ಶಿರಹಟ್ಟಿಯಲ್ಲಿ ಗೆದ್ದ ಪಕ್ಷಕ್ಕೇ ಅಧಿಕಾರ ಸಿಗುತ್ತಾ?
ಬೆಂಗಳೂರು, ಮೇ 15: ಯಾವ ಸರ್ಕಾರಕ್ಕೆ ಬಹುಮತ ಸಿಗುತ್ತದೆ ಎನ್ನುವುದು ಸದ್ಯದ ಕುತೂಹಲ. ದೊಡ್ಡ ನಾಯಕರ ಭವಿಷ್ಯ ಏನಾಗಲಿದೆ ಎಂಬ ಕಾತರ ಹೆಚ್ಚುತ್ತಿದೆ. ಇವೆಲ್ಲದರ ನಡುವೆ ಶಿರಹಟ್ಟಿ ವಿಧಾನಸಭೆ ಕ್ಷೇತ್ರದ ಫಲಿತಾಂಶದತ್ತ ರಾಜಕೀಯ ಮುಖಂಡರ ಕಣ್ಣು ನೆಟ್ಟಿದೆ.
ರಾಜ್ಯ ವಿಧಾನಸಭೆ ಚುನಾವಣೆ ಇತಿಹಾಸದಲ್ಲಿ ಶಿರಹಟ್ಟಿ ಕ್ಷೇತ್ರದ ಫಲಿತಾಂಶಕ್ಕೆ ಮಹತ್ವವಿದೆ. 1978ರಿಂದಲೂ ಶಿರಹಟ್ಟಿ ವಿಧಾನಸಭೆ ಕ್ಷೇತ್ರದಲ್ಲಿ ಯಾವ ಪಕ್ಷದ ಅಭ್ಯರ್ಥಿ ಗೆದ್ದಿದ್ದಾರೋ, ರಾಜ್ಯದಲ್ಲಿ ಅದೇ ಪಕ್ಷ ಅಧಿಕಾರಕ್ಕೆ ಬಂದಿರುವುದು ವಿಶೇಷ. ಹೀಗಾಗಿ ಅತಂತ್ರ ವಿಧಾನಸಭೆಯ ಫಲಿತಾಂಶ ಬರಲಿದೆ ಎಂಬ ಅಂದಾಜಿನ ನಡುವೆಯೇ ಶಿರಹಟ್ಟಿಯ ಫಲಿತಾಂಶಕ್ಕೆ ಪ್ರಾಮುಖ್ಯ ದೊರೆತಿದೆ.
ಶಿರಹಟ್ಟಿಯಲ್ಲಿ ಕಾಂಗ್ರೆಸ್ ಶಾಸಕ ರಾಮಕೃಷ್ಣ ಎಸ್ ದೊಡ್ಡಮನಿ ಮತ್ತು ಬಿಜೆಪಿಯ ಮಾಜಿ ಶಾಸಕ ರಾಮಣ್ಣ ಲಮಾಣಿ ನಡುವೆ ನೇರ ಹಣಾಹಣಿ ಇದೆ ಎನ್ನಲಾಗಿದೆ.

ಇತಿಹಾಸದ ಪುಟಗಳನ್ನು ತಿರುವಿ ಹಾಕಿದರೆ ರಾಜ್ಯದಲ್ಲಿ ರಚನೆಯಾಗುವ ಸರ್ಕಾರಕ್ಕೂ ಶಿರಹಟ್ಟಿಯ ಅಭ್ಯರ್ಥಿಯ ಗೆಲುವಿಗೂ ನಂಟು ಇರುವುದನ್ನು ಕಾಣಬಹುದು.
1978ರಲ್ಲಿ ಗೂಳಪ್ಪ ಉಪನಾಳ ಕಾಂಗ್ರೆಸ್ನಿಂದ ಆಯ್ಕೆಯಾಗಿದ್ದರು. ಆಗ ದೇವರಾಜ ಅರಸು ಅವರ ಸರ್ಕಾರ ಅಸ್ತಿತ್ವಕ್ಕೆ ಬಂದಿದ್ದರು.
1983ರಲ್ಲಿ ಉಪನಾಳ ಅವರು ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿ ಗೆದ್ದಿದ್ದರು. ಆಗ ಅತಂತ್ರ ವಿಧಾನಸಭೆ ಸೃಷ್ಟಿಯಾಗಿತ್ತು. ರಾಮಕೃಷ್ಣ ಹೆಗಡೆ ನೇತೃತ್ವದ ಜನತಾ ಪಕ್ಷಕ್ಕೆ ಉಪನಾಳ ಬೆಂಬಲ ನೀಡಿದ್ದರು.
1985ರಲ್ಲಿ ಜನತಾಪಕ್ಷದ ಟಿ.ಬಿ. ಬಾಳಿಕಾಯಿ ಜಯಗಳಿಸಿದ್ದರು. ಆಗ ರಾಮಕೃಷ್ಣ ಹೆಗಡೆ ಅವರ ಸರ್ಕಾರ ಅಸ್ತಿತ್ವದಲ್ಲಿತ್ತು. 1989ರಲ್ಲಿ ಎಸ್.ಎಂ. ಪಾಟೀಲ ಜಯಗಳಿಸಿದರು. ಆಗ ವೀರೇಂದ್ರ ಪಾಟೀಲ ನೇತೃತ್ವದ ಕಾಂಗ್ರೆಸ್ ಸರ್ಕಾರ ಆಡಳಿತಕ್ಕೆ ಬಂದಿತ್ತು.
1994ರಲ್ಲಿ ಜನತಾದಳ ಪಕ್ಷದಿಂದ ಗಂಗಣ್ಣ ಮಹಂತ ಶೆಟ್ಟರ್ ಅವರು ಜಯಗಳಿಸಿದ್ದರು. ಆಗ ಜೆಡಿಎಸ್ ಎಚ್.ಡಿ. ದೇವೇಗೌಡ ಅವರ ನೇತೃತ್ವದಲ್ಲಿ ಅಧಿಕಾರ ಹಿಡಿದಿತ್ತು.
1999 ಮತ್ತು 2004ರಲ್ಲಿ ಕಾಂಗ್ರೆಸ್ನ ಜಿ.ಎಸ್. ಗಡ್ಡದೇವರಮಠ ಜಯಗಳಿಸಿದ್ದರು. ಈ ಅವಧಿಯಲ್ಲಿ ಕ್ರಮವಾಗಿ ಎಸ್.ಎಂ. ಕೃಷ್ಣ ಮತ್ತು ಧರಂ ಸಿಂಗ್ ನೇತೃತ್ವದ ಸರ್ಕಾರ ಅಸ್ತಿತ್ವಕ್ಕೆ ಬಂದಿತ್ತು.
2008ರಲ್ಲಿ ಬಿಜೆಪಿಯ ರಾಮಣ್ಣ ಲಮಾಣಿ ಜಯಗಳಿಸಿದ್ದರು. ಆಗ ಮೊದಲ ಬಾರಿಗೆ ರಾಜ್ಯದಲ್ಲಿ ಯಡಿಯೂರಪ್ಪ ಅವರ ನೇತೃತ್ವದಲ್ಲಿ ಬಿಜೆಪಿ ಸರ್ಕಾರ ಅಧಿಕಾರದ ಗದ್ದುಗೆ ಹಿಡಿದಿತ್ತು.
-
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
IPL 2026 Ticket: ಐಪಿಎಲ್ ಟಿಕೆಟ್ ಖರೀದಿ ಕುರಿತು ಬೆಂಗಳೂರು ಪೊಲೀಸರಿಂದ ಕ್ರಿಕೆಟ್ ಪ್ರೇಮಿಗಳಿಗೆ ಮಹತ್ವದ ಸಲಹೆ -
By-Election: ದಾವಣಗೆರೆ ದಕ್ಷಿಣದಲ್ಲಿ ಮೊದಲ ಬಾರಿ ಬಿಜೆಪಿ ಗೆಲುವು ನಿಶ್ಚಿತ; ಬಸವರಾಜ ಬೊಮ್ಮಾಯಿ ವಿಶ್ವಾಸ -
ಆರ್ಸಿಬಿ ವಿರುದ್ಧದ ಪಂದ್ಯಕ್ಕೂ ಮುನ್ನ ಕೇವಲ 42 ಎಸೆತಗಳಲ್ಲಿ 94 ರನ್ ಸಿಡಿಸಿದ ಅಭಿಷೇಕ್ ಶರ್ಮಾ: ಭಾರೀ ವೈರಲ್












Click it and Unblock the Notifications