Exit Poll : ಇಂಡಿಯಾ ಟಿವಿ ಸಮೀಕ್ಷೆ: ಕಾಂಗ್ರೆಸ್ ದೊಡ್ಡ ಪಕ್ಷ
ಬೆಂಗಳೂರು, ಮೇ 12: ಕರ್ನಾಟಕ ವಿಧಾನಸಭೆಯ 222 ಸ್ಥಾನಕ್ಕಾಗಿ ಮೇ.12 ರಂದು ಮತದಾನ ಪ್ರಕ್ರಿಯೆ ಮುಕ್ತಾಯವಾಗಿದ್ದು. ಈಗ ಚುನಾವಣೋತ್ತರ ಸಮೀಕ್ಷೆ, ಫಲಿತಾಂಶದ ಹೊರಬೀಳತೊಡಗಿದೆ.
ಹಿಂದಿ ವಾಹಿನಿ ಇಂಡಿಯಾ ಟಿವಿ ನಡೆಸಿರುವ ಚುನಾವಣೋತ್ತರ ಸಮೀಕ್ಷೆ ಪ್ರಕಾರ ರಾಜ್ಯದಲ್ಲಿ ಅತಂತ್ರ ವಿಧಾನಸಭೆ ಸೃಷ್ಟಿಯಾಗಲಿದೆ. ಯಾವ ಪಕ್ಷವೂ ನಿಚ್ಚಳ ಬಹುಮತ ಪಡೆದುಕೊಳ್ಳುವುದರಲ್ಲಿ ಸಫಲವಾಗುವುದಿಲ್ಲ ಎಂದು ಅದು ಹೇಳಿದೆ.
ಇಂಡಿಯಾ ಟಿವಿ ಸಮೀಕ್ಷೆ ಪ್ರಕಾರ ಅಧಿಕಾರಾರೂಢ ಕಾಂಗ್ರೆಸ್ 97 ಸ್ಥಾನಗಳನ್ನು ಪಡೆದುಕೊಳ್ಳಲಿದೆ. ವಿರೋಧ ಪಕ್ಷದ ಸ್ಥಾನದಲ್ಲಿದ್ದ ಬಿಜೆಪಿ ಕೂಡ ಮ್ಯಾಜಿಕ್ ಅಂಕಿಯನ್ನು ಮುಟ್ಟುವಲ್ಲಿ ವಿಫಲವಾಗಲಿದೆ. ಪ್ರಧಾನಿ ನರೇಂದ್ರ ಮೋದಿ ಅವರ ಅಬ್ಬರದ ಪ್ರಚಾರದ ನಡುವೆಯೂ ಬಿಜೆಪಿ 87 ಸೀಟುಗಳನ್ನು ಮಾತ್ರ ಪಡೆದುಕೊಳ್ಳಲಿದೆ.

ಈ ಎರಡೂ ಪಕ್ಷಗಳು ಅಧಿಕಾರಕ್ಕೆ ಬರಲು ಜೆಡಿಎಸ್ನ ನೆರವು ಪಡೆಯುವುದು ಅನಿವಾರ್ಯವಾಗಲಿದೆ. ಜೆಡಿಎಸ್ 35 ಕ್ಷೇತ್ರಗಳಲ್ಲಿ ಗೆಲುವು ಕಾಣಲಿದ್ದು, ಸರ್ಕಾರ ರಚನೆಯಲ್ಲಿ ಪ್ರಮುಖ ಪಾತ್ರ ವಹಿಸಲಿದೆ. ಇನ್ನು ಇತರೆ ಪಕ್ಷಗಳು ಹಾಗೂ ಪಕ್ಷೇತರರು 3 ಸೀಟು ಪಡೆದುಕೊಳ್ಳಲಿದ್ದಾರೆ ಎಂದು ಇಂಡಿಯಾ ಟಿವಿ ಸಮೀಕ್ಷೆ ಹೇಳಿದೆ
ಸಮೀಕ್ಷೆ ವರದಿ ವಿವರ
* ಕಾಂಗ್ರೆಸ್ 97
* ಬಿಜೆಪಿ 87
* ಜೆಡಿಎಸ್ 35
* ಇತರೆ 3
ಪ್ರದೇಶವಾರು ಸೀಟು ಗಳಿಕೆ ವಿವರ
ಮುಂಬೈ ಕರ್ನಾಟಕ
* ಒಟ್ಟು ಸ್ಥಾನ 50
* ಬಿಜೆಪಿ 20-26
* ಕಾಂಗ್ರೆಸ್ 23-29
* ಜೆಡಿಎಸ್ 00-01
* ಇತರೆ 00
ಹೈದರಾಬಾದ್ ಕರ್ನಾಟಕ
* ಒಟ್ಟು ಸ್ಥಾನ 31
* ಬಿಜೆಪಿ 17-21
* ಕಾಂಗ್ರೆಸ್ 10-14
* ಜೆಡಿಎಸ್ 00
* ಇತರೆ 00
ಬೆಂಗಳೂರು
* ಒಟ್ಟು ಸ್ಥಾನ 32
* ಬಿಜೆಪಿ 13-15
* ಕಾಂಗ್ರೆಸ್ 11-15
* ಜೆಡಿಎಸ್ 00
* ಇತರೆ 00
ಕರಾವಳಿ ಪ್ರದೇಶ
* ಒಟ್ಟು ಸ್ಥಾನ 21
* ಬಿಜೆಪಿ 06-10
* ಕಾಂಗ್ರೆಸ್ 11-15
* ಜೆಡಿಎಸ್ 00
* ಇತರೆ 00
ದಕ್ಷಿಣ ಕರ್ನಾಟಕ
* ಒಟ್ಟು ಸ್ಥಾನ 55
* ಬಿಜೆಪಿ 4-10
* ಕಾಂಗ್ರೆಸ್ 15-21
* ಜೆಡಿಎಸ್ 22-28
* ಇತರೆ 01-03
ಮಧ್ಯ ಕರ್ನಾಟಕ
* ಒಟ್ಟು ಸ್ಥಾನ 35
* ಬಿಜೆಪಿ 15-19
* ಕಾಂಗ್ರೆಸ್ 10-14
* ಜೆಡಿಎಸ್ 03-07
* ಇತರೆ 00-02
-
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ವಿರಾಟ್ ಅಸಲಿ ಆಟ ಇನ್ನೂ ಬಾಕಿಯಿದೆ; ಕಿಂಗ್ ಕೊಹ್ಲಿಗೆ ವಿಶೇಷ ಮನವಿ ಮಾಡಿಕೊಂಡ ಅಂಬಟಿ ರಾಯುಡು, ಭಾರೀ ವೈರಲ್ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ -
Prakash Raj Mother passed Away: ನಟ ಪ್ರಕಾಶ್ ರಾಜ್ ತಾಯಿ ಸ್ವರ್ಣಲತಾ ನಿಧನ, ಚಿತ್ರರಂಗದ ಗಣ್ಯರಿಂದ ಸಂತಾಪ












Click it and Unblock the Notifications