Flashback : ಶಿಕಾರಿಪುರದಲ್ಲಿ ಯಡಿಯೂರಪ್ಪ ಒಮ್ಮೆ ಸೋಲು ಕಂಡಿದ್ದಾರೆ!
Recommended Video

ಶಿವಮೊಗ್ಗ, ಮಾರ್ಚ್ 19 : ಶಿಕಾರಿಪುರ ಪ್ರತಿ ಚುನಾವಣೆಯಲ್ಲಿ ರಾಜ್ಯದ ಗಮನ ಸೆಳೆಯುವ ಕ್ಷೇತ್ರ. ಬಿ.ಎಸ್.ಯಡಿಯೂರಪ್ಪ ಅವರ ತವರು ಕ್ಷೇತ್ರವಿದು. ಯಡಿಯೂರಪ್ಪ ಅವರು ಇಲ್ಲಿ ಗೆಲುವನ್ನು ಮಾತ್ರ ಕಂಡಿಲ್ಲ. ಸೋಲು ಸಹ ಅನುಭವಿಸಿದ್ದಾರೆ.
ಕರ್ನಾಟಕ ಬಿಜೆಪಿ ಅಧ್ಯಕ್ಷ ಯಡಿಯೂರಪ್ಪ ಅವರು 2018ರ ವಿಧಾನಸಭೆ ಚುನಾವಣೆಗೆ ಬಿಜೆಪಿಯ ಮುಖ್ಯಮಂತ್ರಿ ಅಭ್ಯರ್ಥಿಯೂ ಹೌದು. ಪ್ರಸ್ತುತ ಶಿವಮೊಗ್ಗ ಸಂಸದರಾಗಿರುವ ಯಡಿಯೂರಪ್ಪ ಅವರು ಈ ಬಾರಿಯ ಚುನಾವಣೆಗೆ ಶಿಕಾರಿಪುರ ಕ್ಷೇತ್ರದಿಂದ ಕಣಕ್ಕಿಳಿಯಲಿದ್ದಾರೆ.
ಶಿಕಾರಿಪುರ ಕ್ಷೇತ್ರದ ಹಾಲಿ ಶಾಸಕರು ಬಿ.ವೈ.ರಾಘವೇಂದ್ರ. ಯಡಿಯೂರಪ್ಪ ಪುತ್ರ ಬಿ.ವೈ.ರಾಘವೇಂದ್ರ ಅವರು 2014ರಲ್ಲಿ ನಡೆದ ಉಪ ಚುನಾವಣೆಯಲ್ಲಿ ಜಯಗಳಿಸಿದ್ದಾರೆ. 2013ರಲ್ಲಿ ಶಿಕಾರಿಪುರದಲ್ಲಿ ಗೆದ್ದಿದ್ದ ಯಡಿಯೂರಪ್ಪ ಅವರು 2014ರ ಲೋಕಸಭೆ ಚುನಾವಣೆಯಲ್ಲಿದ್ದ ಗೆದ್ದ ಬಳಿಕ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.

ಪ್ರತಿ ವಿಧಾನಸಭೆ ಚುನಾವಣೆಯಲ್ಲಿಯೂ ಶಿಕಾರಿಪುರ ಕ್ಷೇತ್ರ ಪ್ರತಿಷ್ಠೆಯ ಕಣವಾಗುತ್ತದೆ. 2008ರ ಚುನಾವಣೆಯಲ್ಲಿ ಎಸ್.ಬಂಗಾರಪ್ಪ ಅವರು ಸಮಾಜವಾದಿ ಪಕ್ಷದಿಂದ ಯಡಿಯೂರಪ್ಪ ವಿರುದ್ಧ ಸ್ಪರ್ಧಿಸಿದ್ದರು. ಆಗ ಇಡೀ ರಾಜ್ಯ ಶಿಕಾರಿಪುರದತ್ತ ಕಣ್ಣಿಟ್ಟಿತ್ತು. ಯಡಿಯೂರಪ್ಪ ಜಯಗಳಿಸಿದ್ದರು.
ಯಡಿಯೂರಪ್ಪ ಮತ್ತು ಬಿ.ವೈ.ರಾಘವೇಂದ್ರ ಅವರ ಪಾರುಪತ್ಯ ಶಿಕಾರಿಪುರದಲ್ಲಿದೆ. ಆದರೆ, ಯಡಿಯೂರಪ್ಪ ಅವರು ಸೋಲಿಲ್ಲದ ಸರದಾರರು ಏನಲ್ಲ. 8 ವಿಧಾನಸಭಾ ಚುನಾವಣೆಗಳ ಪೈಕಿ ಯಡಿಯೂರಪ್ಪ ಒಮ್ಮೆ ಸೋಲು ಕಂಡಿದ್ದಾರೆ.
1999ರ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಮಹಾಲಿಂಗಪ್ಪ ಅವರು ಯಡಿಯೂರಪ್ಪ ಅವರಿಗೆ ಸೋಲಿನ ರುಚಿ ತೋರಿಸಿದ್ದರು. 7,561 ಮತಗಳಿಂದ ಯಡಿಯೂರಪ್ಪ ಅವರನ್ನು ಸೋಲಿಸಿದ್ದರು.
ಚುನಾವಣೆಯಲ್ಲಿ ಬಿ.ಎಸ್.ಯಡಿಯೂರಪ್ಪ 48,291 ಮತ, ಮಹಾಲಿಂಗಪ್ಪ ಅವರು 55,852 ಮತಗಳನ್ನು ಪಡೆದಿದ್ದರು. ಜೆಡಿಎಸ್ನ ನಗರದ ಮಹದೇವಪ್ಪ 1,997 ಮತ್ತು ಬಿಎಸ್ಪಿಯ ಹೊಲೆಯಪ್ಪ ಎ.ಕೆ. 285 ಮತಗಳನ್ನು ಪಡೆದಿದ್ದರು.
-
RCB vs CSK: ಆರ್ಸಿಬಿ ಕಡೆಯಿಂದ ಅಭಿಮಾನಿಗಳಿಗೆ ವಿಶೇಷ ಸಂದೇಶ: ಇಂದಿನ ಪಂದ್ಯಕ್ಕೂ ಮುನ್ನ ಇದು ಗಮನದಲ್ಲಿರಲಿ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
ಮೈಸೂರಲ್ಲಿ ವಂದೇ ಭಾರತ್ ರೈಲ್ವೆ ಹಬ್: 400 ಕೋಟಿ ರೂ ವೆಚ್ಚದಲ್ಲಿ ಹೈಟೆಕ್ ನಿರ್ವಹಣಾ ಕೇಂದ್ರ -
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್












Click it and Unblock the Notifications