ಶಿಡ್ಲಘಟ್ಟ: ನಿರ್ಣಾಯಕ ಆಗಲಿದೆ ಮೇಲೂರು ರವಿ ಸ್ಪರ್ಧೆ
ಏಷ್ಯಾದಲ್ಲೇ ಅತಿ ದೊಡ್ಡ ರೇಷ್ಮೆ ಮಾರುಕಟ್ಟೆ ಇರುವುದು ಈ ತಾಲೂಕಿನಲ್ಲಿ. ಇಲ್ಲಿನ ರೇಷ್ಮೆಗೂ ಒಳ್ಳೆ ಬೇಡಿಕೆ ಇದೆ. ಒಳಚರಂಡಿ ಸೌಲಭ್ಯ ಹೊಂದಿದ ಮೊದಲ ನಗರ ಎಂಬ ಅಗ್ಗಳಿಕೆ ಶಿಡ್ಲಘಟ್ಟದ್ದು. ದೇಶಭಕ್ತರು, ಯೋಧರನ್ನು ಹೊಂದಿರುವ ಭಕ್ತರಹಳ್ಳಿ ಈ ತಾಲೂಕಿನ ಪ್ರಮುಖ ಗ್ರಾಮ.
ಇಲ್ಲಿ ಒಕ್ಕಲಿಗರ ಮತಗಳು ನಿರ್ಣಾಯಕವಾದವು. ಪಟ್ಟಣದಲ್ಲಿ ಮುಸ್ಲಿಮರ ಮತಗಳು ಪ್ರಮುಖ ಪಾತ್ರ ವಹಿಸುತ್ತವೆ. ಈ ತಾಲೂಕಿನಲ್ಲಿ ಕಾಂಗ್ರೆಸ್ ನ ಪ್ರಾಬಲ್ಯ ಕಾಯ್ದುಕೊಂಡು ಬಂದಿತ್ತು. ಕಳೆದ ಬಾರಿಯ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ನ ವಿ.ಮುನಿಯಪ್ಪ ಅವರನ್ನು ಸೋಲಿಸಿದ ಜೆಡಿಎಸ್ ನ ರಾಜಣ್ಣ ಶಾಸಕರಾದರು.
ಒಂದು ಕಾಲದಲ್ಲಿ ಕಮ್ಯುನಿಸ್ಟ್ ಪಕ್ಷದಿಂದ ಪಾಪಣ್ಣ ಎಂಬುವವರು ಶಾಸಕರಾಗಿದ್ದರು. ತಾಲೂಕಿನ ಗ್ರಾಮೀಣ ಪ್ರದೇಶಗಳು ಸೌಕರ್ಯಗಳ ಕೊರತೆ ಎದುರಿಸುತ್ತಿದ್ದು, ಅಭಿವೃದ್ಧಿ ಆಗಬೇಕಿದೆ. ಈ ಭಾಗದ ಜನರ ಹೆಚ್ಚಿನ ವಹಿವಾಟು ಚಿಂತಾಮಣಿ ಮತ್ತು ಬೆಂಗಳೂರು ಜೊತೆಗೆ ಹೆಚ್ಚು.

ಮೇಲೂರಿನ ರವಿ ಜೆಡಿಎಸ್ ಟಿಕೆಟ್ ಕೇಳಿದ್ದು, ಅವರಿಗೆ ಟಿಕೆಟ್ ಸಿಗದಿದ್ದರೂ ಪಕ್ಷೇತರರಾಗಿ ನಿಲ್ಲುವ ಸಾಧ್ಯತೆ ಇದೆ. ಒಂದು ವೇಳೆ ಹಾಗಾದಲ್ಲಿ ಕಾಂಗ್ರೆಸ್ ನ ಅಭ್ಯರ್ಥಿಗೆ ಅನುಕೂಲ ಆಗುವ ಸಾಧ್ಯತೆಗಳಿವೆ ಎಂಬ ಮಾತುಗಳು ಕೇಳಿಬರುತ್ತಿವೆ.
ಶಿಡ್ಲಘಟ್ಟದ ದೇವರು ಹಿಂದೆ-ಮುಂದೆ ಅನ್ನೋ ಮಾತು ಕೇಳಿರ್ತೀರಿ. ಅದು ಯಾಕೆ ಗೊತ್ತಾ? ಅಲ್ಲಿನ ರಸ್ತೆ ಅಷ್ಟು ಕಿಷ್ಕಿಂದೆ. ದೇವರ ರಥವನ್ನು ನೇರವಾಗಿ ತಿರುಗಿಸಲು ಸಹ ಸಾಧ್ಯವಾಗದಷ್ಟು ಇಕ್ಕಟ್ಟು. ಅಂದರೆ ರಸ್ತೆ ಅಭಿವೃದ್ಧಿ ಆಗಬೇಕು ಅನ್ನೋದು ಸತ್ಯ.
ಇನ್ನು ಇಲ್ಲಿನ ಜನರ ಬಹು ಕಾಲದ ಬೇಡಿಕೆ ಅಂದರೆ ಅತ್ಯಾಧುನಿಕ ರೇಷ್ಮೆ ಮಾರುಕಟ್ಟೆ ನಿರ್ಮಾಣ. ಆ ಬೇಡಿಕೆ ಇನ್ನೂ ಈಡೇರಿಲ್ಲ. ಆ ನಂತರ ಅರಣ್ಯಪ್ರದೇಶದ ಅಭಿವೃದ್ಧಿ ಆಗಬೇಕು ಎಂಬುದು ಕೂಡ ಇನ್ನೂ ಪ್ರಸ್ತಾವದ ಹಂತದಲ್ಲಿಯೇ ಇದೆ. ಅದು ಸಾಕಾರ ಆಗುತ್ತದಾ ಎಂಬ ಬಗ್ಗೆ ಜನರ ನಿರೀಕ್ಷೆಯೂ ಹಾಗೇ ಇದೆ.
ವಿಧಾನಸಭೆ ಚುನಾವಣೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ | ಯಾವ ಪಕ್ಷಕ್ಕೆಷ್ಟು ಸೀಟು? ನೀವೇ ಊಹಿಸಿ
ಬಸ್ ಡಿಪೋ, ಅಂಬೇಡ್ಕರ್ ಭವನ, ರಂಗ ಮಂದಿರ, ರೇಷ್ಮೆ ಗೂಡಿನ ಮಾರುಕಟ್ಟೆಗೆ ಹೊಸ ಸ್ಥಳ ಮತ್ತು ಮೂಲಸೌಕರ್ಯ, ನಗರಸಭೆಯ ಹೊಸ ಕಟ್ಟಡ ಹಾಗೂ ನಗರದ ನೀರು ಮತ್ತು ತ್ಯಾಜ್ಯ ವಿಲೇವಾರಿ, ರೈಲು ನಿಲ್ದಾಣದಲ್ಲಿ ತರಕಾರಿ, ಆಲೂಗಡ್ಡೆ, ಈರುಳ್ಳಿ, ಗೊಬ್ಬರ ಮುಂತಾದವುಗಳ ಸಾಗಾಣಿಕೆಗೆ ಅನುಕೂಲಕರ ಗೋದಾಮು ಇಲ್ಲ್.
ಇನ್ನು ತಾಲೂಕು ರೇಷ್ಮೆಗೆ ಪ್ರಸಿದ್ಧವಾದರೂ ಇಲ್ಲಿ ರೇಷ್ಮೆ ಕಾಲೇಜಿಲ್ಲ, ಬೆಳೆಗಾರರಿಗೆ ಹಾಗೂ ನೂಲು ಬಿಚ್ಚಾಣಿಕೆದಾರರಿಗೆ ತರಬೇತಿ ಕೇಂದ್ರವಿಲ್ಲ, ಸಮರ್ಪಕವಾದ ಆಟದ ಮೈದಾನ ಮತ್ತು ಉದ್ಯಾನವನವಿಲ್ಲ... ಹೀಗೆ ಬೇಕುಗಳ ಪಟ್ಟಿಯಿದೆ.
-
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Shivam Dube: ಶಿವಂ ದುಬೆ ಸಾಧನೆಗೆ ಮನಸಾರೆ ಮೆಚ್ಚುಗೆ ಸೂಚಿಸಿದ ಪತ್ನಿ ಅಂಜುಮ್ ಖಾನ್: ಇನ್ಸ್ಟಾ ಪೋಸ್ಟರ್ ಭಾರೀ ವೈರಲ್ -
Fact Check: ಟಿ20 ವಿಶ್ವಕಪ್ ಫೈನಲ್ ಪಂದ್ಯಕ್ಕೂ ಮುನ್ನ ರಾಷ್ಟ್ರಗೀತೆ ವೇಳೆ ಕಣ್ಣೀರಿಟ್ಟ ಕಿವೀಸ್ ಆಟಗಾರ ಇಶ್ ಸೋಧಿ -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ












Click it and Unblock the Notifications