ಶಿರಾ ಕ್ಷೇತ್ರದಲ್ಲಿ ಸೌಕರ್ಯಕ್ಕೂ ಲೆಕ್ಕಾಚಾರದ ವಿತರಣೆ ಆರೋಪ
ತುಮಕೂರು ಜಿಲ್ಲೆ ಶಿರಾ ಕಾನೂನು ಸಚಿವ ಟಿ.ಬಿ.ಜಯಚಂದ್ರ ಪ್ರತಿನಿಧಿಸುವ ಕ್ಷೇತ್ರ. ಒಕ್ಕಲಿಗರು ಹಾಗೂ ಕುರುಬ ಸಮುದಾಯದ ಮತಗಳು ಬಹಳ ಪ್ರಾಶಸ್ತ್ಯ ಇರುವಂಥ ಕ್ಷೇತ್ರ. ಮುಸ್ಲಿಮರ ಮತಗಳು ಸಹ ನಿರ್ಣಾಯಕವಾಗಿವೆ. ಈ ಬಾರಿ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್ ನಿಂದ ಮಾಜಿ ಸಚಿವ ಸತ್ಯನಾರಾಯಣ ಹಾಗೂ ಕಾಂಗ್ರೆಸ್ ನಿಂದ ಜಯಚಂದ್ರ ಕಣಕ್ಕೆ ಇಳಿದಿದ್ದಾರೆ.
ಮೇಲ್ನೋಟಕ್ಕೆ ನೋಡುತ್ತಿದ್ದರೆ ಈ ಕ್ಷೇತ್ರದಲ್ಲಿ ಜೆಡಿಎಸ್ ವರ್ಸಸ್ ಕಾಂಗ್ರೆಸ್ ಎಂಬಂಥ ಸ್ಥಿತಿ ಇದೆ. ಇನ್ನು ತಾಲೂಕಿನಲ್ಲಿ ಮರಳು ದಂಧೆ ಅವ್ಯಾಹತವಾಗಿ ನಡೆಯುತ್ತಿದೆ ಎಂಬುದು ಆರೋಪ. ಜಯಚಂದ್ರ ಅವರಿಗೆ ಕ್ಷೇತ್ರದಲ್ಲಿ ಕೆಲವು ಕಡೆ ಮಾತ್ರ ಆಸಕ್ತಿ ಎಂದು ಆರೋಪಿಸುವವರೂ ಇದ್ದಾರೆ.
ರಾಜಕೀಯ ಒಂದೇ ಅಲ್ಲ, ಜಾತಿ ದೃಷ್ಟಿಯಿಂದಲೂ ಇಲ್ಲಿ ಆಗಾಗ ಒಕ್ಕಲಿಗ ವರ್ಸಸ್ ಕುರುಬ ಸಮುದಾಯ ಎಂಬ ಸಣ್ಣ ಮಟ್ಟಗಿನ ಅಸಮಾಧಾನ ಆಗಾಗ ಭುಗಿಲೇಳುತ್ತದೆ. ಜತೆಗೆ ತಾಲೂಕಿನಲ್ಲಿ ಮುಸ್ಲಿಮರ ಮತಗಳು ಸಹ ನಿರ್ಣಾಯಕವಾಗಿದ್ದು, ಒಟ್ಟಾರೆ ಈ ಸಲದ ವಿಧಾನಸಭೆ ಚುನಾವಣೆ ಜಿದ್ದಾಜಿದ್ದಿ ಕುತೂಹಲ ಮೂಡಿಸಿದೆ.

ಟಿ.ಬಿ.ಜಯಚಂದ್ರ ಅವರ ಪಾಲಿಗೆ ಇಲ್ಲಿ ಹಲವು ಸವಾಲಿದೆ. ಮುಖ್ಯವಾಗಿ ಕಾಂಗ್ರೆಸ್ ನ ಕೆಲ ಪ್ರಮುಖ ಮುಖಂಡರು ಜೆಡಿಎಸ್ ಗೆ ವಲಸೆ ಹೋಗಿದ್ದಾರೆ. ಅವರ ಪಾಲಿಗೆ ಹೊಸ ಸವಾಲಾಗಿ ಸಂತೋಷ್ ಜಯಚಂದ್ರ ಚಿಕ್ಕನಾಯಕನಹಳ್ಳಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಆಗಿರುವುದರಿಂದ ಆ ಕಡೆ ಕೂಡ ಗಮನ ಹರಿಸಬೇಕಾಗಿದೆ.
ಕಾಂಗ್ರೆಸ್ ಒಳಗೆ ಜಯಚಂದ್ರ ಅವರಿಗೆ ವಿರೋಧ ವ್ಯಕ್ತಪಡಿಸುವ ಹಾಗೂ ವೈಯಕ್ತಿಕ ವಿರೋಧಿಗಳೂ ಇದ್ದಾರೆ. ಜಯಚಂದ್ರ ಅವರ ಸೋಲಿಗೆ ಶ್ರಮಿಸುತ್ತೇನೆ ಎಂದು ಸಾರ್ವಜನಿಕವಾಗಿ ಘೋಷಣೆ ಮಾಡಿದ್ದನ್ನು ಈ ಸಂದರ್ಭದಲ್ಲಿ ಸ್ಮರಿಸಬಹುದು. ಅಂದಹಾಗೆ, ಶಿರಾದಲ್ಲಿ ನಂಜಾವಧೂತ ಸ್ವಾಮೀಜಿ ಮಠ ಇದೆ. ಇಲ್ಲಿನ ದರ್ಗಾ ಬಹಳ ಖ್ಯಾತಿ ಗಳಿಸಿದೆ.
ಕೆರೆಗಳಿಗೆ ನೀರು ಹರಿಸುವ ವಿಚಾರದಲ್ಲಿ ರಾಜಕೀಯ ಮಾಡಲಾಗುತ್ತಿದೆ ಎಂದು ಜನರು ಆರೋಪಿಸುತ್ತಾರೆ.
-
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
RCB: ಆರ್ಸಿಬಿ ಪಂದ್ಯದ ನಡುವೆಯೆ ಮತ್ತೊಮ್ಮ ಅಭಿಮಾನಿಗಳ ಮನಗೆದ್ದ 'ಕ್ರಶ್' ಅನನ್ಯಾ ಬಿರ್ಲಾ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
March 29 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
ಬೆಂಗಳೂರಿನ ಫುಟ್ಪಾತ್ಗಳ ದುರಸ್ತಿಗೆ ಶ್ರಮಿಸಿದ್ದ ಕೆನಡಾ ಪ್ರಜೆ ಈಗ ಮಿಜೋರಾಂಗೆ ಶಿಫ್ಟ್: 'ಬೆಂಗಳೂರಿಗೆ ವಿದಾಯ' ಎಂದ Vlogger












Click it and Unblock the Notifications