ರಿಪಬ್ಲಿಕ್ ಎಕ್ಸಿಟ್ ಪೋಲ್ : ಅತೀದೊಡ್ಡ ಪಕ್ಷವಾಗಿ ಹೊರಹೊಮ್ಮಲಿದೆ ಬಿಜೆಪಿ
ಬೆಂಗಳೂರು, ಮೇ 12 : ರಿಪಬ್ಲಿಕ್ ಟಿವಿ ಮತ್ತು ಸಿವೋಟರ್ ನಡೆಸಿರುವ ಚುನಾವಣೋತ್ತರ ಸಮೀಕ್ಷೆಯಂತೆ ಕರ್ನಾಟಕದಲ್ಲಿ ಭಾರತೀಯ ಜನತಾ ಪಕ್ಷ ಅತೀದೊಡ್ಡ ಪಕ್ಷವಾಗಿ ಹೊರಹೊಮ್ಮಲಿದ್ದು, ಸರಕಾರ ರಚಿಸಲು ಸೆಣಸಾಡುವಂಥ ಪರಿಸ್ಥಿತಿ ತಲೆದೋರಲಿದೆ.
ಹಲವಾರು ಚುನಾವಣಾಪೂರ್ವ ಸಮೀಕ್ಷೆಗಳು ನಿರೀಕ್ಷಿಸಿದಂತೆ ಕರ್ನಾಟಕದಲ್ಲಿ ಅತಂತ್ರ ಸ್ಥಿತಿ ನಿರ್ಮಾಣವಾಗಲಿದ್ದು, ಕಾಂಗ್ರೆಸ್ ಎರಡನೇ ಸ್ಥಾನ ಮತ್ತು ಜಾತ್ಯತೀತ ಜನತಾದಳ ಮೂರನೇ ಸ್ಥಾನಕ್ಕೆ ತೃಪ್ತಿಪಡಬೇಕಾಗಿದೆ.

ಈ ಚುನಾವಣೋತ್ತರ ಸಮೀಕ್ಷೆಯ ಫಲಿತಾಂಶ ಹೀಗಿದೆ :
ಬಿಜೆಪಿ - 95-114
ಕಾಂಗ್ರೆಸ್ - 73-82
ಜೆಡಿಎಸ್ - 32-43
ಇತರ - 2-3
ಕರ್ನಾಟಕ ವಿಧಾನಸಭೆಯ 222 ಸ್ಥಾನಕ್ಕಾಗಿ ಮೇ.12 ರಂದು ಮತದಾನ ಪ್ರಕ್ರಿಯೆ ಶಾಂತಿಯುತವಾಗಿ ಅಂತ್ಯ ಕಂಡಿದೆ. ಈಗ ಚುನಾವಣೋತ್ತರ ಸಮೀಕ್ಷೆ, ಫಲಿತಾಂಶದ ಕಾಲ ಆರಂಭವಾಗಿದೆ.
ಈ ಬಾರಿ ರಾಜ್ಯದಲ್ಲಿ ಒಟ್ಟು 5,00,15,895 (5 ಕೋಟಿ) ಮತದಾರರಿದ್ದಾರೆ. ಇದರಲ್ಲಿ 2,53,26,629 ಪುರುಷ ಮತದಾರರಾದರೆ, ಮಹಿಳಾ ಮತದಾರರ ಸಂಖ್ಯೆ 2,46,84,311. ಇನ್ನು 4,955 ತೃತೀಯ ಲಿಂಗಿ ಮತದಾರರೂ ರಾಜ್ಯದಲ್ಲಿದ್ದಾರೆ.
2013ರಲ್ಲಿ ಶೇ 71.45ರಷ್ಟು ಮಾತ್ರ ಮತದಾನ ದಾಖಲಾಗಿತ್ತು. ಕೊನೆ ಘಳಿಗೆಯಲ್ಲಿ ಮತದಾರರು ಕ್ಯೂನಲ್ಲಿ ಬಂದು ನಿಂತರೆ ರಾತ್ರಿ ಹತ್ತು ಗಂಟೆಯಾದರೂ ಮತದಾನ ಮಾಡುವ ಅವಕಾಶ ನೀಡಬೇಕಾಗುತ್ತದೆ.
ಎಲೆಕ್ಟ್ರಾನಿಕ್ ಮಾಧ್ಯಮಗಳು ಮತದಾನಕ್ಕೂ 48 ಗಂಟೆಗಳಿಗೂ ಮುನ್ನ ಯಾವುದೇ ಸಮೀಕ್ಷೆ, ಫಲಿತಾಂಶ ಹೊರ ಹಾಕದಂತೆ ಚುನಾವಣಾ ಆಯೋಗ ನಿಯಮ ಜಾರಿಗೊಳಿಸಿತ್ತು. ಅದರಂತೆ, ಮತದಾನ ಪ್ರಕ್ರಿಯೆ ಮುಗಿದ ನಂತರ ಚುನಾವಣೋತ್ತರ ಸಮೀಕ್ಷೆ ಫಲಿತಾಂಶವನ್ನು ಎಲ್ಲಾ ಮಾಧ್ಯಮಗಳು ಪ್ರಕಟಿಸಿದೆ.
-
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Sanju Samson Father: ಅಂದು ಮಗನನ್ನು ಅಲೆದಾಡಿಸಿದವರು ಇಂದು ಕ್ಷಮೆ ಕೇಳುತ್ತಿದ್ದಾರೆ: ಸಂಜು ಸ್ಯಾಮ್ಸನ್ ತಂದೆಯ ಭಾವುಕ ನುಡಿ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ












Click it and Unblock the Notifications