'ಬಿಜೆಪಿಯವರು ಸಚಿವ ಸ್ಥಾನದ ಆಮಿಷವೊಡ್ಡಿದರು'
ಬೆಂಗಳೂರು, ಮೇ 16 : ಮಾಜಿ ಸಚಿವ, ಕುಷ್ಟಗಿ ಕ್ಷೇತ್ರದ ಕಾಂಗ್ರೆಸ್ ಶಾಸಕ ಅಮರೇಗೌಡ ಪಾಟೀಲ್ ಬಯ್ಯಾಪೂರ ಅವರಿಗೆ ಬಿಜೆಪಿ ಸಚಿವ ಸ್ಥಾನದ ಆಮಿಷ ವೊಡ್ಡಿಗೆ. ಈ ಮೂಲಕ ಬಿಜೆಪಿ ಅಧಿಕೃತವಾಗಿ ಆಪರೇಷನ್ ಕಮಲಕ್ಕೆ 'ಕೈ' ಹಾಕಿದೆ.
ಅಮರೇಗೌಡ ಪಾಟೀಲ್ ಬಯ್ಯಾಪೂರ ಅವರು ಈ ಕುರಿತು ಹೇಳಿಕೆ ನೀಡಿದ್ದು, 'ಬಿಜೆಪಿಯಿಂದ ಅಧಿಕೃತವಾಗಿ ನನಗೆ ಕರೆ ಬಂದಿತ್ತು. ಸಚಿವ ಸ್ಥಾನ ನೀಡುವುದಾಗಿ ನನಗೆ ಆಮಿಷ ವೊಡ್ಡಿದರು' ಎಂದು ಹೇಳಿದ್ದಾರೆ.

'ನಾನು ಯಾವುದೇ ಕಾರಣಕ್ಕೂ ಬಿಜೆಪಿಗೆ ಹೋಗುವುದಿಲ್ಲ. ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರದ ಭಾಗವಾಗಿ ಇರುವೆ. ಎಚ್.ಡಿ.ಕುಮಾರಸ್ವಾಮಿ ಅವರೇ ನಮ್ಮ ಮುಖ್ಯಮಂತ್ರಿ' ಎಂದು ಅಮರೇಗೌಡ ಪಾಟೀಲ್ ಬಯ್ಯಾಪೂರ ಹೇಳಿದ್ದಾರೆ.
ಯಾರನ್ನೂ ಸಂಪರ್ಕಿಸಿಲ್ಲ : ಮಾಜಿ ಸಚಿವ, ಬಿಜೆಪಿ ನಾಯಕ ಬಸವರಾಜ ಬೊಮ್ಮಾಯಿ ಅವರು, 'ಬಿಜೆಪಿ ಯಾವ ಶಾಸಕರನ್ನೂ ಸಂಪರ್ಕಿಸಿಲ್ಲ. ಇನ್ನೂ ಎರಡು ಮೂರು ದಿನಗಳ ಕಾಲ ಇದೇ ರೀತಿಯ ರಾಜಕೀಯ ಬೆಳವಣಿಗೆಗಳು ನಡೆಯಲಿವೆ' ಎಂದು ಸ್ಪಷ್ಟಪಡಿಸಿದ್ದಾರೆ.
Yes definitely there is a plan. We have to safeguard our MLAs, We will let you know what is the plan: DK Shivakumar, Congress on being asked if Congress MLAs in Karnataka will be shifted somewhere else pic.twitter.com/WxyIDAFLcW
— ANI (@ANI) May 16, 2018
ಪರಮೇಶ್ವರ ಸೂಚನೆ : ಯಾವುದೇ ಕಾಂಗ್ರೆಸ್ ಶಾಸಕರು ಬಿಜೆಪಿ ಜೊತೆ ಹೋಗಬಾರದು. ಜಿಲ್ಲೆಯಲ್ಲಿ ನಡೆಯುವ ಎಲ್ಲಾ ಬೆಳವಣಿಗೆಗಳ ಮೇಲೆ ಗಮನವಿಡಿ ಎಂದು ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ ಅವರು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಿಗೆ ಸೂಚನೆ ನೀಡಿದ್ದಾರೆ.
ಶಾಸಕಾಂಗ ಸಭೆ : ಕೆಪಿಸಿಸಿ ಕಚೇರಿಯಲ್ಲಿ ಶಾಸಕಾಂಗ ಪಕ್ಷದ ಸಭೆ ಆರಂಭವಾಗಿದೆ. ಜೆಡಿಎಸ್ ಪಕ್ಷಕ್ಕೆ ಬೆಂಬಲ ನೀಡುವ ಕುರಿತು ಸಭೆಯಲ್ಲಿ ನಿರ್ಣಯವನ್ನು ಮಂಡಿಸಿ, ಎಲ್ಲಾ ಶಾಸಕರ ಒಪ್ಪಿಗೆ ಪಡೆದು ರಾಜ್ಯಪಾಲರಿಗೆ ಸಲ್ಲಿಸಲಾಗುತ್ತದೆ.
-
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
LPG ಕೊರತೆ ಎಫೆಕ್ಟ್: ಬೆಂಗಳೂರಿನ ಪಿಜಿಗಳಲ್ಲಿ ಇನ್ಮುಂದೆ ಸಿಗಲ್ಲ ದೋಸೆ, ಚಪಾತಿ -
ಬೆಂಗಳೂರಿನ ಪ್ರಮುಖ ವಿದ್ಯುತ್ ಸ್ಥಾವರ ಬಂದ್; ರಾಜ್ಯದಲ್ಲಿ ವಿದ್ಯುತ್ ಕಡಿತದ ಭೀತಿ! -
Horoscope March 13: ಈ ರಾಶಿಯವರ ಬದುಕಲ್ಲಿ ಸಕಾರಾತ್ಮಕ ಬೆಳವಣಿಗೆ, ಅಧಿಕ ಲಾಭ; ದಿನ ಭವಿಷ್ಯ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ -
Bengaluru: SSLC ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಬಿಎಂಟಿಸಿಯಿಂದ ಉಚಿತ ಪ್ರಯಾಣ -
Gold: ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರದ ನಿಧಿ ಮೌಲ್ಯ 8 ಕೋಟಿ ರೂ.; ನಿಧಿ ಕೊಟ್ಟ ಕುಟುಂಬದಿಂದ ಹೊಸ ಡಿಮ್ಯಾಂಡ್, ಉತ್ಖನನ ಅಂತ್ಯ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್












Click it and Unblock the Notifications