ಇದೆಂಥ ವಿಪರ್ಯಾಸ, ವಿದ್ಯಾರ್ಹತೆ 8 ನೇ ತರಗತಿ, ಖಾತೆ-ಉನ್ನತ ಶಿಕ್ಷಣ!
Recommended Video

"ನೋಡಿ ಸ್ವಾಮಿ, ವಿಪರ್ಯಾಸ ಅಂದ್ರೆ ಇದೇ! 8 ನೇ ತರಗತಿ ಪಾಸು ಮಾಡಿದ ವ್ಯಕ್ತಿಗೆ ಉನ್ನತ ಶಿಕ್ಷಣ ಖಾತೆಯಂತೆ! ಇದೆಂಥ ನ್ಯಾಯ" ಎಂದು ಟ್ವಿಟ್ಟರ್ ನಲ್ಲಿ ಹಲವರು ಅಲವತ್ತುಕೊಂಡಿದ್ದಾರೆ!
ಹೌದು, ಅಂತೂ ಇಂತೂ ಕರ್ನಾಟಕದಲ್ಲಿ ಸಂಪುಟ ರಚನೆ, ಖಾತೆ ಹಂಚಿಕೆಯ ಕಸರತ್ತು ಮುಗಿದಿದೆ. ಜೂನ್ 8 ರಂದು ನೂತನ ಸಚಿವರಿಗೆ ಖಾತೆ ಹಂಚಿಕೆಯ ಪ್ರಕ್ರಿಯೆ ಮುಗಿದಿದ್ದು, ಬಂಡಾಯದ ಬೆಂಕಿಗೆ ಮತ್ತಷ್ಟು ಬಿಸಿತುಪ್ಪ ಬಿದ್ದಂತಾಗಿದೆ!
ಇವೆಲ್ಲಕ್ಕಿಂತ ಹೆಚ್ಚಾಗಿ ಖಾತೆ ಹಂಚಿಕೆಯ ಸಮಯದಲ್ಲಿ ಅರ್ಹತೆ, ಅನುಭವಕ್ಕಿಂತ ಹೆಚ್ಚಾಗಿ ಜಾತಿಯೇ ಪಾರಮ್ಯ ಮೆರೆದಿದೆಯೇನೋ ಎಂಬ ಅನುಮಾನ ಕಾಡುತ್ತಿದೆ! ಅದಕ್ಕೆ ಸಾಕ್ಷಿ ಎಂಬಂತೆ ಚಾಮುಂಡೇಶ್ವರಿ ಕ್ಷೇತ್ರದ ಜೆಡಿಎಸ್ ಶಾಸಕ ಜಿಟಿ ದೇವೇಗೌಡರಿಗೆ ಉನ್ನತ ಶಿಕ್ಷಣ ಸಚಿವ ಸ್ಥಾನ ಲಭಿಸಿದೆ! ಅಚ್ಚರಿ ಎಂದರೆ ಅವರು ಓದಿದ್ದು ಕೇವಲ ಎಂಟನೇ ತರಗತಿವರೆಗೆ!

ಋಣಸಂದಾಯಕ್ಕಾಗಿ ಈ ಉಡುಗೊರೆಯೇ?
ಅಷ್ಟಕ್ಕೂ ಜಿಟಿಡಿ ಈ ಖಾತೆಯನ್ನು ಬಯಸಿದ್ದರಾ? ಗೊತ್ತಿಲ್ಲ. ಆದರೆ ಕೇವಲ 8 ನೇ ತರಗತಿಯನ್ನಷ್ಟೇ ಓದಿರುವ ವ್ಯಕ್ತಿಗೆ ಉನ್ನತ ಶಿಕ್ಷಣದಂಥ ಖಾತೆಯನ್ನು ನೀಡುವುದು ಎಷ್ಟು ಸರಿ ಎಂಬುದು ಇದೀಗ ಟ್ವಿಟ್ಟರ್ ನಲ್ಲಿ ಸಾಕಷ್ಟು ಚರ್ಚೆಯಾಗುತ್ತಿರುವ ವಿಷಯ. ಪ್ರತಿಷ್ಠೆಯ ಕಣವಾಗಿದ್ದ ಚಾಮುಂಡೇಶ್ವರಿಯಲ್ಲಿ ಆಗಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಸೋಲಿಸಿ, ಭರ್ಜರಿ ಜಯ ಸಾಧಿಸುವ ಮೂಲಕ ಜೆಡಿಎಸ್ ತೂಕ ಹೆಚ್ಚಿಸಿದ್ದ ಜಿಟಿಡಿ ಅವರ ಋಣಸಂದಾಯಕ್ಕೆ ಎಚ್ ಡಿ ಕುಮಾರಸ್ವಾಮಿ ನೀಡಿದ ಉಡುಗೊರೆಯಾ ಇದು? ಎಂಬ ಪ್ರಶ್ನೆಯೂ ಎದ್ದಿದೆ!

ಓದಿದ್ದು ಎಂಟನೇ ತರಗತಿ!
ಚುನಾವಣೆಯಲ್ಲಿ ನಾಮಪತ್ರ ಸಲ್ಲಿಸುವ ಹೊತ್ತಲ್ಲಿ ಜಿ ಟಿ ದೇವೇಗೌಡ ಅವರು ಸಲ್ಲಿಸಿದ್ದ ಅಫಿಡವಿಟ್ ನಲ್ಲಿ ಅವರ ವಿದ್ಯಾರ್ಹತೆ 8 ನೇ ತರಗತಿ ಎಂದು ಸ್ಪಷ್ಟವಾಗಿ ನಮೂದಾಗಿದೆ. ಇದೇ ವಿಷಯವೇ ಈಗ ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ. ಒಟ್ಟಿನಲ್ಲಿ ಟ್ವಿಟ್ಟರ್ ನಲ್ಲಂತೂ ಜಿಟಿಡಿ ಅವರಿಗೆ ನೀಡಿದ ಉನ್ನತ ಶಿಕ್ಷಣ ಖಾತೆ ತಪ್ಪೆ, ಸರಿಯೇ ಎಂಬ ಕುರಿತು ಬಿಸಿಬಿಸಿ ಚರ್ಚೆಯಾಗುತ್ತಿರುವುದು ಸತ್ಯ.
|
90ನೇ ದಶಕದತ್ತ ಕರ್ನಾಟಕ!
ಜಿ ಟಿ ದೇವೇಗೌಡರಿಗೆ ಉನ್ನತ ಶಿಕ್ಷಣವೇ? ನಿಜವಾಗಿಯೂ? ಏನು? ಏಕೆ? ಹೇಗೆ? ಇನ್ನೂ ಅಚ್ಚರಿ ಎಂದರೆ ಕೆಜೆ ಜಾರ್ಜ್ ಗೆ ಐಟಿ ಬಿಟಿ ಸಚಿವ ಸ್ಥಾನ! ಕಾದು ನೋಡಿ ಜನರೇ, ಕರ್ನಾಟಕ ಇನ್ನು ಕೆಲವೇ ದಿನಗಳಲ್ಲಿ 90 ರ ದಶಕದತ್ತ ಹೋಗಲಿದೆ ಎಂದಿದ್ದಾರೆ ರಕ್ಷಾ ಗೌಡ.
|
ಕಡೆಗೂ ಸಿಕ್ತು ಖಾತೆ!
ಮಂತ್ರಿಗಳಿಗೆ ಕಡೆಗೂ ಖಾತೆ! ಎಂಎ ಓದಿದೋರಿಗೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಖಾತೆ, ಎಂಟನೇ ಕ್ಲಾಸ್ ಓದಿದೋರಿಗೆ ಉನ್ನತ ಶಿಕ್ಷಣ ಖಾತೆ! ಎಂದಿದ್ದಾರೆ ಕೆ. ಸೀತಾರಾಮ್.
|
ಇದೆಂಥ ವಿಪರ್ಯಾಸ!
ಅಂದರೆ ನಮ್ಮ ಕರ್ನಾಟಕದ ಉನ್ನತ ಶಿಕ್ಷಣ ಸಚಿವರು ಕೇವಲ 8 ನೇ ತರಗತಿ ಪಾಸಾದವರು. ಇದೆಂಥ ವಿಪರ್ಯಾಸ ಎಂದಿದ್ದಾರೆ ಪ್ರದೀಪ್.
|
ಇದೊಂದು ವ್ಯವಸ್ಥೆಯ ವಿಡಂಬನೆ
ಜಿ ಟಿ ದೇವೇಗೌಡ ಓದಿದ್ದು ಕೇವಲ ಎಂಟನೇ ತರಗತಿವರೆಗೆ. ಅವರು ನಮ್ಮ ನೂತನ ಉನ್ನತ ಶಿಕ್ಷಣ ಸಚಿವರು. ಅವರಿಂದ ನಾವು ಏನನ್ನು ನಿರೀಕ್ಷಿಸಲು ಸಾಧ್ಯ? ಇದು ನಮ್ಮ ವ್ಯವಸ್ಥೆಯ ವಿಡಂಬನೆ ಎಂದಿದ್ದಾರೆ ವಿಶ್ವೇಶ್ವರ್ ಭಟ್.
|
ನಾವು ಹೆಮ್ಮೆ ಪಡಬೇಕು!
ನಮ್ಮ ಕರ್ನಾಟಕ ಸಚಿವ ಸಂಪುಟದಲ್ಲಿ ಅತೀ ಕಡಿಮೆ ಓದಿದ ಸಚಿವರು ಉನ್ನತ ಶಿಕ್ಷಣ ಸಚಿವರಾಗಿದ್ದಾರೆ. ಅದಕ್ಕಾಗಿ ನಾವು ಹೆಮ್ಮೆ ಪಡಬೇಕು! ನನಗೀಗ ಅನ್ನಿಸುತ್ತಿದೆ, ನಾನೂ ಎಂಟನೇ ತರಗತಿಗೆ ಓದು ಬಿಡಬೇಕಿತ್ತು ಅಂತ ಎಂದು ವ್ಯಂಗ್ಯವಾಗಿ ಹೇಳಿದ್ದಾರೆ ಅಮರ್ ಕೊಡ್ಲಿ.
-
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
ಮೈಸೂರಲ್ಲಿ ವಂದೇ ಭಾರತ್ ರೈಲ್ವೆ ಹಬ್: 400 ಕೋಟಿ ರೂ ವೆಚ್ಚದಲ್ಲಿ ಹೈಟೆಕ್ ನಿರ್ವಹಣಾ ಕೇಂದ್ರ -
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
ರಿಷಬ್ ಸಮಯ ಬಂದಾಗ ಮಾತಾಡ್ತೀನಿ ಅಂದ: ಅನ್ಫಾಲೋ, ಗೆಳೆಯರಲ್ಲಿ ಬಿರುಕು ವದಂತಿ ಬಗ್ಗೆ ಪ್ರಮೋದ್ ಶೆಟ್ಟಿ ಪ್ರತಿಕ್ರಿಯೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
KSOU: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಕುಲಸಚಿವರಾಗಿ ಕೆಎಎಸ್ ಅಧಿಕಾರಿ ಎಸ್.ಕುಸುಮಾ ಕುಮಾರಿ ನೇಮಕ -
April 5 Horoscope: ನಿಮ್ಮ ಅದೃಷ್ಟ ಹೇಗಿದೆ? ಸಂಪೂರ್ಣ ಮಾಹಿತಿ ಇಲ್ಲಿ -
ಬೆಂಗಳೂರಿನ ಹೊಸೂರು ರಸ್ತೆಯ ದುಸ್ಥಿತಿ: ಕೇಂದ್ರ ಸಚಿವ ನಿತಿನ್ ಗಡ್ಕರಿಗೆ ಟ್ಯಾಗ್ ಮಾಡಿ ಕಿರಣ್ ಮಜುಂದಾರ್ ಶಾ ಆಕ್ರೋಶ -
Bengaluru Viral: ಬೆಂಗಳೂರಿನ ಲಾಲ್ಬಾಗ್ ನೋಡಿ ತಪ್ಪೊಪ್ಪಿಗೆ ಕೊಡಬೇಕು ಎಂದ ವಿದೇಶಿಗ, ವಿಡಿಯೋ ವೈರಲ್ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
RCB vs CSK: ಆರ್ಸಿಬಿ ಕಡೆಯಿಂದ ಅಭಿಮಾನಿಗಳಿಗೆ ವಿಶೇಷ ಸಂದೇಶ: ಇಂದಿನ ಪಂದ್ಯಕ್ಕೂ ಮುನ್ನ ಇದು ಗಮನದಲ್ಲಿರಲಿ -
Virat Kohli: ಎಲ್ಲೂ ಅವಕಾಶ ಸಿಗದಿದ್ರೆ ಸ್ಯಾಂಡಲ್ವುಡ್ಗೆ ಬರ್ತೀನಿ: ವಿರಾಟ್ ಕೊಹ್ಲಿ ವಿಡಿಯೋ ವೈರಲ್












Click it and Unblock the Notifications