ಸೋತು ಸುಣ್ಣವಾದ ಸಿದ್ದರಾಮಯ್ಯ ಸಂಪುಟದ 15 ಸಚಿವರು
ಬೆಂಗಳೂರು, ಮೇ 15: ನಿರೀಕ್ಷೆಯನ್ನು ಮೀರಿ ಮತದಾರ ಮಹಾಪ್ರಭು ತನ್ನ ಜನಾದೇಶವನ್ನು ಮೇ 15ರಂದು ನೀಡಿದ್ದಾನೆ. ಅತಂತ್ರ ವಿಧಾನಸಭೆ ಸೃಷ್ಟಿಯಾದ ಹಿನ್ನಲೆಯಲ್ಲಿ ಕಾಂಗ್ರೆಸ್ ಜೆಡಿಎಸ್ ಮೈತ್ರಿ ಸಾಧ್ಯತೆ ಉಂಟಾಗಿದ್ದು, ಸರ್ಕಾರ ರಚನೆ ಕಸರತ್ತು ಮುಂದುವರೆದಿದೆ. ಈ ನಡುವೆ ಸಿದ್ದರಾಮಯ್ಯ ಸಚಿವ ಸಂಪುಟದ 15 ಸಚಿವರು ಸೋತು ಸುಣ್ಣವಾಗಿದ್ದಾರೆ.
ಸಿದ್ದರಾಮಯ್ಯ ಸಚಿವ ಸಂಪುಟದ ಪ್ರಮುಖ ಶಾಸಕರು, ಸಚಿವರನ್ನು ಆಯ್ಕೆ ಮಾಡುವಲ್ಲಿ ಮತದಾರ ತೆಗೆದುಕೊಂಡ ನಿಲುವು ಹಲವು ಅಚ್ಚರಿಯ ಫಲಿತಾಂಶ ನೀಡಿದೆ.
ಬೆಂಗಳೂರಿನಲ್ಲಿ ಸರ್ವಜ್ಞ ನಗರದಲ್ಲಿ ಮಾಜಿ ಗೃಹ ಸಚಿವ ಕೆಜೆ ಜಾರ್ಜ್ ಅವರನ್ನು ಮತ್ತೊಮ್ಮೆ ಆಯ್ಕೆ ಮಾಡಿದ್ದರೆ, ಮಗನ ತಪ್ಪಿಗೆ ತಂದೆಗೇಕೆ ಶಿಕ್ಷೆ ಎಂಬ ಆಶಯದೊಂದಿಗೆ ಹ್ಯಾರೀಸ್ ಅವರನ್ನು ಆರಿಸಿದ್ದಾರೆ.

ದಕ್ಷಿಣ ಕನ್ನಡದ ಕೋಮುಲಗಭೆಯ ಹಿಂದಿನ ಕೈವಾಡ ಎಂಬ ಆರೋಪ ಹೊತ್ತ ರಮಾನಾಥ್ ರೈ, ಇದೇ ನನ್ನ ಕೊನೆ ಚುನಾವಣೆ ಎಂದ ಹಿರಿಯ ರಾಜಕೀಯ ಮುಖಂಡ ಕಾಗೋಡು ತಿಮ್ಮಪ್ಪ, ನಾನು ಹರಕೆಯ ಕುರಿ ಎಂದ ಎಚ್ ಎಂ ರೇವಣ್ಣ, ಸಿಎಂ ಸಿದ್ದರಾಮಯ್ಯ ಅವರ ಪರಮಾಪ್ತ ಎಚ್ ಸಿ ಮಹಾದೇವಪ್ಪ, ಜಿಲ್ಲಾಧಿಕಾರಿ ವಿರುದ್ಧ ತಿರುಗಿಬಿದ್ದ ಅರಕಲಗೂಡು ಮಂಜು, ಪುಂಡಾಟ ಮಾಡಿದ ವಿನಯ್ ಕುಲಕರ್ಣಿ ಸೇರಿದಂತೆ ಹಲವರನ್ನು ಆಡಳಿತ ವಿರೋಧಿ ಅಲೆಯಿಂದಾಗಿ ಕೊಚ್ಚಿ ಹೋಗುವಂತೆ ಮಾಡಿದ್ದಾರೆ.
ಸೋಲು ಕಂಡ ಸಿದ್ದರಾಮಯ್ಯ ಸರ್ಕಾರದ 15 ಸಚಿವರುಗಳು ಯಾರು ಯಾರು? ಎಲ್ಲೆಲ್ಲಿ ಸೋಲು ಕಂಡಿದ್ದಾರೆ? ಮುಂದೆ ಓದಿ..

ರಮಾನಾಥ್ ರೈ- ಬಂಟ್ವಾಳ
ಹಿರಿಯ ಕಾಂಗ್ರೆಸ್ ನಾಯಕ, ಅರಣ್ಯ ಖಾತೆ ಸಚಿವ ರಮಾನಾಥ್ ರೈ ಅವರು ಬಿಜೆಪಿಯ ಯುವ ಮುಖಂಡ ರಾಜೇಶ್ ನಾಯ್ಕ್ ವಿರುದ್ಧ ಸೋಲು ಕಂಡಿದ್ದಾರೆ.
ರಮಾನಾಥ್ ರೈ ಅವರ ಸೋಲಿಗೆ ಹಿಂದೂ ಕಾರ್ಯಕರ್ತರ ಸರಣಿ ಹತ್ಯೆ ವಿರುದ್ಧ ಆಡಳಿತ ವಿರೋಧಿ ಅಲೆ, ಹಿಂದೂ ವಿರೋಧಿ ಎಂಬ ಹಣೆ ಪಟ್ಟಿ, ಕಲ್ಲಡ್ಕ ಪ್ರಭಾಕರ್ ಭಟ್ ಶಾಲೆಗೆ ಅನುದಾನ ನಿಲ್ಲಿಸಿದ್ದು ಕಾರಣ ಎನ್ನಬಹುದು.
2018ರ ಬಂಟ್ವಾಳ ಫಲಿತಾಂಶ:
* ರಮಾನಾಥ್ ರೈ : 81,831
* ರಾಜೇಶ್ ನಾಯ್ಕ್ : 97,802
ಗೆಲುವಿನ ಅಂತರ : 15,971

ಎಚ್ಎಂ ರೇವಣ್ಣ- ಚನ್ನಪಟ್ಟಣ
ಬೆಂಗಳೂರಿನಲ್ಲಿ ಸ್ಪರ್ಧಿಸಲು ಬಯಸಿದ್ದ ಸಾರಿಗೆ ಎಚ್ಎಂ ರೇವಣ್ಣ ಅವರನ್ನು ಚನ್ನಪಟ್ಟಣದಲ್ಲಿ ಸ್ಪರ್ಧಿಸುವಂತೆ ಸೂಚಿಸಲಾಯಿತು. ನಾನು ಇಲ್ಲಿ ಹರಕೆಯ ಕುರಿ ಎಂದು ಹೇಳುತ್ತಾ ಕ್ಷೇತ್ರಕ್ಕೆ ಬಂದ ರೇವಣ್ಣ, ನಂತರ ಟಗರುವಿನಂತೆ ಗುಮ್ಮುತ್ತೇನೆ ಎಂದಿದ್ದರು. ಆದರೆ, ಚನ್ನಪಟ್ಟಣದಲ್ಲಿ ಎಚ್ ಡಿ ಕುಮಾರಸ್ವಾಮಿ 87,995 ಮತಗಳಿಸಿ ಜಯಭೇರಿ ಬಾರಿಸಿದರೆ, ಬಿಜೆಪಿಯ ಸಿ.ಪಿ ಯೋಗೇಶ್ವರ್ 66,465 ಮತಗಳಿಸಿ ಎರಡನೇ ಸ್ಥಾನ ಗಳಿಸಿದರೆ, ಎಚ್ ಎಂ ರೇವಣ್ಣ 30,208 ಮತಗಳಿಸಿ ಮೂರನೇ ಸ್ಥಾನಕ್ಕೆ ಕುಸಿದರು.

ಕಾಗೋಡು ತಿಮ್ಮಪ್ಪ- ಸಾಗರ
ಕರ್ನಾಟಕ ರಾಜಕೀಯ ರಂಗದ ಅತ್ಯಂತ ಹಿರಿಯ(86) ಮುಖಂಡ ಕಾಗೋಡು ತಿಮ್ಮಪ್ಪ ಅವರು ಸಾಗರ ಕ್ಷೇತ್ರದಲ್ಲಿ ಬಿಜೆಪಿಯ ಅಭ್ಯರ್ಥಿ ಹರತಾಳು ಹಾಲಪ್ಪ ವಿರುದ್ಧ ಸೋಲು ಕಂಡಿದ್ದಾರೆ.
ಹಾಲಪ್ಪ 78, 475 ಮತಗಳನ್ನು ಗಳಿಸಿದರೆ, ಕಾಗೋಡು ತಿಮ್ಮಪ್ಪ 70436 ಮತಗಳನ್ನು ಗಳಿಸಿದರು. 8039 ಮತಗಳ ಅಂತರದಿಂದ ಹಾಲಪ್ಪ ಗೆಲುವು ಸಾಧಿಸಿದ್ದಾರೆ. ಇದೇ ನನ್ನ ಕೊನೆ ಚುನಾವಣೆ ಎಂದಿದ್ದ ಕಾಗೋಡು ಅವರಿಗೆ ಕೊನೆ ಕ್ಷಣದಲ್ಲಿ ಅಳಿಯ ಬೇಳೂರು ಗೋಪಾಲಕೃಷ್ಣ ಜತೆಗೂಡಿದರೂ ಗೆಲುವು ಲಭಿಸಲಿಲ್ಲ
ಸಂತೋಷ್ ಲಾಡ್- ಕಲಘಟಗಿ
ಸಚಿವ ಸ್ಥಾನ ಕಳೆದುಕೊಂಡು ಅನೇಕ ಕೇಸುಗಳನ್ನು ಮೈಮೇಲೆ ಎಳೆದುಕೊಂಡಿದ್ದ ಸಂತೋಷ್ ಲಾಡ್ ಅವರು ಬಳ್ಳಾರಿಯ ಉದ್ಯಮಿಗಳಾದ ಆನಂದ್ ಸಿಂಗ್, ನಾಗೇಂದ್ರ ಅವರನ್ನು ಕಾಂಗ್ರೆಸ್ಸಿಗೆ ಕರೆತಂದಿದ್ದೇ ಸಾಧನೆ. ತಮ್ಮ ಕ್ಷೇತ್ರದ ಅಭಿವೃದ್ಧಿ ಬಗ್ಗೆ ಚಿಂತಿಸದಿರುವುದು ಅವರಿಗೆ ಮುಳುವಾಯಿತು.
ಬಿಜೆಪಿಯ ಸಿಎಂ ನಿಂಬಣ್ಣವರ 83,267 ಮತಗಳನ್ನು ಗಳಿಸಿದರೆ, ಸಂತೋಷ್ ಲಾಡ್ 57,214 ಮತಗಳಿಸಿ, 25,849 ಅಂತರದಿಂದ ಹೀನಾಯ ಸೋಲು ಕಂಡರು.
-
KAS ಅಭ್ಯರ್ಥಿಗಳಿಗೆ ಬಿಗ್ ಶಾಕ್ ನೀಡಿದ KPSC: 384 ಗೆಜೆಟೆಡ್ ಪ್ರೊಬೇಷನರ್ಸ್ ಸಂದರ್ಶನ ಮುಂದೂಡಿಕೆ -
ಮಾರ್ಚ್ 15ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಮಾರ್ಚ್ 16ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಹೆಣ್ಣುಬಾಕ ಕಾಮಪೀಠಿ ವೈರಮುತ್ತು ರಾಮಸ್ವಾಮಿ ಜ್ಞಾನಪೀಠಕ್ಕೆ ಕಳಂಕ: ಲೇಖಕ ಅರುಣ್ ಜೋಳದಕೂಡ್ಲಿಗಿ -
Ragi Mudde: ಕರ್ನಾಟಕದ ರಾಗಿ ಮುದ್ದೆ ಸವಿಯಬೇಕು: ಮಂಡ್ಯದಲ್ಲಿ ಬಯಕೆ ಬಿಚ್ಚಿಟ್ಟ ಕೇಂದ್ರ ಸಚಿವ ಮನ್ಸುಖ್ ಮಾಂಡವೀಯ -
ರೈತರ ಹಿತಾಸಕ್ತಿಗೆ ಧಕ್ಕೆಯಿಲ್ಲ: 1 ರೂಪಾಯಿಗೆ ಲೀಟರ್ ಹಾಲು ವಿವಾದಕ್ಕೆ ಸ್ಪಷ್ಟನೆ ಕೊಟ್ಟ FlipKart -
ಮಾರ್ಚ್ 15 ದಿನ ಭವಿಷ್ಯ: ಈ ರಾಶಿಯವರಿಗೆ ಒಲಿಯಲಿದೆ ಅದೃಷ್ಟ; ನಿಮ್ಮ ಜಾತಕ ಹೇಗಿದೆ ತಿಳಿಯಿರಿ -
Gold Rate: ಆಭರಣ ಪ್ರಿಯರ ಗಮನಕ್ಕೆ; ಮಾರುಕಟ್ಟೆಯಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ ಗೊತ್ತಾ? ಇಲ್ಲಿದೆ ಮಾಹಿತಿ -
ಮಕ್ಕಳನ್ನ ಫ್ಯಾಕ್ಟರಿಯಂತೆ ಹೆರುತ್ತಾರೆ, ಪೋಷಿಸುವ ತಾಕತ್ತಿದ್ರೆ ಮಾತ್ರ ಮಕ್ಕಳು ಮಾಡ್ಕೊಳ್ಳಿ: ನಟಿ ವರಲಕ್ಷ್ಮಿ ಶರತ್ಕುಮಾರ್ -
Viral Video: ಶಾಲಾ ಕಾರ್ಯಕ್ರಮದಲ್ಲಿ ವಿದ್ಯಾರ್ಥಿನಿಯರ ಟವಲ್ ಡ್ಯಾನ್ಸ್: ಚರ್ಚೆ ಹುಟ್ಟುಹಾಕಿದ ವೈರಲ್ ವಿಡಿಯೋ -
Viral Video: ಪೋಷಕರಿಗೆ ಹೊಸ ಕಾರು ಗಿಫ್ಟ್ ಮಾಡಿದ ಹೆಣ್ಣುಮಕ್ಕಳು, ನೆಟ್ಟಿಗರ ಹೃದಯ ಗೆದ್ದ ಈ ವಿಡಿಯೋ -
Anushka Shetty Marriage: ಬೆಂಗಳೂರಿನ ಖ್ಯಾತ ಉದ್ಯಮಿ ಜೊತೆ ನಟಿ ಅನುಷ್ಕಾ ಶೆಟ್ಟಿ ಮದುವೆ, ಈ ವರ್ಷದಲ್ಲೇ ಮುಹೂರ್ತ: ವರದಿ












Click it and Unblock the Notifications