Exit Poll : ಇಂಡಿಯಾ ಟಿವಿ ಸಮೀಕ್ಷೆ: ಕಾಂಗ್ರೆಸ್ ದೊಡ್ಡ ಪಕ್ಷ
ಬೆಂಗಳೂರು, ಮೇ 12: ಕರ್ನಾಟಕ ವಿಧಾನಸಭೆಯ 222 ಸ್ಥಾನಕ್ಕಾಗಿ ಮೇ.12 ರಂದು ಮತದಾನ ಪ್ರಕ್ರಿಯೆ ಮುಕ್ತಾಯವಾಗಿದ್ದು. ಈಗ ಚುನಾವಣೋತ್ತರ ಸಮೀಕ್ಷೆ, ಫಲಿತಾಂಶದ ಹೊರಬೀಳತೊಡಗಿದೆ.
ಹಿಂದಿ ವಾಹಿನಿ ಇಂಡಿಯಾ ಟಿವಿ ನಡೆಸಿರುವ ಚುನಾವಣೋತ್ತರ ಸಮೀಕ್ಷೆ ಪ್ರಕಾರ ರಾಜ್ಯದಲ್ಲಿ ಅತಂತ್ರ ವಿಧಾನಸಭೆ ಸೃಷ್ಟಿಯಾಗಲಿದೆ. ಯಾವ ಪಕ್ಷವೂ ನಿಚ್ಚಳ ಬಹುಮತ ಪಡೆದುಕೊಳ್ಳುವುದರಲ್ಲಿ ಸಫಲವಾಗುವುದಿಲ್ಲ ಎಂದು ಅದು ಹೇಳಿದೆ.
ಇಂಡಿಯಾ ಟಿವಿ ಸಮೀಕ್ಷೆ ಪ್ರಕಾರ ಅಧಿಕಾರಾರೂಢ ಕಾಂಗ್ರೆಸ್ 97 ಸ್ಥಾನಗಳನ್ನು ಪಡೆದುಕೊಳ್ಳಲಿದೆ. ವಿರೋಧ ಪಕ್ಷದ ಸ್ಥಾನದಲ್ಲಿದ್ದ ಬಿಜೆಪಿ ಕೂಡ ಮ್ಯಾಜಿಕ್ ಅಂಕಿಯನ್ನು ಮುಟ್ಟುವಲ್ಲಿ ವಿಫಲವಾಗಲಿದೆ. ಪ್ರಧಾನಿ ನರೇಂದ್ರ ಮೋದಿ ಅವರ ಅಬ್ಬರದ ಪ್ರಚಾರದ ನಡುವೆಯೂ ಬಿಜೆಪಿ 87 ಸೀಟುಗಳನ್ನು ಮಾತ್ರ ಪಡೆದುಕೊಳ್ಳಲಿದೆ.

ಈ ಎರಡೂ ಪಕ್ಷಗಳು ಅಧಿಕಾರಕ್ಕೆ ಬರಲು ಜೆಡಿಎಸ್ನ ನೆರವು ಪಡೆಯುವುದು ಅನಿವಾರ್ಯವಾಗಲಿದೆ. ಜೆಡಿಎಸ್ 35 ಕ್ಷೇತ್ರಗಳಲ್ಲಿ ಗೆಲುವು ಕಾಣಲಿದ್ದು, ಸರ್ಕಾರ ರಚನೆಯಲ್ಲಿ ಪ್ರಮುಖ ಪಾತ್ರ ವಹಿಸಲಿದೆ. ಇನ್ನು ಇತರೆ ಪಕ್ಷಗಳು ಹಾಗೂ ಪಕ್ಷೇತರರು 3 ಸೀಟು ಪಡೆದುಕೊಳ್ಳಲಿದ್ದಾರೆ ಎಂದು ಇಂಡಿಯಾ ಟಿವಿ ಸಮೀಕ್ಷೆ ಹೇಳಿದೆ
ಸಮೀಕ್ಷೆ ವರದಿ ವಿವರ
* ಕಾಂಗ್ರೆಸ್ 97
* ಬಿಜೆಪಿ 87
* ಜೆಡಿಎಸ್ 35
* ಇತರೆ 3
ಪ್ರದೇಶವಾರು ಸೀಟು ಗಳಿಕೆ ವಿವರ
ಮುಂಬೈ ಕರ್ನಾಟಕ
* ಒಟ್ಟು ಸ್ಥಾನ 50
* ಬಿಜೆಪಿ 20-26
* ಕಾಂಗ್ರೆಸ್ 23-29
* ಜೆಡಿಎಸ್ 00-01
* ಇತರೆ 00
ಹೈದರಾಬಾದ್ ಕರ್ನಾಟಕ
* ಒಟ್ಟು ಸ್ಥಾನ 31
* ಬಿಜೆಪಿ 17-21
* ಕಾಂಗ್ರೆಸ್ 10-14
* ಜೆಡಿಎಸ್ 00
* ಇತರೆ 00
ಬೆಂಗಳೂರು
* ಒಟ್ಟು ಸ್ಥಾನ 32
* ಬಿಜೆಪಿ 13-15
* ಕಾಂಗ್ರೆಸ್ 11-15
* ಜೆಡಿಎಸ್ 00
* ಇತರೆ 00
ಕರಾವಳಿ ಪ್ರದೇಶ
* ಒಟ್ಟು ಸ್ಥಾನ 21
* ಬಿಜೆಪಿ 06-10
* ಕಾಂಗ್ರೆಸ್ 11-15
* ಜೆಡಿಎಸ್ 00
* ಇತರೆ 00
ದಕ್ಷಿಣ ಕರ್ನಾಟಕ
* ಒಟ್ಟು ಸ್ಥಾನ 55
* ಬಿಜೆಪಿ 4-10
* ಕಾಂಗ್ರೆಸ್ 15-21
* ಜೆಡಿಎಸ್ 22-28
* ಇತರೆ 01-03
ಮಧ್ಯ ಕರ್ನಾಟಕ
* ಒಟ್ಟು ಸ್ಥಾನ 35
* ಬಿಜೆಪಿ 15-19
* ಕಾಂಗ್ರೆಸ್ 10-14
* ಜೆಡಿಎಸ್ 03-07
* ಇತರೆ 00-02
-
Sachin Tendulkar: ಅಭಿಷೇಕ್ ಶರ್ಮಾಗೆ ಕ್ರಿಕೆಟ್ ದೇವರು ಸಚಿನ್ ತೆಂಡ್ಯೂಲ್ಕರ್ ವಿಶೇಷ ಸಂದೇಶ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
ಟೀಕೆಗಳು ಸಾಯುತ್ತವೆ, ಕೆಲಸಗಳು ಉಳಿಯುತ್ತವೆ ಎಂಬ ಮಾತಿನಂತೆ ನಡೆದುಕೊಂಡ ಯುವರಾಜ್ ಸಿಂಗ್ ಶಿಶ್ಯ ಅಭಿಷೇಕ್ ಶರ್ಮಾ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Property: ಬೆಂಗಳೂರಿನ 510 ಕೋಟಿ ಮೌಲ್ಯದ 14 ಎಕರೆ ಭೂಮಿ ವಶಕ್ಕೆ ಪಡೆದ ಜಿಬಿಎ, ಕಾರಣವೇನು -
Jaggery: ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್, ಬಣ್ಣ, ಸಕ್ಕರೆ ಮಿಶ್ರಣ: ಪರಿಶೀಲನೆ ಮಾಡುವ ಸರಳ ವಿಧಾನಗಳು -
ಟಿ20 ವಿಶ್ವಕಪ್ 2026 ಭಾರತದ ಮುಡಿಗೆ: ಬಾಲ ಮುದುರಿಕೊಂಡ 'ಸೈಲೆಂಟ್' ಸ್ಯಾಂಟ್ನರ್












Click it and Unblock the Notifications