ರಿಪಬ್ಲಿಕ್ ಎಕ್ಸಿಟ್ ಪೋಲ್ : ಅತೀದೊಡ್ಡ ಪಕ್ಷವಾಗಿ ಹೊರಹೊಮ್ಮಲಿದೆ ಬಿಜೆಪಿ
ಬೆಂಗಳೂರು, ಮೇ 12 : ರಿಪಬ್ಲಿಕ್ ಟಿವಿ ಮತ್ತು ಸಿವೋಟರ್ ನಡೆಸಿರುವ ಚುನಾವಣೋತ್ತರ ಸಮೀಕ್ಷೆಯಂತೆ ಕರ್ನಾಟಕದಲ್ಲಿ ಭಾರತೀಯ ಜನತಾ ಪಕ್ಷ ಅತೀದೊಡ್ಡ ಪಕ್ಷವಾಗಿ ಹೊರಹೊಮ್ಮಲಿದ್ದು, ಸರಕಾರ ರಚಿಸಲು ಸೆಣಸಾಡುವಂಥ ಪರಿಸ್ಥಿತಿ ತಲೆದೋರಲಿದೆ.
ಹಲವಾರು ಚುನಾವಣಾಪೂರ್ವ ಸಮೀಕ್ಷೆಗಳು ನಿರೀಕ್ಷಿಸಿದಂತೆ ಕರ್ನಾಟಕದಲ್ಲಿ ಅತಂತ್ರ ಸ್ಥಿತಿ ನಿರ್ಮಾಣವಾಗಲಿದ್ದು, ಕಾಂಗ್ರೆಸ್ ಎರಡನೇ ಸ್ಥಾನ ಮತ್ತು ಜಾತ್ಯತೀತ ಜನತಾದಳ ಮೂರನೇ ಸ್ಥಾನಕ್ಕೆ ತೃಪ್ತಿಪಡಬೇಕಾಗಿದೆ.

ಈ ಚುನಾವಣೋತ್ತರ ಸಮೀಕ್ಷೆಯ ಫಲಿತಾಂಶ ಹೀಗಿದೆ :
ಬಿಜೆಪಿ - 95-114
ಕಾಂಗ್ರೆಸ್ - 73-82
ಜೆಡಿಎಸ್ - 32-43
ಇತರ - 2-3
ಕರ್ನಾಟಕ ವಿಧಾನಸಭೆಯ 222 ಸ್ಥಾನಕ್ಕಾಗಿ ಮೇ.12 ರಂದು ಮತದಾನ ಪ್ರಕ್ರಿಯೆ ಶಾಂತಿಯುತವಾಗಿ ಅಂತ್ಯ ಕಂಡಿದೆ. ಈಗ ಚುನಾವಣೋತ್ತರ ಸಮೀಕ್ಷೆ, ಫಲಿತಾಂಶದ ಕಾಲ ಆರಂಭವಾಗಿದೆ.
ಈ ಬಾರಿ ರಾಜ್ಯದಲ್ಲಿ ಒಟ್ಟು 5,00,15,895 (5 ಕೋಟಿ) ಮತದಾರರಿದ್ದಾರೆ. ಇದರಲ್ಲಿ 2,53,26,629 ಪುರುಷ ಮತದಾರರಾದರೆ, ಮಹಿಳಾ ಮತದಾರರ ಸಂಖ್ಯೆ 2,46,84,311. ಇನ್ನು 4,955 ತೃತೀಯ ಲಿಂಗಿ ಮತದಾರರೂ ರಾಜ್ಯದಲ್ಲಿದ್ದಾರೆ.
2013ರಲ್ಲಿ ಶೇ 71.45ರಷ್ಟು ಮಾತ್ರ ಮತದಾನ ದಾಖಲಾಗಿತ್ತು. ಕೊನೆ ಘಳಿಗೆಯಲ್ಲಿ ಮತದಾರರು ಕ್ಯೂನಲ್ಲಿ ಬಂದು ನಿಂತರೆ ರಾತ್ರಿ ಹತ್ತು ಗಂಟೆಯಾದರೂ ಮತದಾನ ಮಾಡುವ ಅವಕಾಶ ನೀಡಬೇಕಾಗುತ್ತದೆ.
ಎಲೆಕ್ಟ್ರಾನಿಕ್ ಮಾಧ್ಯಮಗಳು ಮತದಾನಕ್ಕೂ 48 ಗಂಟೆಗಳಿಗೂ ಮುನ್ನ ಯಾವುದೇ ಸಮೀಕ್ಷೆ, ಫಲಿತಾಂಶ ಹೊರ ಹಾಕದಂತೆ ಚುನಾವಣಾ ಆಯೋಗ ನಿಯಮ ಜಾರಿಗೊಳಿಸಿತ್ತು. ಅದರಂತೆ, ಮತದಾನ ಪ್ರಕ್ರಿಯೆ ಮುಗಿದ ನಂತರ ಚುನಾವಣೋತ್ತರ ಸಮೀಕ್ಷೆ ಫಲಿತಾಂಶವನ್ನು ಎಲ್ಲಾ ಮಾಧ್ಯಮಗಳು ಪ್ರಕಟಿಸಿದೆ.
-
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ವಿರಾಟ್ ಅಸಲಿ ಆಟ ಇನ್ನೂ ಬಾಕಿಯಿದೆ; ಕಿಂಗ್ ಕೊಹ್ಲಿಗೆ ವಿಶೇಷ ಮನವಿ ಮಾಡಿಕೊಂಡ ಅಂಬಟಿ ರಾಯುಡು, ಭಾರೀ ವೈರಲ್ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ -
Prakash Raj Mother passed Away: ನಟ ಪ್ರಕಾಶ್ ರಾಜ್ ತಾಯಿ ಸ್ವರ್ಣಲತಾ ನಿಧನ, ಚಿತ್ರರಂಗದ ಗಣ್ಯರಿಂದ ಸಂತಾಪ












Click it and Unblock the Notifications