Get Updates
Get notified of breaking news, exclusive insights, and must-see stories!

ಸಿದ್ದರಾಮಯ್ಯ ಸೋಲು ಮಹಿಷಾಸುರ ಮರ್ಧನ: ಎಚ್. ವಿಶ್ವನಾಥ್

ಮೈಸೂರು, ಮೇ 15: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸೋಲು ಅನುಭವಿಸಿರುವುದು ಮಹಿಷಾಸುರ ಮರ್ಧನವಾದಂತೆ ಆಗಿದೆ ಎಂದು ಹುಣಸೂರು ಕ್ಷೇತ್ರದ ಶಾಸಕ ಎಚ್. ವಿಶ್ವನಾಥ್ ಲೇವಡಿ ಮಾಡಿದ್ದಾರೆ.

ಸಿದ್ದರಾಮಯ್ಯ ಅವರಲ್ಲಿನ ದರ್ಪಕ್ಕೆ ಸರಿಯಾದ ಶಾಸ್ತಿ ಆಗಿದೆ. ಜನರು ಅವರಿಗೆ ತಕ್ಕ ಪಾಠ ಕಲಿಸಿದ್ದಾರೆ ಎಂದು ವಿಶ್ವನಾಥ್ ಪ್ರತಿಕ್ರಿಯೆ ನೀಡಿದ್ದಾರೆ.

ನಾನು ದೇವರಾಜ ಅರಸು ಅವರ ಕರ್ಮ ಭೂಮಿಯಲ್ಲಿ ಗೆದ್ದಿದ್ದೇನೆ. ನನ್ನ ಗೆಲುವಿಗೆ ಕಾರಣರಾದ ಹುಣಸೂರು ಜನತೆಗೆ ಧನ್ಯವಾದಗಳು ಎಂದು ವಿಶ್ವನಾಥ್ ಹೇಳಿದ್ದಾರೆ.

Karnataka Election Results 2018 h vishwanath reacts to siddaramaiah defeat

ನಾನು ಗೆಲ್ಲಲು ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಮತ್ತು ಪಕ್ಷದ ರಾಜ್ಯಾಧ್ಯಕ್ಷ ಕುಮಾರಸ್ವಾಮಿ ಅವರ ಶ್ರಮ ಹೆಚ್ಚಿದೆ.

ನಾನು ಬಿಎಸ್ ಪಿ ಬೆಂಬಲಿತ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಿದ್ದೆ. ಕಾಂಗ್ರೆಸ್‌ನಲ್ಲಿದ್ದ ನನ್ನನ್ನು ಜೆಡಿಎಸ್‌ಗೆ ಕರೆತಂದವರು ಮಾಜಿ ಶಾಸಕ ದಿ‌. ಚಿಕ್ಕಮಾದು ಅವರು. ಅವರನ್ನು ಈ ಸಮಯದಲ್ಲಿ ನಾನು ಸ್ಮರಿಸಿಕೊಳ್ಳುತ್ತೇನೆ. ಹುಣಸೂರಿನಲ್ಲಿ ಎಲ್ಲರನ್ನೂ ಗಣನೆಗೆ ತೆಗೆದುಕೊಂಡು ಕೆಲಸ ಮಾಡುತ್ತೇನೆ ಎಂದು ತಿಳಿಸಿದ್ದಾರೆ.

ಹುಣಸೂರು ಕ್ಷೇತ್ರದಲ್ಲಿ ನಡೆದ ಚುನಾವಣೆಯಲ್ಲಿ ಎಚ್. ವಿಶ್ವನಾಥ್ ಅವರು ಕಾಂಗ್ರೆಸ್‌ನ ಎಚ್‌.ಪಿ. ಮಂಜುನಾಥ್ ಅವರ ವಿರುದ್ಧ 8,575 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+