ಮಾಲೂರು ವಿಧಾನಸಭೆ ಕ್ಷೇತ್ರ: ಜನರ ಸಮಸ್ಯೆಗಳಿಗೆ ಅಭಿವೃದ್ಧಿಯ ಪರದೆ
ಮಾಸ್ತಿ ವೆಂಕಟೇಶ್ ಅಯ್ಯಂಗಾರ್ ಅವರ ಜನ್ಮ ಸ್ಥಳ ಇರುವ ಈ ತಾಲೂಕಿನಲ್ಲಿ ಸಾಹಿತ್ಯದ ಪ್ರಭಾವ ಅಷ್ಟಾಗಿ ಕಾಣಿಸುವುದಿಲ್ಲ. ಈಗೇನಿದ್ದರೂ ರಿಯಲ್ ಎಸ್ಟೇಟ್, ರಾಜಕಾರಣ, 'ಗಾಡ್ ಮಾಫಿಯಾ', ಕೈಗಾರಿಕೆ ಪ್ರದೇಶದ ಅಭಿವೃದ್ಧಿ ಇಂಥದ್ದೇ ಕಂಡುಬರುತ್ತದೆ. ಈ ಬಾರಿಯ ವಿಧಾನಸಭೆ ಚುನಾವಣೆಯಲ್ಲಿ ತ್ರಿಕೋನ ಸ್ಪರ್ಧೆಯ ಲಕ್ಷಣ ಕಂಡುಬರುತ್ತಿದೆ.
ಹಾಲಿ ಶಾಸಕ - ಮಂಜುನಾಥ ಗೌಡ ಜೆಡಿಎಸ್ ಅಭ್ಯರ್ಥಿ. ಅವರ ಒಂದು ಕಾಲದ ನಿಷ್ಠ- ಆಪ್ತ ನಂಜೇಗೌಡ ಅವರು ಕಾಂಗ್ರೆಸ್ ಅಭ್ಯರ್ಥಿ. ಇನ್ನು ಬಿಜೆಪಿಯಿಂದ ಕೃಷ್ಣಯ್ಯ ಶೆಟ್ಟಿ ಸ್ಪರ್ಧಾಳು. ಇದು ಕೃಷ್ಣಯ್ಯ ಶೆಟ್ಟಿ ಅವರು ಬಿಜೆಪಿಯನ್ನು ಪ್ರತಿನಿಧಿಸಿ, ಗೆದ್ದಿದ್ದ ಕ್ಷೇತ್ರ. ಕೈಗಾರಿಕೆ, ರಿಯಲ್ ಎಸ್ಟೇಟ್ ಈ ತಾಲೂಕಿನ ಪಾಲಿಗೆ ಎರಡು ಕಣ್ಣುಗಳು.
ಇನ್ನು ರಿಯಲ್ ಎಸ್ಟೇಟ್ ನ ಚೇತರಿಕೆ ಹಾಗೂ ಕೈಗಾರಿಕೆ ಕೇಂದ್ರಗಳಾಗಿರುವುದನ್ನಷ್ಟೇ ಅಭಿವೃದ್ಧಿ ಎಂದು ಪರಿಗಣಿಸಲು ಸಾಧ್ಯವಿಲ್ಲ. ಮಾನವ -ಪ್ರಾಣಿ ಸಂಘರ್ಷ ಸೇರಿದಂತೆ ಹಲವು ಸಮಸ್ಯೆಗಳಿವೆ.

ಒಕ್ಕಲಿಗ ಮತದಾರರ ಪ್ರಾಬಲ್ಯ ಇಲ್ಲಿ ಹೆಚ್ಚಿದೆ. ಆ ನಂತರ ಪರಿಶಿಷ್ಟ ಜಾತಿ ಹಾಗೂ ಪಂಗಡದವರ ಮತಗಳಿವೆ. ಆ ನಂತರದ ಸ್ಥಾನ ಮುಸ್ಲಿಮರದು. ಮುಂದಿನ ಪ್ರಾಶಸ್ತ್ಯ ಕುರುಬ ಸಮುದಾಯದ್ದು. ತಿಗಳರು (ವಹ್ನಿಕುಲ), ಬಲಜಿಗರು, ವಾಲ್ಮೀಕಿ, ಗಾಣಿಗರು, ಪದ್ಮಶಾಲಿ ಸಮಾಜದವರದು.
ಮಾಲೂರು ಬೆಂಗಳೂರಿಗೂ ಬಲು ಸಮೀಪದಲ್ಲಿದೆ. ಈಗಾಗಲೇ ಕ್ಷೇತ್ರದಲ್ಲಿ ಪುಕ್ಕಟೆ ಪ್ರವಾಸ, ಊಟ-ತಿಂಡಿ, ಸೀರೆ ಹಂಚಿಕೆ, ನಾಟಕ ಪ್ರದರ್ಶನ ಎಲ್ಲ ಒಂದು ರೌಂಡ್ ಮುಗಿದುಹೋಗಿದೆ.
ಮಾಲೂರಿನಲ್ಲಿ ಕಲ್ಲು ಗಣಿಗಾರಿಕೆಯು ಅಕ್ರಮವಾಗಿ ನಡೆಯುವ ಹಲವು ಪ್ರಕರಣಗಳು ಕಣ್ಣೆದುರು ಇವೆ. ಅಂಥ ಕಡೆ ಚಿರತೆ ಓಡಾಟ ಹೆಚ್ಚು. ಆ ಬಗ್ಗೆ ಸ್ಥಳೀಯರಲ್ಲಿ ಬಹಳ ಆತಂಕ ಇದೆ. ಇನ್ನು ಇಲ್ಲಿಂದ ಮಣ್ಣಿನ ಸಾಗಣೆ ಪಕ್ಕದ ಕೇರಳಕ್ಕೆ ನಡೆಯುತ್ತದೆ. ಅದು ಕೂಡ ಇಲ್ಲಿನ ಗಂಭೀರ ಸಮಸ್ಯೆ.
ಟೇಕಲ್ ಹೋಬಳಿಯಲ್ಲಿ ಅಕ್ರಮ ಕಲ್ಲು ಗಣಿಗಾರಿಕೆ ಸಮಸ್ಯೆ ತೀವ್ರವಾಗಿದೆ. ಲಕ್ಕೂರು ಹಾಗೂ ಕಸಬಾ ಹೋಬಳಿ ಕೆರೆಗಳ ಮಣ್ಣು ಕೇರಳಕ್ಕೆ ಸಾಗಣೆ ಮಾಡುತ್ತಾರೆ. ಲಕ್ಕೂರು ಹೋಬಳಿಯ ಗಡಿ ಭಾಗಗಳಲ್ಲಿ ಕುಡಿಯುವ ನೀರಿನ ಫ್ಲೋರೈಡ್ ಅಂಶದ ಸಮಸ್ಯೆ ಇದೆ. ಈಗ ಅಲ್ಲೆಲ್ಲ ಶುದ್ಧ ನೀರಿನ ಘಟಕ ಆರಂಭಿಸಲಾಗಿದೆ. ಆದರೆ ಅದು ಪೂರ್ಣ ಪ್ರಮಾಣದಲ್ಲಿ ಆಗಿಲ್ಲ.
ಮಾಲೂರು ತಾಲೂಕಿನಾದ್ಯಂತ ದೊಡ್ಡ ರಸ್ತೆಗಳು ಚೆನ್ನಾಗಿ ಆಗಿವೆ. ಆದರೆ ಹಳ್ಳಿಗಳಲ್ಲಿ ಸಂಪರ್ಕ ರಸ್ತೆಗಳದೇ ತೊಂದರೆ. ಖಾಸಗಿ ಸಹಭಾಗಿತ್ವದಲ್ಲಿ ಶಾಸಕ ಮುಂಜುನಾಥ ಗೌಡ ಮಾಡಿರುವ ಸ್ಟೇಡಿಯಂ, ರಂಗಮಂದಿರ, ಶಾದಿ ಮಹಲ್, ಶಿಕ್ಷಕರ ಭವನ, ಒಂದೂವರೆ ಕೋಟಿ ರುಪಾಯಿ ವೆಚ್ಚದಲ್ಲಿ ನಿರ್ಮಾಣ ಮಾಡಿರುವ ಉದ್ಯಾನದ ಬಗ್ಗೆ ಒಳ್ಳೆ ಮಾತು ಕೇಳಿಬರುತ್ತದೆ. ಕೂರಂಡಹಳ್ಳಿ ಕೈಗಾರಿಕಾ ಪ್ರಾಂಗಣದಿಂದ ಸ್ಥಳೀಯರಿಗೆ ಅನುಕೂಲವಾಗಿದೆ.
ತಮಿಳುನಾಡಿನಿಂದ ಕರ್ನಾಟಕಕ್ಕೆ ಹಾದು ಹೋಗುವ ವಾಹನಗಳು ಮಾಲೂರು ಪಟ್ಟಣದೊಳಗೆ ಹೋಗುತ್ತವೆ. ಇದರಿಂದ ಬಹಳ ಸಮಸ್ಯೆಯಾಗಿದೆ. ಇದಕ್ಕೊಂದು ಪರ್ಯಾಯ ಆಗಬೇಕಿದೆ ಎಂಬುದು ಸ್ಥಳೀಯರ ಆಗ್ರಹ. ಇಲ್ಲಿನ ರೈಲ್ವೆ ಸೇತುವೆ ಸರಿಪಡಿಸಬೇಕಿದೆ. ರಾಜಕಾರಣದ ವಿಚಾರಕ್ಕೆ ಬಂದರೆ ಈ ಸಲ ಇಲ್ಲಿ ತ್ರಿಕೋನ ಸ್ಪರ್ಧೆ ಕಾಣುತ್ತದೆ.
-
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
Karnataka Weather: ಕರ್ನಾಟಕದಲ್ಲಿ ಹೆಚ್ಚಿದ ಬಿಸಿಲ ಧಗೆ: ಬಳ್ಳಾರಿಯಲ್ಲಿ ಗರಿಷ್ಠ ತಾಪಮಾನ ದಾಖಲು, ಬೀದರ್ನಲ್ಲಿ ಚಳಿ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Expenses: ಬೆಂಗಳೂರು ಎಷ್ಟು ದುಬಾರಿ, ಅಮೆಜಾನ್ ಉದ್ಯೋಗಿ ಹಂಚಿಕೊಂಡ ವಾರಾಂತ್ಯದ ವೆಚ್ಚದ ವಿಡಿಯೋ ವೈರಲ್ -
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
Vijay Divorce: ನನ್ನ ಸಮಸ್ಯೆಗಳ ಬಗ್ಗೆ ನೀವು ತಲೆಕೆಡಿಸಿಕೊಳ್ಳಬೇಡಿ: ಡಿವೋರ್ಸ್ ಬಗ್ಗೆ ಕೊನೆಗೂ ಮೌನ ಮುರಿದ ನಟ ದಳಪತಿ ವಿಜಯ್ -
Horoscope March 8: ಈ ರಾಶಿಯವರಿಗೆ ಉದ್ಯೋಗದಲ್ಲಿ ಒಳಿತು, ಹೂಡಿಕೆಗಳಿಂದ ಲಾಭ, ದಿನ ಭವಿಷ್ಯ -
Kamal Haasan: ನಿಮ್ಮ ಕೆಲಸ ಎಷ್ಟಿದೆಯೋ ಅಷ್ಟು ನೋಡಿಕೊಳ್ಳಿ; ಭಾರತ ಸಾರ್ವಭೌಮ ರಾಷ್ಟ್ರ: ಟ್ರಂಪ್ಗೆ ಕಮಲ್ ಹಾಸನ್ ತಿರುಗೇಟು -
ಚಿಕ್ಕಬಳ್ಳಾಪುರದ ಜಿಲ್ಲೆಯ ಸತ್ಯಸಾಯಿ ಗ್ರಾಮಕ್ಕೆ ನಟ ರಿಷಬ್ ಶೆಟ್ಟಿ ಭೇಟಿ: ಮಾನವೀಯ ಕಾರ್ಯಗಳಿಗೆ ಶ್ಲಾಘನೆ -
Kiccha Sudeep: ಸುದೀಪ್ ನಂ 1 ಅಂತ ಗೂಗಲ್ನಲ್ಲಿ ಬರುತ್ತಾ, ನಟ ಆದ್ರೆ ತಲೆ ಮೇಲೆ ಕೊಂಬು ಇದ್ಯಾ: ಡಾಗ್ ಸತೀಶ್, ವೈರಲ್ ವಿಡಿಯೋ -
IMD Weather Forecast: ಭಾರತ vs ನ್ಯೂಜಿಲೆಂಡ್ ಟಿ20 ವಿಶ್ವಕಪ್ ಫೈನಲ್: ಅಹಮದಾಬಾದ್ನಲ್ಲಿ ಹವಾಮಾನ ಹೇಗಿದೆ, ಮಳೆ ಭೀತಿ ಇದೆಯೇ -
Jaggery: ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್, ಬಣ್ಣ, ಸಕ್ಕರೆ ಮಿಶ್ರಣ: ಪರಿಶೀಲನೆ ಮಾಡುವ ಸರಳ ವಿಧಾನಗಳು












Click it and Unblock the Notifications