ಶಿರಾ ಕ್ಷೇತ್ರದಲ್ಲಿ ಸೌಕರ್ಯಕ್ಕೂ ಲೆಕ್ಕಾಚಾರದ ವಿತರಣೆ ಆರೋಪ
ತುಮಕೂರು ಜಿಲ್ಲೆ ಶಿರಾ ಕಾನೂನು ಸಚಿವ ಟಿ.ಬಿ.ಜಯಚಂದ್ರ ಪ್ರತಿನಿಧಿಸುವ ಕ್ಷೇತ್ರ. ಒಕ್ಕಲಿಗರು ಹಾಗೂ ಕುರುಬ ಸಮುದಾಯದ ಮತಗಳು ಬಹಳ ಪ್ರಾಶಸ್ತ್ಯ ಇರುವಂಥ ಕ್ಷೇತ್ರ. ಮುಸ್ಲಿಮರ ಮತಗಳು ಸಹ ನಿರ್ಣಾಯಕವಾಗಿವೆ. ಈ ಬಾರಿ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್ ನಿಂದ ಮಾಜಿ ಸಚಿವ ಸತ್ಯನಾರಾಯಣ ಹಾಗೂ ಕಾಂಗ್ರೆಸ್ ನಿಂದ ಜಯಚಂದ್ರ ಕಣಕ್ಕೆ ಇಳಿದಿದ್ದಾರೆ.
ಮೇಲ್ನೋಟಕ್ಕೆ ನೋಡುತ್ತಿದ್ದರೆ ಈ ಕ್ಷೇತ್ರದಲ್ಲಿ ಜೆಡಿಎಸ್ ವರ್ಸಸ್ ಕಾಂಗ್ರೆಸ್ ಎಂಬಂಥ ಸ್ಥಿತಿ ಇದೆ. ಇನ್ನು ತಾಲೂಕಿನಲ್ಲಿ ಮರಳು ದಂಧೆ ಅವ್ಯಾಹತವಾಗಿ ನಡೆಯುತ್ತಿದೆ ಎಂಬುದು ಆರೋಪ. ಜಯಚಂದ್ರ ಅವರಿಗೆ ಕ್ಷೇತ್ರದಲ್ಲಿ ಕೆಲವು ಕಡೆ ಮಾತ್ರ ಆಸಕ್ತಿ ಎಂದು ಆರೋಪಿಸುವವರೂ ಇದ್ದಾರೆ.
ರಾಜಕೀಯ ಒಂದೇ ಅಲ್ಲ, ಜಾತಿ ದೃಷ್ಟಿಯಿಂದಲೂ ಇಲ್ಲಿ ಆಗಾಗ ಒಕ್ಕಲಿಗ ವರ್ಸಸ್ ಕುರುಬ ಸಮುದಾಯ ಎಂಬ ಸಣ್ಣ ಮಟ್ಟಗಿನ ಅಸಮಾಧಾನ ಆಗಾಗ ಭುಗಿಲೇಳುತ್ತದೆ. ಜತೆಗೆ ತಾಲೂಕಿನಲ್ಲಿ ಮುಸ್ಲಿಮರ ಮತಗಳು ಸಹ ನಿರ್ಣಾಯಕವಾಗಿದ್ದು, ಒಟ್ಟಾರೆ ಈ ಸಲದ ವಿಧಾನಸಭೆ ಚುನಾವಣೆ ಜಿದ್ದಾಜಿದ್ದಿ ಕುತೂಹಲ ಮೂಡಿಸಿದೆ.

ಟಿ.ಬಿ.ಜಯಚಂದ್ರ ಅವರ ಪಾಲಿಗೆ ಇಲ್ಲಿ ಹಲವು ಸವಾಲಿದೆ. ಮುಖ್ಯವಾಗಿ ಕಾಂಗ್ರೆಸ್ ನ ಕೆಲ ಪ್ರಮುಖ ಮುಖಂಡರು ಜೆಡಿಎಸ್ ಗೆ ವಲಸೆ ಹೋಗಿದ್ದಾರೆ. ಅವರ ಪಾಲಿಗೆ ಹೊಸ ಸವಾಲಾಗಿ ಸಂತೋಷ್ ಜಯಚಂದ್ರ ಚಿಕ್ಕನಾಯಕನಹಳ್ಳಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಆಗಿರುವುದರಿಂದ ಆ ಕಡೆ ಕೂಡ ಗಮನ ಹರಿಸಬೇಕಾಗಿದೆ.
ಕಾಂಗ್ರೆಸ್ ಒಳಗೆ ಜಯಚಂದ್ರ ಅವರಿಗೆ ವಿರೋಧ ವ್ಯಕ್ತಪಡಿಸುವ ಹಾಗೂ ವೈಯಕ್ತಿಕ ವಿರೋಧಿಗಳೂ ಇದ್ದಾರೆ. ಜಯಚಂದ್ರ ಅವರ ಸೋಲಿಗೆ ಶ್ರಮಿಸುತ್ತೇನೆ ಎಂದು ಸಾರ್ವಜನಿಕವಾಗಿ ಘೋಷಣೆ ಮಾಡಿದ್ದನ್ನು ಈ ಸಂದರ್ಭದಲ್ಲಿ ಸ್ಮರಿಸಬಹುದು. ಅಂದಹಾಗೆ, ಶಿರಾದಲ್ಲಿ ನಂಜಾವಧೂತ ಸ್ವಾಮೀಜಿ ಮಠ ಇದೆ. ಇಲ್ಲಿನ ದರ್ಗಾ ಬಹಳ ಖ್ಯಾತಿ ಗಳಿಸಿದೆ.
ಕೆರೆಗಳಿಗೆ ನೀರು ಹರಿಸುವ ವಿಚಾರದಲ್ಲಿ ರಾಜಕೀಯ ಮಾಡಲಾಗುತ್ತಿದೆ ಎಂದು ಜನರು ಆರೋಪಿಸುತ್ತಾರೆ.
-
Sachin Tendulkar: ಅಭಿಷೇಕ್ ಶರ್ಮಾಗೆ ಕ್ರಿಕೆಟ್ ದೇವರು ಸಚಿನ್ ತೆಂಡ್ಯೂಲ್ಕರ್ ವಿಶೇಷ ಸಂದೇಶ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
ಟೀಕೆಗಳು ಸಾಯುತ್ತವೆ, ಕೆಲಸಗಳು ಉಳಿಯುತ್ತವೆ ಎಂಬ ಮಾತಿನಂತೆ ನಡೆದುಕೊಂಡ ಯುವರಾಜ್ ಸಿಂಗ್ ಶಿಶ್ಯ ಅಭಿಷೇಕ್ ಶರ್ಮಾ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Property: ಬೆಂಗಳೂರಿನ 510 ಕೋಟಿ ಮೌಲ್ಯದ 14 ಎಕರೆ ಭೂಮಿ ವಶಕ್ಕೆ ಪಡೆದ ಜಿಬಿಎ, ಕಾರಣವೇನು -
Jaggery: ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್, ಬಣ್ಣ, ಸಕ್ಕರೆ ಮಿಶ್ರಣ: ಪರಿಶೀಲನೆ ಮಾಡುವ ಸರಳ ವಿಧಾನಗಳು -
ಟಿ20 ವಿಶ್ವಕಪ್ 2026 ಭಾರತದ ಮುಡಿಗೆ: ಬಾಲ ಮುದುರಿಕೊಂಡ 'ಸೈಲೆಂಟ್' ಸ್ಯಾಂಟ್ನರ್












Click it and Unblock the Notifications