ಜಮೀರ್ ಅಹ್ಮದ್ ಗೂ ಕರೆ ಮಾಡಿತ್ತು ಬಿಜೆಪಿ!
Recommended Video
ಬೆಂಗಳೂರು, ಮೇ 17: ಬಹುಮತ ಸಾಬೀತುಪಡಿಸುವ ಒತ್ತಡದಲ್ಲಿರುವ ಬಿಜೆಪಿ ನಾಯಕರು, ಕಾಂಗ್ರೆಸ್ ನ ಚಾಮರಾಜಪೇಟೆ ಶಾಸಕ ಜಮೀರ್ ಅಹ್ಮದ್ ಗೆ ಕರೆ ಮಾಡಿದ್ದರು ಎಂದು ಸ್ವತಃ ಜಮೀರ್ ಅಹ್ಮದ್ ತಿಳಿಸಿದ್ದಾರೆ.
"ನನಗೂ ಕರೆ ಬಂದಿತ್ತು. ಆದರೆ ನಾನು ಮತ್ತು ಕುಮಾರಸ್ವಾಮಿ ಇಬ್ಬರೂ ಹಳೇ ದೋಸ್ತಿಗಳು. ನಾವು ಮತ್ತೆ ಒಂದಾಗುತ್ತಿದ್ದೇವೆ. ನಾನು ಕಾಂಗ್ರೆಸ್ ಬಿಡುವ ಪ್ರಶ್ನೆಯೇ ಇಲ್ಲ" ಎಂದು ಜಮೀರ್ ಅಹ್ಮದ್ ತಿಳಿಸಿದ್ದಾರೆ.
ಎಚ್ಡಿಕೆ ಮುಖ್ಯಮಂತ್ರಿಯಾದ್ರೆ, ಎಂಬ ಪ್ರಶ್ನೆಗೆ ಜಮೀರ್ ಕೊಟ್ಟ ಉತ್ತರ
ಜೆಡಿಎಸ್ ನಲ್ಲಿದ್ದ ಜಮೀರ್ ಅಹ್ಮದ್ ಬಂಡಾಯವೆದ್ದು ಕಾಂಗ್ರೆಸ್ ಸೇರಿದ್ದರು. ನಂತರ ಕಾಂಗ್ರೆಸ್ಸಿನಿಂದ ಬೆಂಗಳೂರಿನ ಚಾಮರಾಜಪೇಟೆ ಕ್ಷೇತ್ರದಿಂದ ಸ್ಪರ್ಧಿಸಿದ್ದ ಅವರು ಗೆಲುವು ಸಾಧಿಸಿದ್ದರು.
ಮೇ 12 ರಂದು ನಡೆದ ವಿಧಾನಸಭೆ ಚುನಾವಣೆಯ ಫಲಿತಾಂಶ ಮೇ 15 ರಂದು ಹೊರಬಿದ್ದಿತ್ತು. ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ 104 ಸ್ಥಾನ, ಕಾಂಗ್ರೆಸ್ 78 ಸ್ಥಾನ, ಜೆಡಿಎಸ್ 38 ಸ್ಥಾನ ಮತ್ತು ಇತರರು 2 ಸ್ಥಾನ ಗೆದ್ದಿದ್ದರು. ಇದೀಗ 104 ಸ್ಥಾನ ಗೆದ್ದಿರುವ ಬಿಜೆಪಿ ಬಹುಮತ ಸಾಬೀತು ಪಡಿಸಬೇಕಿದ್ದು, ಎಂಟು ಶಾಸಕರ ಅಗತ್ಯವಿದೆ.