ಇದೆಂಥ ವಿಪರ್ಯಾಸ, ವಿದ್ಯಾರ್ಹತೆ 8 ನೇ ತರಗತಿ, ಖಾತೆ-ಉನ್ನತ ಶಿಕ್ಷಣ!
Recommended Video

"ನೋಡಿ ಸ್ವಾಮಿ, ವಿಪರ್ಯಾಸ ಅಂದ್ರೆ ಇದೇ! 8 ನೇ ತರಗತಿ ಪಾಸು ಮಾಡಿದ ವ್ಯಕ್ತಿಗೆ ಉನ್ನತ ಶಿಕ್ಷಣ ಖಾತೆಯಂತೆ! ಇದೆಂಥ ನ್ಯಾಯ" ಎಂದು ಟ್ವಿಟ್ಟರ್ ನಲ್ಲಿ ಹಲವರು ಅಲವತ್ತುಕೊಂಡಿದ್ದಾರೆ!
ಹೌದು, ಅಂತೂ ಇಂತೂ ಕರ್ನಾಟಕದಲ್ಲಿ ಸಂಪುಟ ರಚನೆ, ಖಾತೆ ಹಂಚಿಕೆಯ ಕಸರತ್ತು ಮುಗಿದಿದೆ. ಜೂನ್ 8 ರಂದು ನೂತನ ಸಚಿವರಿಗೆ ಖಾತೆ ಹಂಚಿಕೆಯ ಪ್ರಕ್ರಿಯೆ ಮುಗಿದಿದ್ದು, ಬಂಡಾಯದ ಬೆಂಕಿಗೆ ಮತ್ತಷ್ಟು ಬಿಸಿತುಪ್ಪ ಬಿದ್ದಂತಾಗಿದೆ!
ಇವೆಲ್ಲಕ್ಕಿಂತ ಹೆಚ್ಚಾಗಿ ಖಾತೆ ಹಂಚಿಕೆಯ ಸಮಯದಲ್ಲಿ ಅರ್ಹತೆ, ಅನುಭವಕ್ಕಿಂತ ಹೆಚ್ಚಾಗಿ ಜಾತಿಯೇ ಪಾರಮ್ಯ ಮೆರೆದಿದೆಯೇನೋ ಎಂಬ ಅನುಮಾನ ಕಾಡುತ್ತಿದೆ! ಅದಕ್ಕೆ ಸಾಕ್ಷಿ ಎಂಬಂತೆ ಚಾಮುಂಡೇಶ್ವರಿ ಕ್ಷೇತ್ರದ ಜೆಡಿಎಸ್ ಶಾಸಕ ಜಿಟಿ ದೇವೇಗೌಡರಿಗೆ ಉನ್ನತ ಶಿಕ್ಷಣ ಸಚಿವ ಸ್ಥಾನ ಲಭಿಸಿದೆ! ಅಚ್ಚರಿ ಎಂದರೆ ಅವರು ಓದಿದ್ದು ಕೇವಲ ಎಂಟನೇ ತರಗತಿವರೆಗೆ!

ಋಣಸಂದಾಯಕ್ಕಾಗಿ ಈ ಉಡುಗೊರೆಯೇ?
ಅಷ್ಟಕ್ಕೂ ಜಿಟಿಡಿ ಈ ಖಾತೆಯನ್ನು ಬಯಸಿದ್ದರಾ? ಗೊತ್ತಿಲ್ಲ. ಆದರೆ ಕೇವಲ 8 ನೇ ತರಗತಿಯನ್ನಷ್ಟೇ ಓದಿರುವ ವ್ಯಕ್ತಿಗೆ ಉನ್ನತ ಶಿಕ್ಷಣದಂಥ ಖಾತೆಯನ್ನು ನೀಡುವುದು ಎಷ್ಟು ಸರಿ ಎಂಬುದು ಇದೀಗ ಟ್ವಿಟ್ಟರ್ ನಲ್ಲಿ ಸಾಕಷ್ಟು ಚರ್ಚೆಯಾಗುತ್ತಿರುವ ವಿಷಯ. ಪ್ರತಿಷ್ಠೆಯ ಕಣವಾಗಿದ್ದ ಚಾಮುಂಡೇಶ್ವರಿಯಲ್ಲಿ ಆಗಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಸೋಲಿಸಿ, ಭರ್ಜರಿ ಜಯ ಸಾಧಿಸುವ ಮೂಲಕ ಜೆಡಿಎಸ್ ತೂಕ ಹೆಚ್ಚಿಸಿದ್ದ ಜಿಟಿಡಿ ಅವರ ಋಣಸಂದಾಯಕ್ಕೆ ಎಚ್ ಡಿ ಕುಮಾರಸ್ವಾಮಿ ನೀಡಿದ ಉಡುಗೊರೆಯಾ ಇದು? ಎಂಬ ಪ್ರಶ್ನೆಯೂ ಎದ್ದಿದೆ!

ಓದಿದ್ದು ಎಂಟನೇ ತರಗತಿ!
ಚುನಾವಣೆಯಲ್ಲಿ ನಾಮಪತ್ರ ಸಲ್ಲಿಸುವ ಹೊತ್ತಲ್ಲಿ ಜಿ ಟಿ ದೇವೇಗೌಡ ಅವರು ಸಲ್ಲಿಸಿದ್ದ ಅಫಿಡವಿಟ್ ನಲ್ಲಿ ಅವರ ವಿದ್ಯಾರ್ಹತೆ 8 ನೇ ತರಗತಿ ಎಂದು ಸ್ಪಷ್ಟವಾಗಿ ನಮೂದಾಗಿದೆ. ಇದೇ ವಿಷಯವೇ ಈಗ ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ. ಒಟ್ಟಿನಲ್ಲಿ ಟ್ವಿಟ್ಟರ್ ನಲ್ಲಂತೂ ಜಿಟಿಡಿ ಅವರಿಗೆ ನೀಡಿದ ಉನ್ನತ ಶಿಕ್ಷಣ ಖಾತೆ ತಪ್ಪೆ, ಸರಿಯೇ ಎಂಬ ಕುರಿತು ಬಿಸಿಬಿಸಿ ಚರ್ಚೆಯಾಗುತ್ತಿರುವುದು ಸತ್ಯ.
|
90ನೇ ದಶಕದತ್ತ ಕರ್ನಾಟಕ!
ಜಿ ಟಿ ದೇವೇಗೌಡರಿಗೆ ಉನ್ನತ ಶಿಕ್ಷಣವೇ? ನಿಜವಾಗಿಯೂ? ಏನು? ಏಕೆ? ಹೇಗೆ? ಇನ್ನೂ ಅಚ್ಚರಿ ಎಂದರೆ ಕೆಜೆ ಜಾರ್ಜ್ ಗೆ ಐಟಿ ಬಿಟಿ ಸಚಿವ ಸ್ಥಾನ! ಕಾದು ನೋಡಿ ಜನರೇ, ಕರ್ನಾಟಕ ಇನ್ನು ಕೆಲವೇ ದಿನಗಳಲ್ಲಿ 90 ರ ದಶಕದತ್ತ ಹೋಗಲಿದೆ ಎಂದಿದ್ದಾರೆ ರಕ್ಷಾ ಗೌಡ.
|
ಕಡೆಗೂ ಸಿಕ್ತು ಖಾತೆ!
ಮಂತ್ರಿಗಳಿಗೆ ಕಡೆಗೂ ಖಾತೆ! ಎಂಎ ಓದಿದೋರಿಗೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಖಾತೆ, ಎಂಟನೇ ಕ್ಲಾಸ್ ಓದಿದೋರಿಗೆ ಉನ್ನತ ಶಿಕ್ಷಣ ಖಾತೆ! ಎಂದಿದ್ದಾರೆ ಕೆ. ಸೀತಾರಾಮ್.
|
ಇದೆಂಥ ವಿಪರ್ಯಾಸ!
ಅಂದರೆ ನಮ್ಮ ಕರ್ನಾಟಕದ ಉನ್ನತ ಶಿಕ್ಷಣ ಸಚಿವರು ಕೇವಲ 8 ನೇ ತರಗತಿ ಪಾಸಾದವರು. ಇದೆಂಥ ವಿಪರ್ಯಾಸ ಎಂದಿದ್ದಾರೆ ಪ್ರದೀಪ್.
|
ಇದೊಂದು ವ್ಯವಸ್ಥೆಯ ವಿಡಂಬನೆ
ಜಿ ಟಿ ದೇವೇಗೌಡ ಓದಿದ್ದು ಕೇವಲ ಎಂಟನೇ ತರಗತಿವರೆಗೆ. ಅವರು ನಮ್ಮ ನೂತನ ಉನ್ನತ ಶಿಕ್ಷಣ ಸಚಿವರು. ಅವರಿಂದ ನಾವು ಏನನ್ನು ನಿರೀಕ್ಷಿಸಲು ಸಾಧ್ಯ? ಇದು ನಮ್ಮ ವ್ಯವಸ್ಥೆಯ ವಿಡಂಬನೆ ಎಂದಿದ್ದಾರೆ ವಿಶ್ವೇಶ್ವರ್ ಭಟ್.
|
ನಾವು ಹೆಮ್ಮೆ ಪಡಬೇಕು!
ನಮ್ಮ ಕರ್ನಾಟಕ ಸಚಿವ ಸಂಪುಟದಲ್ಲಿ ಅತೀ ಕಡಿಮೆ ಓದಿದ ಸಚಿವರು ಉನ್ನತ ಶಿಕ್ಷಣ ಸಚಿವರಾಗಿದ್ದಾರೆ. ಅದಕ್ಕಾಗಿ ನಾವು ಹೆಮ್ಮೆ ಪಡಬೇಕು! ನನಗೀಗ ಅನ್ನಿಸುತ್ತಿದೆ, ನಾನೂ ಎಂಟನೇ ತರಗತಿಗೆ ಓದು ಬಿಡಬೇಕಿತ್ತು ಅಂತ ಎಂದು ವ್ಯಂಗ್ಯವಾಗಿ ಹೇಳಿದ್ದಾರೆ ಅಮರ್ ಕೊಡ್ಲಿ.
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications