ಗೌರಿಬಿದನೂರು: ಎಚ್ಚೆನ್ ಹುಟ್ಟಿದ ತಾಲೂಕಿನಲ್ಲಿ 'ಕೈ' ಮೇಲು
ಶೈಕ್ಷಣಿಕ ಮತ್ತು ಬುದ್ಧಿವಂತರ ತಾಲೂಕು ಎಂಬುದು ಗೌರಿಬಿದನೂರಿಗೆ ಇರುವ ಅಗ್ಗಳಿಕೆ. ವೈಜ್ಞಾನಿಕ ಚಿಂತಕ ಡಾ. ಎಚ್. ನರಸಿಂಹಯ್ಯ ಅವರು ಇಲ್ಲಿನ ಹೊಸೂರು ಭಾಗದವರು. ಜಲಿಯನ್ ವಾಲಾ ಬಾಗ್ ಖ್ಯಾತಿಯ ವಿದುರಾಶ್ವತ್ಥ ಗ್ರಾಮ, ಸ್ಮಾರಕ ಕೇಂದ್ರ, ಅತ್ಯಾಧುನಿಕ ಮಾದರಿಯ ಹವಾನಿಯಂತ್ರಿತ ಸಭಾಂಗಣಗಳು ಇಲ್ಲಿವೆ.
ಉತ್ತರ ಪಿನಾಕಿನಿ, ದಕ್ಷಿಣ ಪಿನಾಕಿನಿ ನದಿಗಳ ಪುನರುಜ್ಜೀವನಕ್ಕೆ ಪ್ರಕ್ರಿಯೆ ಆರಂಭವಾಗಿದೆ. ಸಂಗೀತಕ್ಕೆ ಮೀಸಲಾದ ಚಿಂತಲಪಲ್ಲಿ ಗ್ರಾಮ ಮತ್ತು ಚಿಂತಲಪಲ್ಲಿ ಸಂಗೀತ ಪರಂಪರೆ ಇಲ್ಲಿನದೇ. ಬಹುತೇಕ ಮಂದಿ ಪಕ್ಕದ ಆಂಧ್ರಪ್ರದೇಶದ ಪಟ್ಟಣ ಪ್ರದೇಶದಲ್ಲಿ ಕೆಲಸಕ್ಕೆ ಹೋಗುತ್ತಾರೆ.
ಒಂದೇ ಕುಟುಂಬವು ಬೇರೆ ಬೇರೆ ಪಕ್ಷಗಳಲ್ಲಿ ಚದುರಿ ಹೋಗಿ, ರಾಜಕಾರಣ ನಡೆಸುತ್ತಿವೆ. ಕಾಂಗ್ರೆಸ್ ನ ಶಿವಶಂಕರರೆಡ್ಡಿ ಸತತ ಶಾಸಕರಾಗಿ ಆಯ್ಕೆಯಾಗಿದ್ದು, ಬಿಜೆಪಿಯ ರವಿನಾರಾಯಣರೆಡ್ಡಿ, ಜ್ಯೋತಿರೆಡ್ಡಿ ನಿರಂತರ ಪೈಪೋಟಿ ನೀಡುತ್ತಿದ್ದಾರೆ.

ಅಲೀಪುರ ಎಂಬ ಗ್ರಾಮದಲ್ಲಿ ಮುಸ್ಲಿಮರು ಹೆಚ್ಚಿದ್ದು, ಅಲ್ಲಿನ ಬಹುತೇಕ ಮಂದಿ ದುಬೈ, ಅರಬ್ ದೇಶಗಳಲ್ಲಿ ವಾಸವಿದ್ದಾರೆ. ಚಿಂತಕರಾದ ಪ್ರೊ. ಎಂ.ಗಂಗಾಧರಮೂರ್ತಿ, ಜಲತಜ್ಞ ಕೆ.ನಾರಾಯಣಸ್ವಾಮಿ ಮುಂತಾದ ಮಹನೀಯರು ಪ್ರಮುಖ ಪಾತ್ರ ವಹಿಸಿದ್ದಾರೆ. ಇಲ್ಲಿ ಅರಣ್ಯ ಪ್ರದೇಶ ಹೆಚ್ಚಿದ್ದು, ಇಡೀ ನಗರ, ಗ್ರಾಮೀಣ ಪ್ರದೇಶ ಅಭಿವೃದ್ಧಿಯಾಗಬೇಕಿದೆ.
ವಿಧಾನಸಭೆ ಚುನಾವಣೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ | ಯಾವ ಪಕ್ಷಕ್ಕೆಷ್ಟು ಸೀಟು? ನೀವೇ ಊಹಿಸಿ
ಇಲ್ಲಿ ಸಿಮೆಂಟ್ ಕಂಪನಿ ಆರಂಭವಾದ ಮೇಲೆ ರಸ್ತೆಗಳು ನುಣುಪಾದವು. ಇಲ್ಲಿನ ಜನರ ಊಟದ ತಟ್ಟೆಗಳು ದೂಳಾದವು ಅಂತ ಮಾತುಗಳು ಕೇಳಿಬರುತ್ತವೆ. ಕಳೆದ ಲೋಕಸಭಾ ಚುನಾವಣೆಯಲ್ಲಿ ಚಿಕ್ಕಬಳ್ಳಾಪುರದಿಂದ ಎಚ್.ಡಿ.ಕುಮಾರಸ್ವಾಮಿ ಸ್ಪರ್ಧೆ ಮಾಡಿದ ನಂತರ ಸ್ಥಳೀಯವಾಗಿ ಜೆಡಿಎಸ್ ನಲ್ಲಿ ಒಂದಿಷ್ಟು ಬದಲಾವಣೆಗಳಾಗಿವೆ.
ಕಾಂಗ್ರೆಸ್ ಸರಕಾರದಲ್ಲಿ ಶಿವಶಂಕರ ರೆಡ್ಡಿ ಅವರು ಸಚಿವರಾಗಬೇಕು ಎಂಬುದು ನಿರೀಕ್ಷೆಯಾಗಿತ್ತು. ಆದರೆ ಹಾಗಾಗಲಿಲ್ಲ. ಇನ್ನು ತಾಲೂಕಿನ ವಿಚಾರಕ್ಕೆ ಬಂದರೆ ವಾಣಿಜ್ಯ ಚಟುವಟಿಕೆಗೇನೂ ಕಡಿಮೆ ಇಲ್ಲ.
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications