ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಬೆಳಗಾವಿ ಜಿಲ್ಲೆಯ ಜೆಡಿಎಸ್ ಅಭ್ಯರ್ಥಿಗಳ ಪರಿಚಯ

|
Google Oneindia Kannada News

ಬೆಳಗಾವಿ, ಮಾರ್ಚ್ 22 : ರಾಜ್ಯದಲ್ಲಿಯೇ ಅತಿ ಹೆಚ್ಚು ವಿಧಾನಸಭಾ ಕ್ಷೇತ್ರಗಳನ್ನು ಹೊಂದಿರುವ ಜಿಲ್ಲೆ ಬೆಳಗಾವಿ. ಜೆಡಿಎಸ್‌ ಬೆಳಗಾವಿಯ 4 ವಿಧಾನಸಭಾ ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಣೆ ಮಾಡಿದೆ.

ಕರ್ನಾಟಕ ಜೆಡಿಎಸ್ 2018ರ ವಿಧಾನಸಭೆ ಚುನಾವಣೆಗೆ 126 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಬೆಳಗಾವಿ ಜಿಲ್ಲೆಯ 18 ಕ್ಷೇತ್ರಗಳ ಪೈಕಿ 4 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಅಂತಿಮಗೊಳಿಸಲಾಗಿದೆ.

ಯಮಕನಮರಡಿ ಕ್ಷೇತ್ರ : ಸತೀಶ್ v/s ಲಖನ್ ಜಟಾಪಟಿಯಮಕನಮರಡಿ ಕ್ಷೇತ್ರ : ಸತೀಶ್ v/s ಲಖನ್ ಜಟಾಪಟಿ

ಬೆಳಗಾವಿಯ ಅಥಣಿ, ಬೆಳಗಾವಿ ಗ್ರಾಮೀಣ, ಬೈಲಹೊಂಗಲ, ರಾಮದುರ್ಗ ಕ್ಷೇತ್ರಗಳಿಗೆ ಜೆಡಿಎಸ್ ಅಭ್ಯರ್ಥಿಗಳನ್ನು ಘೋಷಣೆ ಮಾಡಿದೆ. 2013ರ ಚುನಾವಣೆಯಲ್ಲಿ ಜಿಲ್ಲೆಯಲ್ಲಿ ಯಾವುದೇ ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿ ಗೆಲುವು ಸಾಧಿಸಿರಲಿಲ್ಲ.

ಧಾರವಾಡ ಜಿಲ್ಲೆಯ ಜೆಡಿಎಸ್ ಅಭ್ಯರ್ಥಿಗಳ ಪರಿಚಯಧಾರವಾಡ ಜಿಲ್ಲೆಯ ಜೆಡಿಎಸ್ ಅಭ್ಯರ್ಥಿಗಳ ಪರಿಚಯ

ನಿಪ್ಪಾಣಿ, ಚಿಕ್ಕೋಡಿ-ಸದಲಗಾ, ಕಾಗವಾಡ, ಕುಡಚಿ, ರಾಯಭಾಗ, ಹುಕ್ಕೇರಿ, ಅರಭಾವಿ, ಗೋಕಾಕ, ಯಮಕನಮರಡಿ, ಬೆಳಗಾವಿ ಉತ್ತರ, ಬೆಳಗಾವಿ ದಕ್ಷಿಣ, ಖಾನಾಪುರ, ಕಿತ್ತೂರು, ಸವದತ್ತಿ ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಇನ್ನೂ ಅಂತಿಮಗೊಳಿಸಬೇಕಾಗಿದೆ.

ಕರ್ನಾಟಕ ವಿಧಾನಸಭೆ ಚುನಾವಣೆ : ಜೆಡಿಎಸ್ ಅಭ್ಯರ್ಥಿಗಳ ಮೊದಲ ಪಟ್ಟಿಕರ್ನಾಟಕ ವಿಧಾನಸಭೆ ಚುನಾವಣೆ : ಜೆಡಿಎಸ್ ಅಭ್ಯರ್ಥಿಗಳ ಮೊದಲ ಪಟ್ಟಿ

ಅಥಣಿ ಕ್ಷೇತ್ರಕ್ಕೆ ಗಿರೀಶ್ ಭೂತಾಳೆ, ಬೆಳಗಾವಿ ಗ್ರಾಮೀಣ ಕ್ಷೇತ್ರಕ್ಕೆ ಶಿವನಗೌಡ ಪಾಟೀಲ್, ಬೈಲಹೊಂಗಲ ಕ್ಷೇತ್ರಕ್ಕೆ ಶಂಕರ ಮಾಳಗಿ ಮತ್ತು ರಾಮದುರ್ಗ ಕ್ಷೇತ್ರಕ್ಕೆ ಜಾವೆದ್ ಅಭ್ಯರ್ಥಿಯಾಗಿದ್ದಾರೆ. ಅಭ್ಯರ್ಥಿಗಳ ಪರಿಚಯ ಇಲ್ಲಿದೆ...

ಅಥಣಿ ಕ್ಷೇತ್ರ

ಅಥಣಿ ಕ್ಷೇತ್ರ

ಅಥಣಿ ಕ್ಷೇತ್ರಕ್ಕೆ ಗಿರೀಶ್ ಭೂತಾಳೆ ಅವರನ್ನು ಅಭ್ಯರ್ಥಿ ಎಂದು ಜೆಡಿಎಸ್ ಘೋಷಣೆ ಮಾಡಿದೆ. 2013ರ ಚುನಾವಣೆಯಲ್ಲಿ ಸದಾಶಿವ ಕೇದಾರಿ ಭೂತಾಳೆ ಪಕ್ಷದ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದರು. 15,204 ಮತಗಳನ್ನು ಪಡೆದು ಜಯಗಳಿಸಿದ್ದರು. ಈ ಬಾರಿಯ ಚುನಾವಣೆಯಲ್ಲಿ ಅಭ್ಯರ್ಥಿಯನ್ನು ಬದಲಾವಣೆ ಮಾಡಲಾಗಿದೆ.

ಶಿವನಗೌಡ ಪಾಟೀಲ್

ಶಿವನಗೌಡ ಪಾಟೀಲ್

ಬೆಳಗಾವಿ ಗ್ರಾಮೀಣ ಕ್ಷೇತ್ರಕ್ಕೆ ಶಿವನಗೌಡ ಪಾಟೀಲ್ ಅಭ್ಯರ್ಥಿ ಎಂದು ಜೆಡಿಎಸ್ ಪಕ್ಷ ಘೋಷಣೆ ಮಾಡಿದೆ. ಈ ಕ್ಷೇತ್ರದಲ್ಲಿಯೂ ಪಕ್ಷ ಅಭ್ಯರ್ಥಿಯನ್ನು ಬದಲಾವಣೆ ಮಾಡಿದೆ. ಕಳೆದ ಬಾರಿ ಕ್ಷೇತ್ರದಿಂದ ಅಶೋಕ್ ಬಿ.ಗೋವೇಕರ್ ಅವರು ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು. ಕೇವಲ 1837 ಮತಗಳನ್ನು ಪಡೆದು 7ನೇ ಸ್ಥಾನ ಗಳಿಸಿದ್ದರು.

ಬೈಲಹೊಂಗಲ

ಬೈಲಹೊಂಗಲ

ಬೈಲಹೊಂಗಲ ಕ್ಷೇತ್ರಕ್ಕೆ ಶಂಕರ ಮಾಳಗಿ ಅವರನ್ನು ಅಭ್ಯರ್ಥಿ ಎಂದು ಪಕ್ಷ ಘೋಷಣೆ ಮಾಡಿದೆ. 2013ರ ಚುನಾವಣೆಯಲ್ಲಿ ಸೋತ ಶಂಕರ ಮಾಳಗಿ ಅವರಿಗೆ ಪುನಃ ಟಿಕೆಟ್ ನೀಡಲಾಗಿದೆ. ಕಳೆದ ಚುನಾವಣೆಯಲ್ಲಿ ಇವರು 9,475 ಮತಗಳನ್ನು ಪಡೆದು 4ನೇ ಸ್ಥಾನ ಪಡೆದಿದ್ದರು.

ಜಾವೇದ್

ಜಾವೇದ್

ರಾಮದುರ್ಗ ಕ್ಷೇತ್ರಕ್ಕೆ ಎಂ.ಜಾವೇದ್ ಅವರನ್ನು ಅಭ್ಯರ್ಥಿ ಎಂದು ಘೋಷಣೆ ಮಾಡಲಾಗಿದೆ. ರಾಮದುರ್ಗ ಕ್ಷೇತ್ರದಲ್ಲಿ ಜೆಡಿಎಸ್ ಪಕ್ಷ ಅಭ್ಯರ್ಥಿಯನ್ನು ಬದಲಾವಣೆ ಮಾಡಿದೆ. 2013ರ ಚುನಾವಣೆಯಲ್ಲಿ ಜಿಲ್ಲಾ ಜೆಡಿಎಸ್ ಅಧ್ಯಕ್ಷ ಪಿ.ಎಫ್.ಪಾಟೀಲ ಅವರಿಗೆ ಟಿಕೆಟ್ ನೀಡಲಾಗಿತ್ತು, 17,303 ಮತಗಳನ್ನು ಪಡೆದು ಅವರು 3ನೇ ಸ್ಥಾನ ಪಡೆದಿದ್ದರು.

English summary
JD(S) announced 4 candidates name for Belagavi district for 2018 Karnataka assembly elections out of 18 assembly constituency. Here are the brief profile of the candidates.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X