ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಟ್ವೀಟ್ ಮಾಡಿ ಕರ್ನಾಟಕ ಜನತೆಗೆ ಧನ್ಯವಾದ ಹೇಳಿದ ಸಿದ್ದರಾಮಯ್ಯ

|
Google Oneindia Kannada News

ಬೆಂಗಳೂರು, ಮೇ 16: ಐದು ವರ್ಷಗಳ ಕಾಲ ಮುಖ್ಯಮಂತ್ರಿಯಾಗಿ ಕಾರ್ಯನಿರ್ವಹಿಸುವ ಮೂಲಕ ದಾಲೆ ನಿರ್ಮಿಸಿದ ಸಿದ್ದರಾಮಯ್ಯ ಅವರು ನಿನ್ನೆ(ಮೇ 15) ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅನಿರೀಕ್ಷಿತ ಸೋಲು ಅನುಭವಿಸಿದ ನಂತರ ಟ್ವೀಟ್ ಮಾಡಿರುವ ಅವರು, ನಾಡಿನ ಜನತೆಗೆ ಧನ್ಯವಾದ ಅರ್ಪಿಸಿದ್ದಾರೆ.

ಅಯ್ಯೋ ಪಾಪ: ಕಾಂಗ್ರೆಸ್ ಸೋತಿದ್ದಕ್ಕೆ ಕಣ್ಣೀರಿಟ್ಟ ಸಿದ್ದರಾಮಯ್ಯ.!ಅಯ್ಯೋ ಪಾಪ: ಕಾಂಗ್ರೆಸ್ ಸೋತಿದ್ದಕ್ಕೆ ಕಣ್ಣೀರಿಟ್ಟ ಸಿದ್ದರಾಮಯ್ಯ.!

"ಕರ್ನಾಟಕದ ಪ್ರೀತಿಯ ಸಹೋದರ, ಸಹೋದರಿಯರೇ, ನಿಮ್ಮ ತೀರ್ಪಿಗೆ ನಾನು ಧನ್ಯವಾದ ಅರ್ಪಿಸುತ್ತೇನೆ. ಕಳೆದ ಐದು ವರ್ಷಗಳಿಂದ ನಿಮ್ಮ ಸೇವೆ ಮಾಡಲು ನನಗೆ ಅವಕಾಶ ಸಿಕ್ಕಿದ್ದು ನನಗೆ ಸಿಕ್ಕ ಗೌರವ" ಎಂದು ಅವರು ಟ್ವೀಟ್ ಮಾಡಿದ್ದಾರೆ.

ಹಾಗೇ ಮುಂದುವರಿದು, "ಮತ್ತು ಕಾಂಗ್ರೆಸ್ ಪಕ್ಷ ಮತ್ತು ನಾವು ಸ್ಥಾಪಿಸುವ ಹೊಸ ಸರ್ಕಾರ ನಮ್ಮ ರಾಜ್ಯದ ಜನತೆಯ ಹಿತಾಸಕ್ತಿಯನ್ನು ಕಾಪಾಡಲು ಸಮರ್ಥವಾಗಿರುತ್ತದೆ ಎಂದು ನಾನು ವಿಶ್ವಾಸದಿಂದ ಹೇಳುತ್ತೇನೆ" ಎಂದು ಅವರು ಹೇಳಿದ್ದಾರೆ.

Karnataka Election results: Siddaramaiah thanked people of Karnataka on twitter

ನಿನ್ನೆ ಹೊರಬಿದ್ದ ಫಲಿತಾಂಶದಲ್ಲಿ, 222 ಕ್ಷೇತ್ರಗಳಲ್ಲಿ ಬಿಜೆಪಿ 104, ಕಾಂಗ್ರೆಸ್ 78 ಮತ್ತು ಜೆಡಿಎಸ್ 38, ಇತರರು 2 ಕ್ಷೇತ್ರಗಳಲ್ಲಿ ಜಯಗಳಿಸಿದ್ದರು.

English summary
Karnataka Election results 2018: chief minister of Karnataka Siddaramaiah said he is thankful to all people of Karnataka for giving him opportunity to became CM. After Karnataka assembly elections results Congress got only 78 seats whereas BJP gets 104 and becomes single largest party. And JDS gets 38 seats out of 222 constituencies.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X