ಉಚಿತ ಶಿಕ್ಷಣ, ವಸತಿ, ಆಹಾರ ಎಂಇಪಿ ಪ್ರಣಾಳಿಕೆ ಪ್ರಕಟ
ಬೆಂಗಳೂರು, ಏಪ್ರಿಲ್ 12: ಮಹಿಳೆಯರನ್ನು ರಾಜಕೀಯವಾಗಿ ಸಬಲೀಕರಣಗೊಳಿಸುವ ಹಿನ್ನೆಲೆಯಲ್ಲಿ ಅಸ್ತಿತ್ವಕ್ಕೆ ತರಲಾಗಿರುವ ಅಖಿಲ ಭಾರತ ಮಹಿಳಾ ಎಂಪವರ್ ಮೆಂಟ್ ಪಾರ್ಟಿ(AIMEP) ತನ್ನ ಚುನಾವಣಾ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದೆ.
ಪಕ್ಷವು ಯಾವುದೇ ಒಂದು ಜಾತಿಗೆ ಸೀಮಿತವಾಗಿಲ್ಲ. ಜಾತ್ಯಾತೀತ ಪಕ್ಷವಾಗಿದ್ದು, ಬರುವ ಚುನಾವಣೆಯಲ್ಲಿ ರಾಜ್ಯದ ಅರ್ಧದಷ್ಟು ಕ್ಷೇತ್ರಗಳಲ್ಲಿ ಮಹಿಳೆಯರಿಗೆ ಆದ್ಯತೆ ನೀಡಲಾಗುತ್ತದೆ. ನಮ್ಮ ಪಕ್ಷದ ಚಿನ್ಹೆ ವಜ್ರ ಆಗಿದೆ. ಮಾನವೀಯತೆಗಾಗಿ ನ್ಯಾಯ ಎಂಬ ಧ್ಯೇಯ ಹೊಂದಲಾಗಿದೆ ಎಂದು ಡಾ. ನೌಹೀರಾ ಶೇಖ್ ಹೇಳಿದ್ದಾರೆ.
'ನಾವು ಅಧಿಕಾರಕ್ಕೆ ಬಂದರೆ, ಬಿಪಿಎಲ್ ಕಾರ್ಡುದಾರರ ಮಕ್ಕಳಿಗೆ ಪ್ರಿಕೆಜಿಯಿಂದ ಪಿಜಿವರೆಗೂ ಉಚಿತ ಶಿಕ್ಷಣ ನೀಡುವ ಭರವಸೆ ನೀಡಿದ್ದಾರೆ.

ಮಿಕ್ಕಂತೆ, ರೈತರ ಸಂಪೂರ್ಣ ಸಾಲ ಮನ್ನ, ಮಹಿಳೆಯರಿಗೆ ಬಡ್ಡಿ ರಹಿತ ಸಾಲ, ರೈತರಿಗೆ ಬೆಳೆ ಬೆಳೆಯುವ ಮುನ್ನ ಮುಂಗಡ ಹಣ ನೀಡುವುದು ಮುಂತಾದ ಯೋಜನೆಗಳನ್ನು ಪ್ರಕಟಿಸಲಾಗಿದೆ.
ಭ್ರಷ್ಟಾಚಾರ ತಡೆಯಲು ಎಲ್ಲ ಸರ್ಕಾರಿ ಕಚೇರಿಗಳಲ್ಲಿ ಸಿಸಿಟಿವಿ ಕಡ್ಡಾಯ, ಬಿಪಿಎಲ್ ಕಾರ್ಡ್ ದಾರರಿಗೆ 35 ಕೆಜಿ ಅಕ್ಕಿ ಪೂರೈಕೆ, ರಾಜ್ಯದ ಎಲ್ಲಾ ಜಿಲ್ಲೆಗಳಿಗೂ ಆಹಾರ ಪೂರೈಕೆ ಕ್ಯಾಂಟೀನ್ ಸ್ಥಾಪನೆ, ಉಚಿತ ಆರೋಗ್ಯ ವಿಮಾ ಸೌಲಭ್ಯ, ಎಲ್ಲಾ ಮಹಿಳೆಯರಿಗೂ ಉಚಿತ ಸ್ಯಾನಿಟರಿ ನ್ಯಾಪ್ ಕಿನ್ ಪೂರೈಕೆ.. ಮುಂತಾದ ಯೋಜನೆಗಳಿವೆ.

ನಮ್ಮ ಅಭ್ಯರ್ಥಿಗಳು 224 ಕ್ಷೇತ್ರಗಳಲ್ಲಿ ಕಣಕ್ಕಿಳಿಯುತ್ತಿದ್ದಾರೆ. ನಮ್ಮ ಪಕ್ಷದಿಂದ ಕಣಕ್ಕಿಳಿಯಲು ಒಟ್ಟು 5700 ಆಕಾಂಕ್ಷಿಗಳು ಅರ್ಜಿ ಸಲ್ಲಿಸಿದ್ದರು. ಎಲ್ಲ ಕ್ಷೇತ್ರಕ್ಕೆ ಅಭ್ಯರ್ಥಿಗಳನ್ನು ಅಂತಿಮಗೊಳಿಸಲಾಗಿದೆ. ದಲಿತ, ಲಿಂಗಾಯತ, ಮುಸ್ಲಿಂ ಹೀಗೆ ಎಲ್ಲರೂ ಇದ್ದಾರೆ. ವಿಧಾನಸಭೆ ಚುನಾವಣೆಯಲ್ಲಿ ನಾಲ್ಕು ಕ್ಷೇತ್ರ ರೈತರಿಗೆ ಮೀಸಲಾಗಿದೆ.

ಮಾನವ ಹಕ್ಕುಗಳ ಹೋರಾಟಗಾರ್ತಿ, ಉದ್ಯಮಿ ಹಾಗೂ ಹೀರಾ ಸಮೂಹದ ಸಂಸ್ಥಾಪಕಿ ಮತ್ತು ಸಿಇಒ ಡಾ.ನೌಹೀರಾ ಶೇಖ್ ಮಹಿಳೆಯರನ್ನು ಜಾತಿ, ವರ್ಗ, ಧಾರ್ಮಿಕತೆ ಮತ್ತು ಪ್ರದೇಶದ ಭಿನ್ನತೆ ಮೀರಿ ಸಬಲೀಕರಣಗೊಳಿಸುವ ಅಖಿಲ ಭಾರತೀಯ ಮಹಿಳಾ ಸಬಲೀಕರಣ ಪಕ್ಷ (ಎಐಎಂಇಪಿ) ಎಂಬ ರಾಷ್ಟ್ರೀಯ ಪಕ್ಷ ಪ್ರಾರಂಭಿಸಿದ್ದನ್ನು ಇಲ್ಲಿ ಸ್ಮರಿಸಬಹುದು.
-
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ












Click it and Unblock the Notifications