Get Updates
Get notified of breaking news, exclusive insights, and must-see stories!

'ಬಿಜೆಪಿಯವರು ಸಚಿವ ಸ್ಥಾನದ ಆಮಿಷವೊಡ್ಡಿದರು'

ಬೆಂಗಳೂರು, ಮೇ 16 : ಮಾಜಿ ಸಚಿವ, ಕುಷ್ಟಗಿ ಕ್ಷೇತ್ರದ ಕಾಂಗ್ರೆಸ್ ಶಾಸಕ ಅಮರೇಗೌಡ ಪಾಟೀಲ್ ಬಯ್ಯಾಪೂರ ಅವರಿಗೆ ಬಿಜೆಪಿ ಸಚಿವ ಸ್ಥಾನದ ಆಮಿಷ ವೊಡ್ಡಿಗೆ. ಈ ಮೂಲಕ ಬಿಜೆಪಿ ಅಧಿಕೃತವಾಗಿ ಆಪರೇಷನ್ ಕಮಲಕ್ಕೆ 'ಕೈ' ಹಾಕಿದೆ.

ಅಮರೇಗೌಡ ಪಾಟೀಲ್ ಬಯ್ಯಾಪೂರ ಅವರು ಈ ಕುರಿತು ಹೇಳಿಕೆ ನೀಡಿದ್ದು, 'ಬಿಜೆಪಿಯಿಂದ ಅಧಿಕೃತವಾಗಿ ನನಗೆ ಕರೆ ಬಂದಿತ್ತು. ಸಚಿವ ಸ್ಥಾನ ನೀಡುವುದಾಗಿ ನನಗೆ ಆಮಿಷ ವೊಡ್ಡಿದರು' ಎಂದು ಹೇಳಿದ್ದಾರೆ.

Karnataka elections result 2018 : Congress MLA claims BJP approached him

'ನಾನು ಯಾವುದೇ ಕಾರಣಕ್ಕೂ ಬಿಜೆಪಿಗೆ ಹೋಗುವುದಿಲ್ಲ. ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರದ ಭಾಗವಾಗಿ ಇರುವೆ. ಎಚ್.ಡಿ.ಕುಮಾರಸ್ವಾಮಿ ಅವರೇ ನಮ್ಮ ಮುಖ್ಯಮಂತ್ರಿ' ಎಂದು ಅಮರೇಗೌಡ ಪಾಟೀಲ್ ಬಯ್ಯಾಪೂರ ಹೇಳಿದ್ದಾರೆ.

ಯಾರನ್ನೂ ಸಂಪರ್ಕಿಸಿಲ್ಲ : ಮಾಜಿ ಸಚಿವ, ಬಿಜೆಪಿ ನಾಯಕ ಬಸವರಾಜ ಬೊಮ್ಮಾಯಿ ಅವರು, 'ಬಿಜೆಪಿ ಯಾವ ಶಾಸಕರನ್ನೂ ಸಂಪರ್ಕಿಸಿಲ್ಲ. ಇನ್ನೂ ಎರಡು ಮೂರು ದಿನಗಳ ಕಾಲ ಇದೇ ರೀತಿಯ ರಾಜಕೀಯ ಬೆಳವಣಿಗೆಗಳು ನಡೆಯಲಿವೆ' ಎಂದು ಸ್ಪಷ್ಟಪಡಿಸಿದ್ದಾರೆ.

ಪರಮೇಶ್ವರ ಸೂಚನೆ : ಯಾವುದೇ ಕಾಂಗ್ರೆಸ್ ಶಾಸಕರು ಬಿಜೆಪಿ ಜೊತೆ ಹೋಗಬಾರದು. ಜಿಲ್ಲೆಯಲ್ಲಿ ನಡೆಯುವ ಎಲ್ಲಾ ಬೆಳವಣಿಗೆಗಳ ಮೇಲೆ ಗಮನವಿಡಿ ಎಂದು ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ ಅವರು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಿಗೆ ಸೂಚನೆ ನೀಡಿದ್ದಾರೆ.

ಶಾಸಕಾಂಗ ಸಭೆ : ಕೆಪಿಸಿಸಿ ಕಚೇರಿಯಲ್ಲಿ ಶಾಸಕಾಂಗ ಪಕ್ಷದ ಸಭೆ ಆರಂಭವಾಗಿದೆ. ಜೆಡಿಎಸ್‌ ಪಕ್ಷಕ್ಕೆ ಬೆಂಬಲ ನೀಡುವ ಕುರಿತು ಸಭೆಯಲ್ಲಿ ನಿರ್ಣಯವನ್ನು ಮಂಡಿಸಿ, ಎಲ್ಲಾ ಶಾಸಕರ ಒಪ್ಪಿಗೆ ಪಡೆದು ರಾಜ್ಯಪಾಲರಿಗೆ ಸಲ್ಲಿಸಲಾಗುತ್ತದೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+