ಜೆಡಿಎಸ್ ಭದ್ರಕೋಟೆ ಗುಬ್ಬಿಯಲ್ಲಿ ಯಾರು ಬಿಡಲಿದ್ದಾರೆ ಬ್ರಹ್ಮಾಸ್ತ್ರ!
ತುಮಕೂರು ಜಿಲ್ಲೆಯ ಗುಬ್ಬಿ ಅಂದಾಕ್ಷಣ ನೆನಪಾಗುವುದು ನಾಟಕರತ್ನ ಗುಬ್ಬಿ ವೀರಣ್ಣ. ಅವರ ಹೆಸರಿನಲ್ಲಿ ಇಲ್ಲೊಂದು ಸೊಗಸಾದ ರಂಗಮಂದಿರವಿದೆ. ಇಲ್ಲಿನ ಶಾಸಕ ಜೆಡಿಎಸ್ ನ ಎಸ್.ಆರ್.ಶ್ರೀನಿವಾಸ್. ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಜೆಡಿಎಸ್ ಗೆ ಇಲ್ಲಿ ಹಿನ್ನಡೆ ಆಗಿತ್ತು. ಸ್ವತಃ ಶಾಸಕರ ಪತ್ನಿ ಸೋಲನುಭವಿಸಿದ್ದರು.
ಆದರೆ ಈ ಕ್ಷೇತ್ರವನ್ನು ಜೆಡಿಎಸ್ ಪಾಲಿನ ಭದ್ರಕೋಟೆ ಅಂತಲೇ ಪರಿಗಣಿಸಲಾಗುತ್ತದೆ. ಜೆಡಿಎಸ್ ಹಾಗೂ ಕಾಂಗ್ರೆಸ್ ಮಧ್ಯೆ ಹಣಾಹಣಿ ಅಂತಲೇ ಪ್ರಚಾರದಲ್ಲಿದೆ. ಕೃಷಿಯೇ ಪ್ರಧಾನ ಆಗಿರುವ ತಾಲೂಕಿನಲ್ಲಿ ಹೈನುಗಾರಿಕೆಗೂ ಪ್ರಾಶಸ್ತ್ಯ ಇದೆ. ತುಮಕೂರು ಜಿಲ್ಲಾ ಕೇಂದ್ರಕ್ಕೂ ಬಹಳ ಹತ್ತಿರದಲ್ಲಿರುವ ತಾಲೂಕು.
ಎಚ್ ಎ ಎಲ್ ನ ಲಘು ಹೆಲಿಕಾಪ್ಟರ್ ಘಟಕ ಆರಂಬ ಆಗುತ್ತಿರುವುದು ಇದೇ ಗುಬ್ಬಿಯಲ್ಲಿ. ಇನ್ನು ರಸ್ತೆ ಅಭಿವೃದ್ಧಿ ಬಗ್ಗೆ ಕೆಲವು ಕಡೆ ಅಸಮಾಧಾನ ಇದೆ. ಸಂಪರ್ಕ ರಸ್ತೆಗಳು ಚೆನ್ನಾಗಿ ಆಗಬೇಕು ಎಂಬುದು ಬಹುತೇಕ ಕಡೆ ಕೇಳಿಬರುವ ಒತ್ತಾಯ. ಅದೇ ರೀತಿ ನೀರಿನ ಸಮಸ್ಯೆ ಬಗ್ಗೆಯೂ ದೂರುತ್ತಾರೆ.

ಈ ಬಾರಿ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್ ನಿಂದ ಶ್ರೀನಿವಾಸ್ (ವಾಸು) ಸ್ಪರ್ಧಿಸುತ್ತಿದ್ದಾರೆ. ಕಾಂಗ್ರೆಸ್ ನಿಂದ ಕೆ.ಕುಮಾರ್ ಎನ್ನುವವರು ಸ್ಪರ್ಧಿಯಲ್ಲಿದ್ದರೆ, ಬಿಜೆಪಿಯಿಂದ ಬೆಟ್ಟಸ್ವಾಮಿ ಅಖಾಡದಲ್ಲಿದ್ದಾರೆ. ಇಲ್ಲಿ ಬಿಜೆಪಿಯಿಂದ ದಿಲೀಪ್ ಗೆ ಟಿಕೆಟ್ ಸಿಗಬಹುದು ಎಂಬ ನಿರೀಕ್ಷೆ ಇತ್ತು.
ಆದರೆ, ಅದು ತಪ್ಪಿಹೋಗಿದ್ದರಿಂದ ಪಕ್ಷೇತರರಾಗಿ ಕಣದಲ್ಲಿದ್ದಾರೆ ದಿಲೀಪ್. ಅವರ ಮನವೊಲಿಸಲು ಯಡಿಯೂರಪ್ಪ ಅವರು ಮಾಡಿದ ಯತ್ನ ಸಫಲವಾಗಲಿಲ್ಲ. ಇನ್ನು ಈ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಮಾರಿಕೊಂಡಿದ್ದಾರೆ ಎಂದು ಟಿಕೆಟ್ ತಪ್ಪಿದ ಹೊನ್ನಗಿರಿ ಗೌಡ ಆಪಾದನೆ ಮಾಡಿದರು.
ಗುಬ್ಬಿ ವಿಧಾನಸಭಾ ಕ್ಷೇತ್ರದಲ್ಲಿ ಜೆಡಿಎಸ್ ನ ಶ್ರೀನಿವಾಸ್ ಅವರನ್ನು ಸೋಲಿಸುವುದು ಸಲೀಸಿಲ್ಲ. ಆದರೆ ಅವರ ಮಾತೇ ಸ್ವಲ್ಪ ಎಡವಟ್ಟು. ಈ ಬಾರಿ ಗುಬ್ಬಿ ಕ್ಷೇತ್ರದ ಮತದಾರರ ತೀರ್ಪು ಏನಾಗಬಹುದು ಎಂಬ ಕುತೂಹಲ ಇದ್ದೇ ಇದೆ. ದಿಲೀಪ್ ಸ್ಪರ್ಧೆಯಿಂದ ಯಾರಿಗೆ ಲಾಭ ಆಗಬಹುದು ಎಂಬ ಕುತೂಹಲವೂ ಇದೆ.
-
Sachin Tendulkar: ಅಭಿಷೇಕ್ ಶರ್ಮಾಗೆ ಕ್ರಿಕೆಟ್ ದೇವರು ಸಚಿನ್ ತೆಂಡ್ಯೂಲ್ಕರ್ ವಿಶೇಷ ಸಂದೇಶ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
ಟೀಕೆಗಳು ಸಾಯುತ್ತವೆ, ಕೆಲಸಗಳು ಉಳಿಯುತ್ತವೆ ಎಂಬ ಮಾತಿನಂತೆ ನಡೆದುಕೊಂಡ ಯುವರಾಜ್ ಸಿಂಗ್ ಶಿಶ್ಯ ಅಭಿಷೇಕ್ ಶರ್ಮಾ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Property: ಬೆಂಗಳೂರಿನ 510 ಕೋಟಿ ಮೌಲ್ಯದ 14 ಎಕರೆ ಭೂಮಿ ವಶಕ್ಕೆ ಪಡೆದ ಜಿಬಿಎ, ಕಾರಣವೇನು -
Jaggery: ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್, ಬಣ್ಣ, ಸಕ್ಕರೆ ಮಿಶ್ರಣ: ಪರಿಶೀಲನೆ ಮಾಡುವ ಸರಳ ವಿಧಾನಗಳು -
ಟಿ20 ವಿಶ್ವಕಪ್ 2026 ಭಾರತದ ಮುಡಿಗೆ: ಬಾಲ ಮುದುರಿಕೊಂಡ 'ಸೈಲೆಂಟ್' ಸ್ಯಾಂಟ್ನರ್












Click it and Unblock the Notifications