಧನೆಗೆ ಮನಸಾರೆ ಮೆಚ್ಚುಗೆ ಸೂಚಿಸಿದ ಪತ್ನಿ ಅಂಜುಮ್ ಖಾನ್: ಇನ್ಸ್ಟಾ ಪೋಸ್ಟರ್ ಭಾರೀ ವೈರಲ್ -
Fact Check: ಟಿ20 ವಿಶ್ವಕಪ್ ಫೈನಲ್ ಪಂದ್ಯಕ್ಕೂ ಮುನ್ನ ರಾಷ್ಟ್ರಗೀತೆ ವೇಳೆ ಕಣ್ಣೀರಿಟ್ಟ ಕಿವೀಸ್ ಆಟಗಾರ ಇಶ್ ಸೋಧಿ -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ












Click it and Unblock the Notifications