ಬೆಂಗಳೂರು : ಚಿಕ್ಕಪೇಟೆ ಕ್ಷೇತ್ರದ ಬಹಳ ಕಾಲದ ಸಮಸ್ಯೆಗಳು
ಬೆಂಗಳೂರು, ಏಪ್ರಿಲ್ 26 : ಬೆಂಗಳೂರು ನಗರದ ಪುತರಾತನ ಬಡಾವಣೆ ಚಿಕ್ಕಪೇಟೆ. ನಗರದ ಪ್ರಮುಖ ವ್ಯಾಪಾರಿ ಕೇಂದ್ರವೂ ಹೌದು. ವಿವಿಧ ಬಡಾವಣೆಗಳಿಂದ ಜನರ ಚಿಕ್ಕಪೇಟೆಗೆ ಆಗಮಿಸಲು ನಮ್ಮ ಮೆಟ್ರೋ ರೈಲಿನ ಸೌಕರ್ಯವಿದೆ.
ಚಾಮರಾಜಪೇಟೆ, ಬಸವನಗುಡಿ, ಜಯನಗರ ವಿಧಾನಸಭಾ ಕ್ಷೇತ್ರಗಳ ಹಲವು ಭಾಗಗಳನ್ನು ಸೇರಿಸಿ ಚಿಕ್ಕಪೇಟೆ ಕ್ಷೇತ್ರ ರಚನೆ ಮಾಡಲಾಗಿದೆ. ಪುರಾತನ ಕಟ್ಟಡಗಳನ್ನು ಒಳಗೊಂಡಿರುವ ಕ್ಷೇತ್ರದಲ್ಲಿ ಚಿಕ್ಕರಸ್ತೆಗಳೇ ಅಭಿವೃದ್ಧಿಗೆ ತೊಡಕಾಗಿವೆ.
ಕೆ.ಆರ್.ಮಾರುಕಟ್ಟೆ, ಬೆಂಗಳೂರಿನ ಕರಗ ನಡೆಯುವ ಧರ್ಮರಾಯಸ್ವಾಮಿ ದೇವಾಲಯ, ಎಲೆಕ್ಟ್ರಾನಿಕ್ ವಸ್ತುಗಳಿಗೆ ಪ್ರಸಿದ್ಧಿ ಪಡೆದಿರುವ ಎಸ್.ಪಿ.ರಸ್ತೆ ಈ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುತ್ತವೆ.

ಕ್ಷೇತ್ರದ ಸಮಸ್ಯೆಗಳು
* ಚಿಕ್ಕದಾದ ರಸ್ತೆಗಳನ್ನು ಹೊಂದಿರುವ ಚಿಕ್ಕಪೇಟೆಯಲ್ಲಿ ಸಮಸ್ಯೆಗಳು ಹಲವು. ಕಿರಿದಾದ ರಸ್ತೆಗಳಲ್ಲಿ ಎಲ್ಲೆಂದರಲ್ಲಿ ವಾಹನಗಳನ್ನು ನಿಲ್ಲಿಸಲಾಗುತ್ತದೆ. ಆದ್ದರಿಂದ, ವಾಹನ ಸವಾರರಿಗೆ ಕ್ಷೇತ್ರದ ವ್ಯಾಪ್ತಿಯಲ್ಲಿಸಂಚಾರ ನಡೆಸುವುದು ಸವಾಲಿನ ಕೆಲಸ. ನಿಧಾನಗತಿಯ ವಾಹನ ಸಂಚಾರ ಪ್ರತಿನಿತ್ಯದ ಸಮಸ್ಯೆಯಾಗಿದೆ.
ವಿಧಾನಸಭೆ ಚುನಾವಣೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ | ಟಿಕೆಟ್ ರಾಜಕೀಯ
* ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಸುಧಾಮನಗರದಲ್ಲಿ ರಾಜಾ ಕಾಲುವೆ ಹರಿದು ಹೋಗುತ್ತದೆ. ಮಳೆ ಬಂದಾಗ ರಾಜಾಕಾಲುವೆ ಉಕ್ಕಿ ಹರಿದು ಅಕ್ಕಪಕ್ಕದ ರಸ್ತೆಗಳಲ್ಲಿ ಕೊಳಚೆ ನೀರು ತುಂಬಿಕೊಳ್ಳುತ್ತದೆ. ಕಾಲುವೆ ಸ್ವಚ್ಚಗೊಳಿಸಿ, ನೀರು ಸುಲಭವಾಗಿ ಹರಿದು ಹೋಗುವಂತೆ ಮಾಡುವ ಕಾಮಗಾರಿಯೂ ನಡೆಯುತ್ತಿದೆ.
* ಕ್ಷೇತ್ರದಲ್ಲಿ ವಾಹನ ಸಂಚಾರ ದಟ್ಟಣೆ ಹೆಚ್ಚು, ಪಾರ್ಕಿಂಗ್ಗೆ ವ್ಯವಸ್ಥೆ ಕಡಿಮೆ. ಜನಪ್ರತಿನಿಧಿಗಳು ಪಾರ್ಕಿಂಗ್, ಸಂಚಾರ ದಟ್ಟಣೆ ಬಗೆಹರಿಸಲು ಯಾವುದೇ ಕ್ರಮ ಕೈಗೊಂಡಿಲ್ಲ ಎಂಬುದು ಸ್ಥಳೀಯ ನಿವಾಸಿಗಳ ಮಾಹಿತಿ.
ವಾರ್ಡ್ಗಳು : ಧರ್ಮರಾಯಸ್ವಾಮಿ ದೇವಸ್ಥಾನ, ಸುಧಾಮನಗರ, ಸುಂಕೇನಹಳ್ಳಿ, ವಿಶ್ವೇಶ್ವರಪುರ, ಸಿದ್ದಾಪುರ, ಹೊಂಬೇಗೌಡ ನಗರ ಮತ್ತು ಜಯನಗರ ವಾರ್ಡ್ಗಳನ್ನು ಕ್ಷೇತ್ರ ಹೊಂದಿದೆ.
ಕ್ಷೇತ್ರದ ಹಾಲಿ ಶಾಸಕರು ಕಾಂಗ್ರೆಸ್ನ ಆರ್.ವಿ.ದೇವರಾಜ್. 2018ರ ಚುನಾವಣೆಯಲ್ಲಿಯೂ ಅವರೇ ಅಭ್ಯರ್ಥಿ. ಬಿಜೆಪಿಯಿಂದ ಉದಯ್ ಗರುಡಾಚಾರ್, ಜೆಡಿಎಸ್ನಿಂದ ಹೇಮಚಂದ್ರ ಸಾಗರ್ ಅವರು ಅಭ್ಯರ್ಥಿಯಾಗಿದ್ದಾರೆ.
-
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
SWR: ಪ್ರಶಾಂತಿ ಎಕ್ಸ್ಪ್ರೆಸ್ ರೈಲಿಗೆ ಹೆಚ್ಚುವರಿ ಬೋಗಿ: ರೈಲುಗಳ ನಿಲುಗಡೆಯಲ್ಲಿ ಬದಲಾವಣೆ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Hindi Language: ಹಿಂದಿ ಭಾಷೆ ರದ್ದು, ಎಸ್ಎಸ್ಎಲ್ಸಿ ಮಕ್ಕಳ ಬದುಕಿಗೆ ಕಲ್ಲು:ಆರ್ ಅಶೋಕ್ -
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
ಕೊಹ್ಲಿ ಭಾಯ್ಗೆ ಮೈದಾನದಲ್ಲಿ ಕೆಣಕ್ಬೇಡಿ, ತುಂಬಾ ಸಮಯ ನಿಲ್ಲಲು ಬಿಡಬೇಡಿ; ಎಸ್ಆರ್ಎಚ್ ಸಹ ಆಟಗಾರರಿಗೆ ಇಶಾನ್ ಎಚ್ಚರಿಕೆ ಸಂದೇಶ -
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ












Click it and Unblock the Notifications