ಮಧುಗಿರಿ ಕ್ಷೇತ್ರದಲ್ಲಿ ಮಾನವ- ಪ್ರಾಣಿ ಸಂಘರ್ಷವೇ ಮುಖ್ಯ ಸವಾಲು
ಮಧುಗಿರಿ ಅಂದಾಕ್ಷಣ ನೆನಪಿಗೆ ಬರುವುದು ಇಲ್ಲಿನ ಏಕಶಿಲಾ ಬೆಟ್ಟ, ಜಯಮಂಗಲಿ ಕಾವಲ್ (ಕೃಷ್ಣಮೃಗ ರಕ್ಷಿತಾರಣ್ಯ). ತಿಮ್ಲಾಪುರ ಕರಡಿ ಧಾಮ. ಡಿಸಿಸಿ ಬ್ಯಾಂಕ್ ಅಧ್ಯಕ್ಷರೂ ಆಗಿರುವ ಕೆ.ಎನ್.ರಾಜಣ್ಣ ಇಲ್ಲಿನ ಶಾಸಕರು. ಅವರು ಕಾಂಗ್ರೆಸ್ ಪಕ್ಷದಿಂದ ಗೆದ್ದು ಶಾಸಕರಾಗಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ರಾಜಣ್ಣ ಆಪ್ತರು. ಈ ಬಾರಿ ವಿಧಾನಸಭಾ ಚುನಾವಣೆಯಲ್ಲಿ ಮತ್ತೆ ಕಾಂಗ್ರೆಸ್ ನಿಂದ ಸ್ಪರ್ಧಿಸುತ್ತಾರೆ. ಅಂದಹಾಗೆ ಈ ಕ್ಷೇತ್ರ ಜೆಡಿಎಸ್ ಪಾಲಿಗೂ ನಂಬಿಕೆಯ ಕ್ಷೇತ್ರ. ನಿವೃತ್ತ ಐಎಎಸ್ ಅಧಿಕಾರಿ ವೀರಭದ್ರಯ್ಯ ಅವರು ಜೆಡಿಎಸ್ ಅಭ್ಯರ್ಥಿ.
ಈ ಹಿಂದೆ ಅನಿತಾ ಕುಮಾರಸ್ವಾಮಿ, ಡಿ.ಸಿ.ಗೌರಿಶಂಕರ್ ಇದೇ ಕ್ಷೇತ್ರದಿಂದ ಜೆಡಿಎಸ್ ನಿಂದ ಸ್ಪರ್ಧಿಸಿ ಗೆದ್ದಿದ್ದರು. ಕುಮಾರಸ್ವಾಮಿ- ದೇವೇಗೌಡರು ದೊಡ್ಡ ಮಟ್ಟದ ಸಮಾವೇಶ ಇಲ್ಲಿ ನಡೆಸಿದ್ದಾರೆ. ಆದರೆ ಈ ಬಾರಿ ರಾಜಣ್ಣ ಅವರಿಗೆ ಗೆಲುವು ಸವಾಲು ಎನಿಸಿದೆ. ಏಕೆಂದರೆ, ಕಳೆದ ಬಾರಿ ವಿಧಾನಸಭೆ ಚುನಾವಣೆ ವೇಳೆ ವೀರಭದ್ರಯ್ಯ ಅವರಿಗೆ ತುಂಬ ತಡವಾಗಿ ಟಿಕೆಟ್ ಘೋಷಣೆ ಆಗಿತ್ತು.

ಅವರು ಅರ್ಜಿ ಹಾಕಿಕೊಂಡಿದ್ದ ಸ್ವಯಂ ನಿವೃತ್ತಿಯೂ ಸರಕಾರದಿಂದ ಬೇಗ ಪ್ರಕ್ರಿಯೆ ಆಗಲಿಲ್ಲ. ಆದರೆ ಈ ಬಾರಿ ರಾಜಣ್ಣ ವರ್ಸಸ್ ವೀರಭದ್ರಯ್ಯ ಎಂಬ ಸನ್ನಿವೇಶ ಇದೆ. ವೀರಭದ್ರಯ್ಯ ಅವರು ಇಲ್ಲೇ ಮನೆ ಕೂಡ ಮಾಡಿದ್ದಾರೆ. ಕುಮಾರಸ್ವಾಮಿ- ದೇವೇಗೌಡರು ಭರ್ಜರಿ ಪ್ರಚಾರ ಮಾಡಿದ್ದಾರೆ. ಇನ್ನು ಬಿಜೆಪಿಯಿಂದ ಹುಲಿನಾಯ್ಕರ್ ಗೆ ಟಿಕೆಟ್ ಘೋಷಣೆ ಆಗಿತ್ತು. ಆದರೆ ಅವರು ಸ್ಪರ್ಧೆಯಿಂದ ಹಿಂದೆ ಸರಿದರು.
ಮಧುಗಿರಿಯಲ್ಲಿ ಕರಡಿ ಹಾವಳಿ ಜಾಸ್ತಿ ಇದೆ. ಇಲ್ಲಿನ ಪಟ್ಟಣ ಪ್ರದೇಶದ ಮನೆಗೆ ಕರಡಿ ದಾಳಿ ಮಾಡಿದ ಉದಾಹರಣೆ ಇದೆ. ಕೆ.ಎನ್.ರಾಜಣ್ಣ ಅವರು ರಸ್ತೆ, ಒಳ ಚರಂಡಿ ಅಭಿವೃದ್ಧಿ ಕೆಲಸಗಳನ್ನು ಮಾಡಿಸಿದ್ದಾರೆ. ಆದರೆ ಇಲ್ಲಿ ಕಾಂಗ್ರೆಸ್ ಹಾಗೂ ಜೆಡಿಎಸ್ ಅಭ್ಯರ್ಥಿಗಳನ್ನು ಒಬ್ಬರಾದ ಮೇಲೆ ಒಬ್ಬರಂತೆ ಆರಿಸುತ್ತಿರುವ ಜನರು ಪ್ರತಿ ಸಲ ಕುತೂಹಲಕ್ಕೆ ಕಾರಣರಾಗಿದ್ದಾರೆ.
-
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ವಿರಾಟ್ ಅಸಲಿ ಆಟ ಇನ್ನೂ ಬಾಕಿಯಿದೆ; ಕಿಂಗ್ ಕೊಹ್ಲಿಗೆ ವಿಶೇಷ ಮನವಿ ಮಾಡಿಕೊಂಡ ಅಂಬಟಿ ರಾಯುಡು, ಭಾರೀ ವೈರಲ್ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ -
Prakash Raj Mother passed Away: ನಟ ಪ್ರಕಾಶ್ ರಾಜ್ ತಾಯಿ ಸ್ವರ್ಣಲತಾ ನಿಧನ, ಚಿತ್ರರಂಗದ ಗಣ್ಯರಿಂದ ಸಂತಾಪ












Click it and Unblock the Notifications