ಬೆಂಗಳೂರು : ಚಿಕ್ಕಪೇಟೆ ಕ್ಷೇತ್ರದ ಬಹಳ ಕಾಲದ ಸಮಸ್ಯೆಗಳು
ಬೆಂಗಳೂರು, ಏಪ್ರಿಲ್ 26 : ಬೆಂಗಳೂರು ನಗರದ ಪುತರಾತನ ಬಡಾವಣೆ ಚಿಕ್ಕಪೇಟೆ. ನಗರದ ಪ್ರಮುಖ ವ್ಯಾಪಾರಿ ಕೇಂದ್ರವೂ ಹೌದು. ವಿವಿಧ ಬಡಾವಣೆಗಳಿಂದ ಜನರ ಚಿಕ್ಕಪೇಟೆಗೆ ಆಗಮಿಸಲು ನಮ್ಮ ಮೆಟ್ರೋ ರೈಲಿನ ಸೌಕರ್ಯವಿದೆ.
ಚಾಮರಾಜಪೇಟೆ, ಬಸವನಗುಡಿ, ಜಯನಗರ ವಿಧಾನಸಭಾ ಕ್ಷೇತ್ರಗಳ ಹಲವು ಭಾಗಗಳನ್ನು ಸೇರಿಸಿ ಚಿಕ್ಕಪೇಟೆ ಕ್ಷೇತ್ರ ರಚನೆ ಮಾಡಲಾಗಿದೆ. ಪುರಾತನ ಕಟ್ಟಡಗಳನ್ನು ಒಳಗೊಂಡಿರುವ ಕ್ಷೇತ್ರದಲ್ಲಿ ಚಿಕ್ಕರಸ್ತೆಗಳೇ ಅಭಿವೃದ್ಧಿಗೆ ತೊಡಕಾಗಿವೆ.
ಕೆ.ಆರ್.ಮಾರುಕಟ್ಟೆ, ಬೆಂಗಳೂರಿನ ಕರಗ ನಡೆಯುವ ಧರ್ಮರಾಯಸ್ವಾಮಿ ದೇವಾಲಯ, ಎಲೆಕ್ಟ್ರಾನಿಕ್ ವಸ್ತುಗಳಿಗೆ ಪ್ರಸಿದ್ಧಿ ಪಡೆದಿರುವ ಎಸ್.ಪಿ.ರಸ್ತೆ ಈ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುತ್ತವೆ.

ಕ್ಷೇತ್ರದ ಸಮಸ್ಯೆಗಳು
* ಚಿಕ್ಕದಾದ ರಸ್ತೆಗಳನ್ನು ಹೊಂದಿರುವ ಚಿಕ್ಕಪೇಟೆಯಲ್ಲಿ ಸಮಸ್ಯೆಗಳು ಹಲವು. ಕಿರಿದಾದ ರಸ್ತೆಗಳಲ್ಲಿ ಎಲ್ಲೆಂದರಲ್ಲಿ ವಾಹನಗಳನ್ನು ನಿಲ್ಲಿಸಲಾಗುತ್ತದೆ. ಆದ್ದರಿಂದ, ವಾಹನ ಸವಾರರಿಗೆ ಕ್ಷೇತ್ರದ ವ್ಯಾಪ್ತಿಯಲ್ಲಿಸಂಚಾರ ನಡೆಸುವುದು ಸವಾಲಿನ ಕೆಲಸ. ನಿಧಾನಗತಿಯ ವಾಹನ ಸಂಚಾರ ಪ್ರತಿನಿತ್ಯದ ಸಮಸ್ಯೆಯಾಗಿದೆ.
ವಿಧಾನಸಭೆ ಚುನಾವಣೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ | ಟಿಕೆಟ್ ರಾಜಕೀಯ
* ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಸುಧಾಮನಗರದಲ್ಲಿ ರಾಜಾ ಕಾಲುವೆ ಹರಿದು ಹೋಗುತ್ತದೆ. ಮಳೆ ಬಂದಾಗ ರಾಜಾಕಾಲುವೆ ಉಕ್ಕಿ ಹರಿದು ಅಕ್ಕಪಕ್ಕದ ರಸ್ತೆಗಳಲ್ಲಿ ಕೊಳಚೆ ನೀರು ತುಂಬಿಕೊಳ್ಳುತ್ತದೆ. ಕಾಲುವೆ ಸ್ವಚ್ಚಗೊಳಿಸಿ, ನೀರು ಸುಲಭವಾಗಿ ಹರಿದು ಹೋಗುವಂತೆ ಮಾಡುವ ಕಾಮಗಾರಿಯೂ ನಡೆಯುತ್ತಿದೆ.
* ಕ್ಷೇತ್ರದಲ್ಲಿ ವಾಹನ ಸಂಚಾರ ದಟ್ಟಣೆ ಹೆಚ್ಚು, ಪಾರ್ಕಿಂಗ್ಗೆ ವ್ಯವಸ್ಥೆ ಕಡಿಮೆ. ಜನಪ್ರತಿನಿಧಿಗಳು ಪಾರ್ಕಿಂಗ್, ಸಂಚಾರ ದಟ್ಟಣೆ ಬಗೆಹರಿಸಲು ಯಾವುದೇ ಕ್ರಮ ಕೈಗೊಂಡಿಲ್ಲ ಎಂಬುದು ಸ್ಥಳೀಯ ನಿವಾಸಿಗಳ ಮಾಹಿತಿ.
ವಾರ್ಡ್ಗಳು : ಧರ್ಮರಾಯಸ್ವಾಮಿ ದೇವಸ್ಥಾನ, ಸುಧಾಮನಗರ, ಸುಂಕೇನಹಳ್ಳಿ, ವಿಶ್ವೇಶ್ವರಪುರ, ಸಿದ್ದಾಪುರ, ಹೊಂಬೇಗೌಡ ನಗರ ಮತ್ತು ಜಯನಗರ ವಾರ್ಡ್ಗಳನ್ನು ಕ್ಷೇತ್ರ ಹೊಂದಿದೆ.
ಕ್ಷೇತ್ರದ ಹಾಲಿ ಶಾಸಕರು ಕಾಂಗ್ರೆಸ್ನ ಆರ್.ವಿ.ದೇವರಾಜ್. 2018ರ ಚುನಾವಣೆಯಲ್ಲಿಯೂ ಅವರೇ ಅಭ್ಯರ್ಥಿ. ಬಿಜೆಪಿಯಿಂದ ಉದಯ್ ಗರುಡಾಚಾರ್, ಜೆಡಿಎಸ್ನಿಂದ ಹೇಮಚಂದ್ರ ಸಾಗರ್ ಅವರು ಅಭ್ಯರ್ಥಿಯಾಗಿದ್ದಾರೆ.
-
ಕರ್ನಾಟಕದಲ್ಲಿ 40 ಡಿಗ್ರಿ ಸೆಲ್ಸಿಯಸ್ ದಾಟಿದೆ ಉಷ್ಣಾಂಶ: ಈಗಿನ್ನೂ ಮಾರ್ಚ್, ಮೇ ಕಥೆ ಹೇಗೆ? ಬಿಸಿಗಾಳಿಗೆ ಬಸವಳಿದ ಜನ -
Gold Rate: ಬಂಗಾರ ಮತ್ತಷ್ಟು ದುಬಾರಿ: 16,000 ರೂ. ದಾಟಿದ ಚಿನ್ನ, ಬೆಳ್ಳಿ ಬೆಲೆ ಕೂಡ ಏರಿಕೆ, ಇಲ್ಲಿದೆ ಇಂದಿನ ದರ ವಿವರ -
ಎಲ್ಪಿಜಿ ಸಿಲಿಂಡರ್ ಪೂರೈಕೆ ಸ್ಥಗಿತ: ನಾಳೆಯಿಂದ ಬೆಂಗಳೂರಿನಾದ್ಯಂತ ಹೋಟೆಲ್ಗಳು ಬಂದ್ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣಕ್ಕೆ ಈ ಪ್ರದೇಶ ಬೆಸ್ಟ್: ಉದ್ಯಮಿ ಕಿರಣ್ ಮಜುಂದಾರ್ ಶಾ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು












Click it and Unblock the Notifications