'ಬಿಜೆಪಿಯವರು ಸಚಿವ ಸ್ಥಾನದ ಆಮಿಷವೊಡ್ಡಿದರು'
ಬೆಂಗಳೂರು, ಮೇ 16 : ಮಾಜಿ ಸಚಿವ, ಕುಷ್ಟಗಿ ಕ್ಷೇತ್ರದ ಕಾಂಗ್ರೆಸ್ ಶಾಸಕ ಅಮರೇಗೌಡ ಪಾಟೀಲ್ ಬಯ್ಯಾಪೂರ ಅವರಿಗೆ ಬಿಜೆಪಿ ಸಚಿವ ಸ್ಥಾನದ ಆಮಿಷ ವೊಡ್ಡಿಗೆ. ಈ ಮೂಲಕ ಬಿಜೆಪಿ ಅಧಿಕೃತವಾಗಿ ಆಪರೇಷನ್ ಕಮಲಕ್ಕೆ 'ಕೈ' ಹಾಕಿದೆ.
ಜೆಡಿಎಸ್-ಕಾಂಗ್ರೆಸ್ ಮೈತ್ರಿ ಜಾಣತನದ್ದೆ? ಮುಂದೇನಾಗಲಿದೆ?
ಅಮರೇಗೌಡ ಪಾಟೀಲ್ ಬಯ್ಯಾಪೂರ ಅವರು ಈ ಕುರಿತು ಹೇಳಿಕೆ ನೀಡಿದ್ದು, 'ಬಿಜೆಪಿಯಿಂದ ಅಧಿಕೃತವಾಗಿ ನನಗೆ ಕರೆ ಬಂದಿತ್ತು. ಸಚಿವ ಸ್ಥಾನ ನೀಡುವುದಾಗಿ ನನಗೆ ಆಮಿಷ ವೊಡ್ಡಿದರು' ಎಂದು ಹೇಳಿದ್ದಾರೆ.
'ನಾನು ಯಾವುದೇ ಕಾರಣಕ್ಕೂ ಬಿಜೆಪಿಗೆ ಹೋಗುವುದಿಲ್ಲ. ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರದ ಭಾಗವಾಗಿ ಇರುವೆ. ಎಚ್.ಡಿ.ಕುಮಾರಸ್ವಾಮಿ ಅವರೇ ನಮ್ಮ ಮುಖ್ಯಮಂತ್ರಿ' ಎಂದು ಅಮರೇಗೌಡ ಪಾಟೀಲ್ ಬಯ್ಯಾಪೂರ ಹೇಳಿದ್ದಾರೆ.
ಕಾಂಗ್ರೆಸ್ ಜೊತೆ ಮೈತ್ರಿಗೆ ಜೆಡಿಎಸ್ ಒಪ್ಪಿಗೆ,ಬಿಎಸ್ವೈ ಕನಸು ಭಗ್ನ
ಯಾರನ್ನೂ ಸಂಪರ್ಕಿಸಿಲ್ಲ : ಮಾಜಿ ಸಚಿವ, ಬಿಜೆಪಿ ನಾಯಕ ಬಸವರಾಜ ಬೊಮ್ಮಾಯಿ ಅವರು, 'ಬಿಜೆಪಿ ಯಾವ ಶಾಸಕರನ್ನೂ ಸಂಪರ್ಕಿಸಿಲ್ಲ. ಇನ್ನೂ ಎರಡು ಮೂರು ದಿನಗಳ ಕಾಲ ಇದೇ ರೀತಿಯ ರಾಜಕೀಯ ಬೆಳವಣಿಗೆಗಳು ನಡೆಯಲಿವೆ' ಎಂದು ಸ್ಪಷ್ಟಪಡಿಸಿದ್ದಾರೆ.
Yes definitely there is a plan. We have to safeguard our MLAs, We will let you know what is the plan: DK Shivakumar, Congress on being asked if Congress MLAs in Karnataka will be shifted somewhere else pic.twitter.com/WxyIDAFLcW
— ANI (@ANI) May 16, 2018
ಪರಮೇಶ್ವರ ಸೂಚನೆ : ಯಾವುದೇ ಕಾಂಗ್ರೆಸ್ ಶಾಸಕರು ಬಿಜೆಪಿ ಜೊತೆ ಹೋಗಬಾರದು. ಜಿಲ್ಲೆಯಲ್ಲಿ ನಡೆಯುವ ಎಲ್ಲಾ ಬೆಳವಣಿಗೆಗಳ ಮೇಲೆ ಗಮನವಿಡಿ ಎಂದು ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ ಅವರು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಿಗೆ ಸೂಚನೆ ನೀಡಿದ್ದಾರೆ.
ಶಾಸಕಾಂಗ ಸಭೆ : ಕೆಪಿಸಿಸಿ ಕಚೇರಿಯಲ್ಲಿ ಶಾಸಕಾಂಗ ಪಕ್ಷದ ಸಭೆ ಆರಂಭವಾಗಿದೆ. ಜೆಡಿಎಸ್ ಪಕ್ಷಕ್ಕೆ ಬೆಂಬಲ ನೀಡುವ ಕುರಿತು ಸಭೆಯಲ್ಲಿ ನಿರ್ಣಯವನ್ನು ಮಂಡಿಸಿ, ಎಲ್ಲಾ ಶಾಸಕರ ಒಪ್ಪಿಗೆ ಪಡೆದು ರಾಜ್ಯಪಾಲರಿಗೆ ಸಲ್ಲಿಸಲಾಗುತ್ತದೆ.