ತುರುವೇಕೆರೆ ಕ್ಷೇತ್ರದಲ್ಲಿ ತ್ರಿಕೋನ ಸ್ಪರ್ಧೆಗೆ ಅಖಾಡ ಸಿದ್ಧ
ತುಮಕೂರು ಜಿಲ್ಲೆ ತುರುವೇಕೆರೆಯ ವಿಧಾನಸಭಾ ಕ್ಷೇತ್ರದ ಶಾಸಕ ಎಂ.ಟಿ.ಕೃಷ್ಣಪ್ಪ ಜೆಡಿಎಸ್ ನವರು. ಈ ಸಲ ಕೂಡ ಅವರೇ ಈ ಕ್ಷೇತ್ರದಿಂದ ತೆನೆ ಹೊತ್ತ ಮಹಿಳೆ ಪಕ್ಷದ ಸ್ಪರ್ಧಾಳು. ಇನ್ನು ಬಿಜೆಪಿಯಿಂದ ಮಸಾಲೆ ಜಯರಾಂ ಸ್ಪರ್ಧೆಯಲ್ಲಿದ್ದಾರೆ. ಆದರೆ ಅವರು ಕೆಜೆಪಿಯಿಂದ ಬಿಜೆಪಿಗೆ ಬಂದವರು ಎಂಬುದು ಅಸಮಾಧಾನಕ್ಕೆ ಕಾರಣವಾಗಿದೆ.
ಅಂದಹಾಗೆ, ನಟ ಜಗ್ಗೇಶ್ ಈ ಹಿಂದೆ ಕಾಂಗ್ರೆಸ್ ನಿಂದ ಸ್ಪರ್ಧಿಸಿ ಗೆದ್ದು, ಆಪರೇಷನ್ ಕಮಲ ಸೀಸನ್ ನಲ್ಲಿ ಬಿಜೆಪಿಗೆ ಜಿಗಿದಿದ್ದರು. ಹೇಮಾವತಿ ನೀರು ದೊರೆತು ಇಲ್ಲಿನ ರೈತರು ಒಂದಿಷ್ಟು ಖುಷಿಯಾಗಿದ್ದಾರೆ. ಆದರೆ ಮೂಲಸೌಕರ್ಯದ ಸಮಸ್ಯೆ ಇದೆ. ಜತೆಗೆ ಆಸ್ಪತ್ರೆ ಅಂದರೆ ಚಿಕ್ಕನಾಯಕನಹಳ್ಳಿ ಕಡೆ ನೋಡುವಂಥ ಸ್ಥಿತಿಯಿದೆ.
ಇಲ್ಲಿನ ಬೇಟೆರಾಯಸ್ವಾಮಿ ದೇವಸ್ಥಾನ ಬಹಳ ಪ್ರಸಿದ್ಧಿ. ಮತ್ತೆ ರಾಜಕೀಯದ ಬಗ್ಗೆಯೇ ಮಾತನಾಡಬೇಕು ಅಂದರೆ ಈ ಬಾರಿ ಇಲ್ಲಿ ತ್ರಿಕೋನ ಸ್ಪರ್ಧೆ ಸಾಧ್ಯತೆ ಇದೆ. ತುರುವೇಕೆರೆಯ ರಸ್ತೆ, ಒಳಚರಂಡಿ ಮತ್ತೊಂದರ ಬಗ್ಗೆ ಸ್ಥಳೀಯರಲ್ಲಿ ಅಸಮಾಧಾನ ಇದೆ. ಅದು ಹೇಗೆ ವ್ಯಕ್ತವಾಗುತ್ತದೋ ಕಾದುನೋಡಬೇಕು.

ಕಾಂಗ್ರೆಸ್ ನಿಂದ ಅಖಾಡದಲ್ಲಿ ಇರುವವರು ಚೌದ್ರಿ ರಂಗಪ್ಪ. ಜೆಡಿಎಸ್ ನ ಎಂ.ಟಿ.ಕೃಷ್ಣಪ್ಪ ಅವರಿಗೆ ಬಿಜೆಪಿಯೊಳಗಿನ ಅಸಮಾಧಾನವು ಸಕಾರಾತ್ಮಕವಾಗಿ ಪರಿಣಮಿಸಬಹುದು ಎಂಬ ನಿರೀಕ್ಷೆ ಇದೆ. ಆದರೆ ಜನರ ಮಧ್ಯೆಯೇ ಕೃಷ್ಣಪ್ಪ ಅವರ ವರ್ಚಸ್ಸಿಗೆ ಒಂದಿಷ್ಟು ಕುಂದಾಗಿರುವುದಂತೂ ನಿಜ.
ಈ ಕ್ಷೇತ್ರದಲ್ಲಿ ಈ ಬಾರಿಯ ಸ್ಪರ್ಧೆ ಬಹಳ ಕುತೂಹಲಕರವಾಗಿದೆ. ಇಷ್ಟು ಕಾಲ ಜೆಡಿಎಸ್ ವರ್ಸಸ್ ಕಾಂಗ್ರೆಸ್ ಎಂಬ ವಾತಾವರಣ ಇತ್ತು. ಆದರೆ ಈಗ ಬಿಜೆಪಿಯು ಕಣದೊಳಗೆ ಗಟ್ಟಿಯಾಗಿ ಕಾಣಿಸಿಕೊಂಡಿದೆ.
-
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
Karnataka Weather: ಕರ್ನಾಟಕದಲ್ಲಿ ಹೆಚ್ಚಿದ ಬಿಸಿಲ ಧಗೆ: ಬಳ್ಳಾರಿಯಲ್ಲಿ ಗರಿಷ್ಠ ತಾಪಮಾನ ದಾಖಲು, ಬೀದರ್ನಲ್ಲಿ ಚಳಿ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Expenses: ಬೆಂಗಳೂರು ಎಷ್ಟು ದುಬಾರಿ, ಅಮೆಜಾನ್ ಉದ್ಯೋಗಿ ಹಂಚಿಕೊಂಡ ವಾರಾಂತ್ಯದ ವೆಚ್ಚದ ವಿಡಿಯೋ ವೈರಲ್ -
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
Vijay Divorce: ನನ್ನ ಸಮಸ್ಯೆಗಳ ಬಗ್ಗೆ ನೀವು ತಲೆಕೆಡಿಸಿಕೊಳ್ಳಬೇಡಿ: ಡಿವೋರ್ಸ್ ಬಗ್ಗೆ ಕೊನೆಗೂ ಮೌನ ಮುರಿದ ನಟ ದಳಪತಿ ವಿಜಯ್ -
Horoscope March 8: ಈ ರಾಶಿಯವರಿಗೆ ಉದ್ಯೋಗದಲ್ಲಿ ಒಳಿತು, ಹೂಡಿಕೆಗಳಿಂದ ಲಾಭ, ದಿನ ಭವಿಷ್ಯ -
Kamal Haasan: ನಿಮ್ಮ ಕೆಲಸ ಎಷ್ಟಿದೆಯೋ ಅಷ್ಟು ನೋಡಿಕೊಳ್ಳಿ; ಭಾರತ ಸಾರ್ವಭೌಮ ರಾಷ್ಟ್ರ: ಟ್ರಂಪ್ಗೆ ಕಮಲ್ ಹಾಸನ್ ತಿರುಗೇಟು -
ಚಿಕ್ಕಬಳ್ಳಾಪುರದ ಜಿಲ್ಲೆಯ ಸತ್ಯಸಾಯಿ ಗ್ರಾಮಕ್ಕೆ ನಟ ರಿಷಬ್ ಶೆಟ್ಟಿ ಭೇಟಿ: ಮಾನವೀಯ ಕಾರ್ಯಗಳಿಗೆ ಶ್ಲಾಘನೆ -
Kiccha Sudeep: ಸುದೀಪ್ ನಂ 1 ಅಂತ ಗೂಗಲ್ನಲ್ಲಿ ಬರುತ್ತಾ, ನಟ ಆದ್ರೆ ತಲೆ ಮೇಲೆ ಕೊಂಬು ಇದ್ಯಾ: ಡಾಗ್ ಸತೀಶ್, ವೈರಲ್ ವಿಡಿಯೋ -
IMD Weather Forecast: ಭಾರತ vs ನ್ಯೂಜಿಲೆಂಡ್ ಟಿ20 ವಿಶ್ವಕಪ್ ಫೈನಲ್: ಅಹಮದಾಬಾದ್ನಲ್ಲಿ ಹವಾಮಾನ ಹೇಗಿದೆ, ಮಳೆ ಭೀತಿ ಇದೆಯೇ -
Jaggery: ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್, ಬಣ್ಣ, ಸಕ್ಕರೆ ಮಿಶ್ರಣ: ಪರಿಶೀಲನೆ ಮಾಡುವ ಸರಳ ವಿಧಾನಗಳು












Click it and Unblock the Notifications