ರಾಜರಾಜೇಶ್ವರಿ ನಗರ ಫಲಿತಾಂಶ: ಮುನಿರತ್ನಗೆ ಭರ್ಜರಿ ಜಯ
Recommended Video
ಬೆಂಗಳೂರು, ಮೇ 31: ಬಹುನಿರೀಕ್ಷಿತ ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದ ಚುನಾವಣಾ ಫಲಿತಾಂಶ ಇಂದು(ಮೇ 31) ಹೊರಬಿದ್ದಿದೆ. ಕಾಂಗ್ರೆಸ್ ಅಭ್ಯರ್ಥಿ ಮುನಿರತ್ನ ಭರ್ಜರಿ ಜಯ ದಾಖಲಿಸುವ ಮೂಲಕ ಈ ಕ್ಷೇತ್ರದ ಜನಪ್ರತಿನಿಧಿಯಾಗಿ ಮರು ಆಯ್ಕೆಯಾಗಿದ್ದಾರೆ.
18 ಸುತ್ತುಗಳಲ್ಲಿ ನಡೆದ ಮತ ಎಣಿಕೆಯಲ್ಲಿ ಕಾಂಗ್ರೆಸ್ಸಿನ ಮುನಿರತ್ನ 108064 ಮತಗಳನ್ನು ಪಡೆದರೆ, ಬಿಜೆಪಿಯ ತುಳಸಿ ಮುನಿರಾಜು ಗೌಡ 82572 ಮತಗಳು ಮತ್ತು ಜೆಡಿಎಸ್ ನ ರಾಮಚಂದ್ರ 60360 ಮತಗಳನ್ನು ಪಡೆದು ಎರಡು ಮತ್ತು ಮೂರನೇ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡರು.
ನಕಲಿ ಮತದಾರರ ಚೀಟಿ ಪತ್ತೆಯಾದ ಹಿನ್ನೆಲೆಯಲ್ಲಿ ಮೇ 12 ರಂದು ನಡೆಯಬೇಕಿದ್ದ ಈ ಕ್ಷೇತ್ರದ ಚುನಾವಣೆಯನ್ನು ಮೇ 28 ಕ್ಕೆ ಮುಂದೂಡಲಾಗಿತ್ತು.
ಸೋಮವಾರ ನಡೆದ ಶಾಂತಿಯುತ ಚುನಾವಣೆಯಲ್ಲಿ ಶೇ.53 ರಷ್ಟು ಮತದಾನ ದಾಖಲಾಗಿತ್ತು. ರಾಜ್ಯದಲ್ಲಿ ಜೆಡಿಎಸ್- ಕಾಂಗ್ರೆಸ್ ಮೈತ್ರಿ ಸರ್ಕಾರ ಅಸ್ತಿತ್ವದಲ್ಲಿದ್ದರೂ ಈ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮುನಿರತ್ನ ಅವರಿಗೆ ಬೆಂಬಲ ನೀಡಲು ಜೆಡಿಎಸ್ ಅಭ್ಯರ್ಥಿ ರಾಮಚಂದ್ರ ಅವರು ಒಪ್ಪದ ಕಾರಣ ಮೂರೂ ಪಕ್ಷಗಳ ನಡುವಲ್ಲಿ ತ್ರಿಕೋನ ಸ್ಪರ್ಧೆ ಏರ್ಪಟ್ಟಿದೆ. ಬಿಜೆಪಿಯಿಂದ ಮುನಿರಾಜು ಗೌಡ ಸ್ಪರ್ಧಿಸುತ್ತಿದ್ದಾರೆ.
ಒಟ್ಟು 421 ಮತಗಟ್ಟೆಗಳಲ್ಲಿ ಮತದಾನ ನಡೆದಿತ್ತು. ಒಟ್ಟು ಮತದಾರರ ಸಂಖ್ಯೆ 4,54,901 . ಪುರುಷ ಮತದಾರರ ಸಂಖ್ಯೆ 2,38,015, ಮಹಿಳಾ ಮತದಾರರ ಸಂಖ್ಯೆ 2,16,821, ತೃತೀಯ ಲಿಂಗಿಗಳು ಒಟ್ಟು 65.
9 ಸಾವಿರಕ್ಕೂ ಅಧಿಕ ನಕಲಿ ಮತದಾರರ ಚೀಟಿಯಿಂದಾಗಿ ಇಡೀ ರಾಷ್ಟ್ರದ ಗಮನ ಸೆಳೆದಿದ್ದ ರಾಜರಾಜೇಶ್ವರಿ ನಗರ ಚುನಾವಣೆಯಲ್ಲಿ ಜಯ ಯಾರಿಗೆ ಒಲಿಯಲಿದೆ ಎಂಬುದು ಇಂದು ತಿಳಿಯಲಿದೆ. ಮತ ಎಣಿಕೆಯ ಕ್ಷಣ ಕ್ಷಣದ ಮಾಹಿತಿಯನ್ನು ಒನ್ ಇಂಡಿಯಾ ನೀಡಲಿದೆ.
We won the RR Nagar seat with huge margin, the people of Bengaluru have blessed us- Dinesh Gundu Rao, Congress on trends showing Party leading from RR Nagar #Karnataka pic.twitter.com/MWuj5OaIz5
— ANI (@ANI) May 31, 2018
#Rajarajeshwarinagar | #elections | #results pic.twitter.com/2yNzRFfCwr
— Oneindia Kannada (@OneindiaKannada) May 31, 2018