ಮಕ್ಕಳ ಊಟದ ತಟ್ಟೆಗೆ ಕೈಯಿಟ್ಟ ರಮಾನಾಥ ರೈಗೆ ಹೀನಾಯ ಸೋಲು
ಮಂಗಳೂರು, ಮೇ 15: ಹದಿನೈದನೇ ಕರ್ನಾಟಕ ಅಸೆಂಬ್ಲಿ ಚುನಾವಣೆಯ ಫಲಿತಾಂಶ ಹೊರಬೀಳುತ್ತಿದ್ದು, ಬಿಜೆಪಿ ಸರಳ ಬಹುಮತದತ್ತ ದಾಪುಗಾಲು ಹಾಕುತ್ತಿದೆ.
ಇತ್ತೀಚೆಗೆ ಬಂದ ಮಾಹಿತಿಯ ಪ್ರಕಾರ, ದಕ್ಷಿಣಕನ್ನಡ ಜಿಲ್ಲೆಯ ಬಂಟ್ವಾಳ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮತ್ತು ಹಾಲೀ ಅರಣ್ಯ ಸಚಿವ ರಮಾನಾಥ ರೈ ಹೀಲಾಯ ಸೋಲು ಅನುಭವಿಸಿದ್ದಾರೆ.
ಬಿಜೆಪಿಯ ರಾಜೇಶ್ ನಾಯಕ್ ಅವರು ರಮಾನಾಥ ರೈ ಅವರನ್ನು ಭಾರೀ ಅಂತರದಿಂದ ಸೋಲಿಸಿ, ಮೊದಲ ಬಾರಿಗೆ ವಿಧಾನಸಭೆಗೆ ಆಯ್ಕೆಯಾಗಿದ್ದಾರೆ. ರಾಜೇಶ್ ನಾಯಕ್ ಅವರಿಗೆ 97,802, ರೈ ಅವರಿಗೆ 81,831 ಮತಗಳು ಬಂದಿವೆ. ರಾಜೇಶ್ ನಾಯಕ್ 15,971 ಮತಗಳ ಅಂತರದಿಂದ ಗೆಲವು ಸಾಧಿಸಿದ್ದಾರೆ.

ಸತತವಾಗಿ ಎಂಟನೇ ಬಾರಿಗೆ ನಾಮಪತ್ರ ಸಲ್ಲಿಸಲಿದ್ದ ರಮಾನಾಥ್ ರೈ, ಕಲ್ಲಡ್ಕ ಶಾಲೆಗೆ ಬಿಸಿಯೂಟ ನಿಲ್ಲಿಸಿದ್ದು ಮತ್ತು ಅಲ್ಪಸಂಖ್ಯಾತ ಮತದಿಂದಲೇ ಜಯ ಸಾಧಿಸುತ್ತಿದ್ದೇನೆ ಎನ್ನುವ ರೈ ಹೇಳಿಕೆ ಅವರಿಗೆ ತಿರುಗುಬಾಣವಾಗಿದೆ.
ಇದರ ಜೊತೆಗೆ, ಜಿಲ್ಲೆಯ ಹಿರಿಯ ಕಾಂಗ್ರೆಸ್ ಮುಖಂಡ ಜನಾರ್ಧನ ಪೂಜಾರಿಯವರ ಬಗ್ಗೆ ರಮಾನಾಥ ರೈ ಅವರು ಅವಹೇಳನಾಕಾರಿ ಹೇಳಿಕೆ ನೀಡಿದ್ದಾರೆ ಎನ್ನುವ ಸುದ್ದಿ, ಬಿಲ್ಲವ ಸಮದಾಯವರನ್ನು ಕೆರಳಿಸಿರಬಹುದು.
ಕಲ್ಲಡ್ಕ ಶ್ರೀರಾಮವಿದ್ಯಾಕೇಂದ್ರದ ಶಾಲೆಗಳಿಗೆ ಮಧ್ಯಾಹ್ನದ ಬಿಸಿಯೂಟ ಕೊಲ್ಲೂರು ಮೂಕಾಂಬಿಕೆ ದೇವಾಲಯದಿಂದ ಬರುತ್ತಿತ್ತು. ಸರಕಾರೀ ಶಾಲೆಗಳಿಗೆ ಮಾತ್ರ ಬಿಸಿಯೂಟ ನೀಡುವುದು ನಿಯಮ ಎನ್ನುವ ಕಾರಣ ನೀಡಿ, ಮಧ್ಯಾಹ್ನದ ಊಟವನ್ನು ನಿಲ್ಲಿಸಲಾಗಿತ್ತು.
ಮತಎಣಿಕೆಯ ಮುನ್ನಾದಿನವಾದ ಸೋಮವಾರದಂದು (ಮೇ 14) ರಮಾನಾಥ ರೈ, ಕೊಲ್ಲೂರು ದೇವಾಲಯಕ್ಕೆ ಭೇಟಿ ನೀಡಿದ್ದರು.
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ












Click it and Unblock the Notifications