ಮಧುಗಿರಿ ಕ್ಷೇತ್ರದಲ್ಲಿ ಮಾನವ- ಪ್ರಾಣಿ ಸಂಘರ್ಷವೇ ಮುಖ್ಯ ಸವಾಲು
ಮಧುಗಿರಿ ಅಂದಾಕ್ಷಣ ನೆನಪಿಗೆ ಬರುವುದು ಇಲ್ಲಿನ ಏಕಶಿಲಾ ಬೆಟ್ಟ, ಜಯಮಂಗಲಿ ಕಾವಲ್ (ಕೃಷ್ಣಮೃಗ ರಕ್ಷಿತಾರಣ್ಯ). ತಿಮ್ಲಾಪುರ ಕರಡಿ ಧಾಮ. ಡಿಸಿಸಿ ಬ್ಯಾಂಕ್ ಅಧ್ಯಕ್ಷರೂ ಆಗಿರುವ ಕೆ.ಎನ್.ರಾಜಣ್ಣ ಇಲ್ಲಿನ ಶಾಸಕರು. ಅವರು ಕಾಂಗ್ರೆಸ್ ಪಕ್ಷದಿಂದ ಗೆದ್ದು ಶಾಸಕರಾಗಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ರಾಜಣ್ಣ ಆಪ್ತರು. ಈ ಬಾರಿ ವಿಧಾನಸಭಾ ಚುನಾವಣೆಯಲ್ಲಿ ಮತ್ತೆ ಕಾಂಗ್ರೆಸ್ ನಿಂದ ಸ್ಪರ್ಧಿಸುತ್ತಾರೆ. ಅಂದಹಾಗೆ ಈ ಕ್ಷೇತ್ರ ಜೆಡಿಎಸ್ ಪಾಲಿಗೂ ನಂಬಿಕೆಯ ಕ್ಷೇತ್ರ. ನಿವೃತ್ತ ಐಎಎಸ್ ಅಧಿಕಾರಿ ವೀರಭದ್ರಯ್ಯ ಅವರು ಜೆಡಿಎಸ್ ಅಭ್ಯರ್ಥಿ.
ಈ ಹಿಂದೆ ಅನಿತಾ ಕುಮಾರಸ್ವಾಮಿ, ಡಿ.ಸಿ.ಗೌರಿಶಂಕರ್ ಇದೇ ಕ್ಷೇತ್ರದಿಂದ ಜೆಡಿಎಸ್ ನಿಂದ ಸ್ಪರ್ಧಿಸಿ ಗೆದ್ದಿದ್ದರು. ಕುಮಾರಸ್ವಾಮಿ- ದೇವೇಗೌಡರು ದೊಡ್ಡ ಮಟ್ಟದ ಸಮಾವೇಶ ಇಲ್ಲಿ ನಡೆಸಿದ್ದಾರೆ. ಆದರೆ ಈ ಬಾರಿ ರಾಜಣ್ಣ ಅವರಿಗೆ ಗೆಲುವು ಸವಾಲು ಎನಿಸಿದೆ. ಏಕೆಂದರೆ, ಕಳೆದ ಬಾರಿ ವಿಧಾನಸಭೆ ಚುನಾವಣೆ ವೇಳೆ ವೀರಭದ್ರಯ್ಯ ಅವರಿಗೆ ತುಂಬ ತಡವಾಗಿ ಟಿಕೆಟ್ ಘೋಷಣೆ ಆಗಿತ್ತು.

ಅವರು ಅರ್ಜಿ ಹಾಕಿಕೊಂಡಿದ್ದ ಸ್ವಯಂ ನಿವೃತ್ತಿಯೂ ಸರಕಾರದಿಂದ ಬೇಗ ಪ್ರಕ್ರಿಯೆ ಆಗಲಿಲ್ಲ. ಆದರೆ ಈ ಬಾರಿ ರಾಜಣ್ಣ ವರ್ಸಸ್ ವೀರಭದ್ರಯ್ಯ ಎಂಬ ಸನ್ನಿವೇಶ ಇದೆ. ವೀರಭದ್ರಯ್ಯ ಅವರು ಇಲ್ಲೇ ಮನೆ ಕೂಡ ಮಾಡಿದ್ದಾರೆ. ಕುಮಾರಸ್ವಾಮಿ- ದೇವೇಗೌಡರು ಭರ್ಜರಿ ಪ್ರಚಾರ ಮಾಡಿದ್ದಾರೆ. ಇನ್ನು ಬಿಜೆಪಿಯಿಂದ ಹುಲಿನಾಯ್ಕರ್ ಗೆ ಟಿಕೆಟ್ ಘೋಷಣೆ ಆಗಿತ್ತು. ಆದರೆ ಅವರು ಸ್ಪರ್ಧೆಯಿಂದ ಹಿಂದೆ ಸರಿದರು.
ಮಧುಗಿರಿಯಲ್ಲಿ ಕರಡಿ ಹಾವಳಿ ಜಾಸ್ತಿ ಇದೆ. ಇಲ್ಲಿನ ಪಟ್ಟಣ ಪ್ರದೇಶದ ಮನೆಗೆ ಕರಡಿ ದಾಳಿ ಮಾಡಿದ ಉದಾಹರಣೆ ಇದೆ. ಕೆ.ಎನ್.ರಾಜಣ್ಣ ಅವರು ರಸ್ತೆ, ಒಳ ಚರಂಡಿ ಅಭಿವೃದ್ಧಿ ಕೆಲಸಗಳನ್ನು ಮಾಡಿಸಿದ್ದಾರೆ. ಆದರೆ ಇಲ್ಲಿ ಕಾಂಗ್ರೆಸ್ ಹಾಗೂ ಜೆಡಿಎಸ್ ಅಭ್ಯರ್ಥಿಗಳನ್ನು ಒಬ್ಬರಾದ ಮೇಲೆ ಒಬ್ಬರಂತೆ ಆರಿಸುತ್ತಿರುವ ಜನರು ಪ್ರತಿ ಸಲ ಕುತೂಹಲಕ್ಕೆ ಕಾರಣರಾಗಿದ್ದಾರೆ.
-
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Gold Price Today: ಆಭರಣ ಪ್ರಿಯರಿಗೆ ಬಿಗ್ ರಿಲೀಫ್: ಬೆಂಗಳೂರಿನಲ್ಲಿ ಚಿನ್ನದ ಬೆಲೆ ದಿಢೀರ್ ಇಳಿಕೆ; ಇಂದಿನ ದರ ಇಲ್ಲಿದೆ -
Horoscope March 9; ಈ ರಾಶಿಯವರ ಅದೃಷ್ಟವೇ ಬದಲಾಗುತ್ತೆ: 12 ರಾಶಿ ಭವಿಷ್ಯ ತಿಳಿಯಿರಿ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
Sensex crash: ಷೇರು ಮಾರುಕಟ್ಟೆಯಲ್ಲಿ ಭಾರಿ ಸಂಚಲನ; ಸೆನ್ಸೆಕ್ಸ್ 2100 ಅಂಕ ಕುಸಿತ -
E-Bus: ಕರ್ನಾಟಕದ ಹೊಸ ಯೋಜನೆಯಡಿ ಗ್ರಾಮೀಣ ಭಾಗಗಳಲ್ಲೂ ಓಡಾಡಲಿವೆ 1950 ಎಲೆಕ್ಟ್ರಿಕ್ ಬಸ್ಗಳು -
Prediction on Donald Trump: ಟ್ರಂಪ್ ಗೆಲುವು, ಇರಾನ್ ಯುದ್ಧ ಭವಿಷ್ಯ: 3 ಭವಿಷ್ಯವಾಣಿಯಲ್ಲಿ 2 ನಿಜ, ಮತ್ತೊಂದೇನು -
ಕರ್ನಾಟಕದಲ್ಲಿ 40 ಡಿಗ್ರಿ ಸೆಲ್ಸಿಯಸ್ ದಾಟಿದೆ ಉಷ್ಣಾಂಶ: ಈಗಿನ್ನೂ ಮಾರ್ಚ್, ಮೇ ಕಥೆ ಹೇಗೆ? ಬಿಸಿಗಾಳಿಗೆ ಬಸವಳಿದ ಜನ -
Sanju Samson: ಟಿ20 ವಿಶ್ವಕಪ್ ಗೆಲುವಿನ ಬಳಿಕ ಕ್ರಿಕೆಟ್ ದೇವರ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಸಂಜು ಸ್ಯಾಮ್ಸನ್












Click it and Unblock the Notifications