ಸಿ ಫೋರ್ ಸಮೀಕ್ಷೆ: ಮುಂಬೈ ಕರ್ನಾಟಕದಲ್ಲಿ ಈಗಲೂ 'ಕೈ' ಅಲೆ
ಬೆಂಗಳೂರು, ಏಪ್ರಿಲ್ 30: ಮುಂಬೈ-ಕರ್ನಾಟಕ ಭಾಗದಲ್ಲಿ ಮತದಾರರು ಈ ಬಾರಿಯೂ ಕಾಂಗ್ರೆಸ್ನತ್ತ ಹೆಚ್ಚು ಒಲವು ತೋರಿಸಲಿದ್ದಾರೆ ಎಂದು ಸಿ-ಫೋರ್ ನಡೆಸಿರುವ ಚುನಾವಣಾಪೂರ್ವ ಸಮೀಕ್ಷೆ ತಿಳಿಸಿದೆ.
ಬೆಳಗಾವಿ, ಬಾಗಲಕೋಟೆ, ವಿಜಯಪುರ, ಹಾವೇರಿ, ಧಾರವಾಡ ಮತ್ತು ಗದಗ ಜಿಲ್ಲೆಗಳನ್ನು ಒಳಗೊಂಡಿರುವ ಈ ಭಾಗದಲ್ಲಿ 50 ವಿಧಾನಸಭಾ ಕ್ಷೇತ್ರಗಳಿವೆ. ಚಳವಳಿ, ಹೋರಾಟ ಮತ್ತು ಪ್ರತಿಭಟನೆಗಳಿಂದ ಹೆಚ್ಚು ಸುದ್ದಿಯಾಗುತ್ತಿರುವ ಇಲ್ಲಿನ ಜನರು ಮತ್ತೆ ಕಾಂಗ್ರೆಸ್ ಅನ್ನು ಬೆಂಬಲಿಸಲಿದ್ದಾರೆ ಎಂದು ಸಿ-ಫೋರ್ ಸಮೀಕ್ಷೆ ಹೇಳಿದೆ.
ತಮ್ಮ ಸಮಸ್ಯೆಗಳಿಗೆ ಪರಿಹಾರ ಸಿಗಬಹುದೇನೋ ಎಂಬ ನಿರೀಕ್ಷೆಯಿಂದ, ನೆಲ-ಜಲದ ಹೋರಾಟದಲ್ಲಿ ಹೈರಾಣಾಗಿರುವ ಜನರು ರಾಷ್ಟ್ರೀಯ ಪಕ್ಷಗಳತ್ತಲೇ ಒಲವು ತೋರಲು ಮುಂದಾಗಿದ್ದಾರೆ. ಈ ಭಾಗದಲ್ಲಿ ಅತಿ ಹೆಚ್ಚಿನ ಸೀಟುಗಳನ್ನು ಪಡೆಯುವ ಬಿಜೆಪಿ ಕನಸು ಈಡೇರುವುದಿಲ್ಲ. ಹಾಗೆಂದು ಮತದಾರು ಸಂಪೂರ್ಣವಾಗಿ ಕಾಂಗ್ರೆಸ್ನತ್ತ ವಾಲಿಕೊಂಡಿಲ್ಲ ಎಂದು ಅಂಕಿ ಅಂಶ ವಿವರಿಸುತ್ತದೆ.

ಆದರೆ, ಬಿಜೆಪಿಯ ಸ್ಥಿತಿ 2013ರ ಚುನಾವಣೆಗೆ ಹೋಲಿಸಿದರೆ ಸುಧಾರಣೆಯಾಗಲಿದೆ. ಹೆಚ್ಚುವರಿ 13 ಸೀಟುಗಳನ್ನು ಅದು ಗೆದ್ದುಕೊಳ್ಳಲಿದೆ ಎಂದು ಸಮೀಕ್ಷೆ ತಿಳಿಸಿದೆ. ಕಾಂಗ್ರೆಸ್ ಮತ್ತು ಬಿಜೆಪಿ ನಡುವಣ ನೇರ ಪೈಪೋಟಿಗೆ ಮುಂಬೈ-ಕರ್ನಾಟಕ ಸಾಕ್ಷಿಯಾಗಲಿದೆ.
ಮುಂಬೈ ಕರ್ನಾಟಕ ಭಾಗದಲ್ಲಿ 2008ರ ಚುನಾವಣೆಯಲ್ಲಿ ಶೇ 30.55 ಮತಗಳನ್ನು ಪಡೆದಿದ್ದ ಬಿಜೆಪಿ, 2013ರಲ್ಲಿ ಕೇವಲ ಶೇ 15.75 ರಷ್ಟು ಮತಗಳನ್ನು ಪಡೆದುಕೊಂಡಿತ್ತು. ಒಟ್ಟಾರೆ ಮತಗಳಿಗೆ ಪ್ರಮಾಣವನ್ನು ಬಿಜೆಪಿ ಹೆಚ್ಚಿಸಿಕೊಳ್ಳಲಿದೆ. ಕಾಂಗ್ರೆಸ್ನ ಮತಗಳಿಗೆ ಪ್ರಮಾಣ ಕೂಡ ಹೆಚ್ಚಾಗಲಿದೆ. ಕಳೆದ ಚುನಾವಣೆಯಲ್ಲಿ ಮತದಾರರ ಮೇಲೆ ಪ್ರಭಾವ ಬೀರಿದ್ದ ಜೆಡಿಎಸ್, ಕೆಜೆಪಿ, ಬಿಎಸ್ಆರ್ ಕಾಂಗ್ರೆಸ್ ಹಾಗೂ ಇತರೆ ಪಕ್ಷಗಳ ಮತಗಳು ಈ ಎರಡು ಪ್ರಮುಖ ಪಕ್ಷಗಳ ಪಾಲಾಗಲಿವೆ.
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ












Click it and Unblock the Notifications