ಕೊರಟಗೆರೆ ಕ್ಷೇತ್ರದಲ್ಲಿ ಲಕ್ಷ್ಮಿದೇವಿ ದೇವಾಲಯ ಫೇಮಸ್, ಸೌಕರ್ಯ ಮೈನಸ್
ತುಮಕೂರು ಜಿಲ್ಲೆ ವ್ಯಾಪ್ತಿಯಲ್ಲಿನ ಕೊರಟಗೆರೆ ವಿಧಾನಸಭೆ ಕ್ಷೇತ್ರ ತುಂಬ ಚಿಕ್ಕ ಕ್ಷೇತ್ರ. ಇಲ್ಲಿನ ಶಾಸಕರು ಜೆಡಿಎಸ್ ನ ಸುಧಾಕರ್ ಲಾಲ್. ಕಳೆದ ವಿಧಾನಸಭೆ ಚುನಾವಣೆ ನಂತರ ಇಡೀ ಕರ್ನಾಟಕದಲ್ಲಿ ಖ್ಯಾತಿ ಪಡೆದವರು ಈ ಸುಧಾಕರ್ ಲಾಲ್. ಅದಕ್ಕೆ ಕಾರಣ ಏನೆಂದರೆ, ಕೆಪಿಸಿಸಿ ಅಧ್ಯಕ್ಷ- ಮುಖ್ಯಮಂತ್ರಿ ಸ್ಥಾನದ ರೇಸಿನಲ್ಲಿದ್ದ ಡಾ.ಜಿ.ಪರಮೇಶ್ವರ ಅವರನ್ನೇ ಸೋಲಿಸಿಬಿಟ್ಟರು.
ಆದರೆ, ಸುಧಾಕರ್ ಲಾಲ್ ಜನರ ಕೈಗೆ ಸಿಗುತ್ತಾರೆ ಎಂಬ ಮಾತಿದ್ದರೂ ಕ್ಷೇತ್ರದಲ್ಲಿ ಅಂಥ ಅಭಿವೃದ್ಧಿ ಕೆಲಸ ಆಗಿಲ್ಲ ಎಂಬ ಅಸಮಾಧಾನ ಇದೆ. ಇನ್ನು ಈ ಬಾರಿಯೂ ಜೆಡಿಎಸ್ ನಿಂದ ಸುಧಾಕರ್ ಲಾಲ್ ಹಾಗೂ ಕಾಂಗ್ರೆಸ್ ನಿಂದ ಪರಮೇಶ್ವರ್ ಅಭ್ಯರ್ಥಿ. ಬಿಜೆಪಿಯಿಂದ ವೈ.ಎಚ್.ಹುಚ್ಚಯ್ಯ ಕಣದಲ್ಲಿದ್ದಾರೆ.
ಇನ್ನು ಜೆಡಿಎಸ್ ನೊಳಗೆ ಸುಧಾಕರ್ ಬಗ್ಗೆ ಅಸಮಾಧಾನ ಇದೆ ಎಂಬ ಮಾತುಗಳಿವೆ. ಜೆಡಿಎಸ್ ಜಿಲ್ಲಾಧ್ಯಕ್ಷ ಚೆನ್ನಿಗಪ್ಪ ಅವರಿಗೆ ಈ ಕ್ಷೇತ್ರದ ಮೇಲೆ ಹೆಚ್ಚಿನ ಹಿಡಿತವಿದೆ. ಕೊರಟಗೆರೆ ಜಿಲ್ಲಾ ಕೇಂದ್ರಕ್ಕೆ ಹತ್ತಿರವಿದ್ದರೂ ತಾಲೂಕಿನ ಹಲವು ಗ್ರಾಮಗಳಲ್ಲಿ ಇಂದಿಗೂ ಸಂಚಾರ ಸಮಸ್ಯೆಯಿದೆ.

ವಿದ್ಯಾರ್ಥಿಗಳು, ಕೃಷಿಕರು ತುಮಕೂರು ನಗರಕ್ಕೆ ಬರಬೇಕು ಅಂದರೆ ನಿತ್ಯವೂ ಪರದಾಡುವಂಥ ಸ್ಥಿತಿ ಇದೆ. ಈ ಕ್ಷೇತ್ರದಲ್ಲಿ ಬಿಜೆಪಿಗೆ ಅಂಥ ಪ್ರಾಬಲ್ಯವಿಲ್ಲ. ಆದರೆ ಈ ಬಾರಿ ಕುತೂಹಲ ಇರುವುದು ಜೆಡಿಎಸ್ ವರ್ಸಸ್ ಕಾಂಗ್ರೆಸ್ ಅಂತಲೇ. ಗೊರವನಹಳ್ಳಿ ಲಕ್ಷ್ಮಿ ದೇವಸ್ಥಾನ ಬರುವುದು ಇದೇ ತಾಲೂಕು ವ್ಯಾಪ್ತಿಯಲ್ಲಿ.
ಡಾ.ಜಿ.ಪರಮೇಶ್ವರ್ ಈ ಸಲ ಗ್ರಾಮ ವಾಸ್ತವ್ಯ ಕೂಡ ಮಾಡಿದ್ದಾರೆ. ಆದರೆ ಅವರ ಬಗ್ಗೆ ಕ್ಷೇತ್ರದ ಜನತೆಗೆ ಪೂರ್ಣ ಪ್ರಮಾಣದಲ್ಲಿ ನಂಬಿಕೆ ಬಂದಿಲ್ಲ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಸೋತ ನಂತರ ಮುನಿಸಿಕೊಂಡ ಪರಮೇಶ್ವರ್ ಬಹಳ ಕಾಲ ಇತ್ತ ತಿರುಗಿ ಕೂಡ ನೋಡಿರಲಿಲ್ಲ. ಆ ಕಾರಣಕ್ಕೆ ಜನರಿಗೆ ಅವರ ಬಗ್ಗೆ ಇನ್ನೂ ಗುಮಾನಿ ಇದೆ.
ಕಳೆದ ವಿಧಾನಸಭಾ ಚುನಾವಣೆಯಲ್ಲಿ ಸುಧಾಕರ್ ಲಾಲ್ ವಿರುದ್ಧ ಗೆಲುವು ಸಾಧಿಸಿದ್ದು ಹದಿನೆಂಟು ಸಾವಿರ ಮತಗಳ ಅಂತರದಲ್ಲಿ. ಈ ಬಾರಿ ಆ ಪ್ರಮಾಣದ ಮತಗಳನ್ನು ತಮ್ಮ ಕಡೆಗೆ ಸೆಳೆಯುವಲ್ಲಿ ಪರಮೇಶ್ವರ್ ಸಫಲರಾಗುತ್ತಾರಾ ಎಂಬ ಪ್ರಶ್ನೆ ಕೂಡ ಇದೆ.
ರಾಜಕಾರಣದ ವಿಚಾರ ಏನೇ ಇರಬಹುದು. ಕೊರಟಗೆರೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಬಗೆಹರಿಸಬೇಕಾದ ಸಮಸ್ಯೆಗಳು ಸಾಕಷ್ಟಿವೆ. ಮಾನವ -ಪ್ರಾಣಿ ಸಂಘರ್ಷದ ಸಮಸ್ಯೆಯಿದೆ. ಕ್ಷೇತ್ರದ ಕೆಲವು ಕಡೆ ಕರಡಿ ದಾಳಿ ಪ್ರಕರಣಗಳು ವರದಿಯಾಗಿವೆ.
-
Sachin Tendulkar: ಅಭಿಷೇಕ್ ಶರ್ಮಾಗೆ ಕ್ರಿಕೆಟ್ ದೇವರು ಸಚಿನ್ ತೆಂಡ್ಯೂಲ್ಕರ್ ವಿಶೇಷ ಸಂದೇಶ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
ಟೀಕೆಗಳು ಸಾಯುತ್ತವೆ, ಕೆಲಸಗಳು ಉಳಿಯುತ್ತವೆ ಎಂಬ ಮಾತಿನಂತೆ ನಡೆದುಕೊಂಡ ಯುವರಾಜ್ ಸಿಂಗ್ ಶಿಶ್ಯ ಅಭಿಷೇಕ್ ಶರ್ಮಾ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Property: ಬೆಂಗಳೂರಿನ 510 ಕೋಟಿ ಮೌಲ್ಯದ 14 ಎಕರೆ ಭೂಮಿ ವಶಕ್ಕೆ ಪಡೆದ ಜಿಬಿಎ, ಕಾರಣವೇನು -
Jaggery: ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್, ಬಣ್ಣ, ಸಕ್ಕರೆ ಮಿಶ್ರಣ: ಪರಿಶೀಲನೆ ಮಾಡುವ ಸರಳ ವಿಧಾನಗಳು -
ಟಿ20 ವಿಶ್ವಕಪ್ 2026 ಭಾರತದ ಮುಡಿಗೆ: ಬಾಲ ಮುದುರಿಕೊಂಡ 'ಸೈಲೆಂಟ್' ಸ್ಯಾಂಟ್ನರ್












Click it and Unblock the Notifications