Exit Poll : ಇಂಡಿಯಾ ಟುಡೇ ಫಲಿತಾಂಶ ಕಾಂಗ್ರೆಸ್ಸಿಗೆ ಸ್ಪಷ್ಟ ಬಹುಮತ
ಬೆಂಗಳೂರು, ಮೇ 12: ಕರ್ನಾಟಕ ವಿಧಾನಸಭೆಯ 222 ಸ್ಥಾನಗಳಿಗೆ ಇಂದು ಬೆಳಿಗ್ಗೆ 7 ಗಂಟೆಯಿಂದ ನಡೆದ ಮತದಾನ ಪ್ರಕ್ರಿಯೆ ಶಾಂತಿಯುತವಾಗಿ ಕೊನೆಗೊಂಡಿದೆ. ಇನ್ನೇನಿದ್ದರೂ ಚುನಾವಣೋತ್ತರ ಸಮೀಕ್ಷೆ, ಫಲಿತಾಂಶದ ಕಾಲ.
ಈ ಬಾರಿ ರಾಜ್ಯದಲ್ಲಿ ಒಟ್ಟು 5,00,15,895 (5 ಕೋಟಿ) ಮತದಾರರಿದ್ದರು. ಇದರಲ್ಲಿ 2,53,26,629 ಪುರುಷ ಮತದಾರರಾದರೆ, ಮಹಿಳಾ ಮತದಾರರ ಸಂಖ್ಯೆ 2,46,84,311. ಇನ್ನು 4,955 ತೃತೀಯ ಲಿಂಗಿಗರೂ ರಾಜ್ಯದಲ್ಲಿ ಈ ಬಾರಿ ಮತ ಚಲಾವಣೆಯ ಹಕ್ಕು ಹೊಂದಿದ್ದರು.
2,622 ಅಭ್ಯರ್ಥಿಗಳಿದ್ದು, ಪುರುಷ ಅಭ್ಯರ್ಥಿಗಳು 2,405, ಮಹಿಳೆಯರು 217. ಪಕ್ಷವಾರು: ಬಿಜೆಪಿ 222, ಕಾಂಗ್ರೆಸ್ 220, ಜೆಡಿಎಸ್ 199, ಬಿಎಸ್ಪಿ 18, ಇತರೆ 1963 ಅಭ್ಯರ್ಥಿಗಳ ಭವಿಷ್ಯ ಇದೀಗ ಮತಪೆಟ್ಟಿಗೆಯಲ್ಲಿ ಭದ್ರವಾಗಿದೆ.

2013ರಲ್ಲಿ ಶೇ 71.45ರಷ್ಟು ಮಾತ್ರ ಮತದಾನ ದಾಖಲಾಗಿತ್ತು. ಈ ಬಾರಿ ಸಂಜೆ 5 ಗಂಟೆ ವೇಳೆಗೆ ಶೇಕಡಾ 64 ಮತದಾನವಾಗಿದೆ. ಇನ್ನೂ ಒಂದಷ್ಟು ಜನ ಕ್ಯೂನಲ್ಲಿ ನಿಂತವರು ಮತ ಚಲಾವಣೆ ಮಾಡಲಿದ್ದು ಮತದಾನ ಪ್ರಮಾಣ ಜಾಸ್ತಿಯಾಗುವ ಸಾಧ್ಯತೆ ಇದೆ.
ಇಂಡಿಯಾ ಟುಡೇ - ಆಕ್ಸಿಸ್ ಮೈ ಇಂಡಿಯಾ ಕರ್ನಾಟಕ ಚುನಾವಣೋತ್ತರ ಸಮೀಕ್ಷೆ ನಡೆಸಿದೆ. 222 ಕ್ಷೇತ್ರಗಳಲ್ಲಿ 70,574 ಜನರ ಅಭಿಪ್ರಾಯವನ್ನು ಸಂಗ್ರಹಿಸಿ ಈ ಸರ್ವೆ ನಡೆಸಲಾಗಿದೆ.
ಸಮೀಕ್ಷೆ ಪ್ರಕಾರ,
ಕಾಂಗ್ರೆಸ್: 106 - 118
ಬಿಜೆಪಿ: 79 - 92
ಜೆಡಿಎಸ್ + ಬಿಎಸ್ಪಿ: 22 - 30
ಇತರರು: 1 - 4
ಸ್ಥಾನಗಳನ್ನು ಗೆಲ್ಲಲಿದ್ದಾರೆ.
ಇನ್ನು ಸಮೀಕ್ಷೆಯ ಪ್ರಕಾರ ಕಾಂಗ್ರೆಸ್ ಶೇಕಡಾ 39 ಮತಗಳನ್ನು ಪಡೆಯಲಿದೆ. ಬಿಜೆಪಿ ಶೇಕಡಾ 35 ಮತಗಳನ್ನು ಪಡೆದು ಎರಡನೇ ಸ್ಥಾನ ಮತ್ತು ಜೆಡಿಎಸ್ + ಬಿಎಸ್ಪಿ ಶೇಕಡಾ 17 ಮತಗಳನ್ನು ಪಡೆಯಲಿದೆ. ಇತರರು ಶೇಕಡಾ 9 ಮತಗಳನ್ನು ಹಂಚಿಕೊಳ್ಳಲಿದ್ದಾರೆ.
ಸಮೀಕ್ಷೆ ಪ್ರಕಾರ ಕಾಂಗ್ರೆಸ್ ಸ್ವಂತ ಬಲದ ಮೇಲೆ ಅಧಿಕಾರ ನಡೆಸುವ ಸಾಧ್ಯತೆಗಳು ಕಾಣಿಸುತ್ತಿವೆ.
-
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ವಿರಾಟ್ ಅಸಲಿ ಆಟ ಇನ್ನೂ ಬಾಕಿಯಿದೆ; ಕಿಂಗ್ ಕೊಹ್ಲಿಗೆ ವಿಶೇಷ ಮನವಿ ಮಾಡಿಕೊಂಡ ಅಂಬಟಿ ರಾಯುಡು, ಭಾರೀ ವೈರಲ್ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ -
Prakash Raj Mother passed Away: ನಟ ಪ್ರಕಾಶ್ ರಾಜ್ ತಾಯಿ ಸ್ವರ್ಣಲತಾ ನಿಧನ, ಚಿತ್ರರಂಗದ ಗಣ್ಯರಿಂದ ಸಂತಾಪ












Click it and Unblock the Notifications