ಲಿಂಗಾಯತರ ಪ್ರೀತಿ ಯಡಿಯೂರಪ್ಪ ಕಡೆಗೆ? ಸಮೀಕ್ಷೆಯಲ್ಲಿ ಇದೆಯಾ ನೂನ್ಯತೆ?
ಕರ್ನಾಟಕ ವಿಧಾನಸಭಾ ಚುನಾವಣೆ 2018ಗಾಗಿ ಇಂಡಿಯಾ ಟುಡೇ -ಕಾರ್ವಿ ಸಂಸ್ಥೆ ನಡೆಸಿದ ಬೃಹತ್ ಸಮೀಕ್ಷೆ-ಜನಾಭಿಪ್ರಾಯ ಸಂಗ್ರಹದ ವರದಿ ಇದೀಗ ಪ್ರಕಟವಾಗಿದೆ. ಅದರ ಪ್ರಕಾರ ಲಿಂಗಾಯತರ ಪ್ರೀತಿ ಯಡಿಯೂರಪ್ಪ ಅವರ ಕಡೆಗೆ ಹೆಚ್ಚು ಇದೆ.
ಮುಖ್ಯಮಂತ್ರಿ ಯಾರಾಗಬೇಕು ಎಂದು ಲಿಂಗಾಯತರಿಗೆ ಕೇಳಲಾದ ಪ್ರಶ್ನೆಗೆ, 39% ಜನ ಲಿಂಗಾಯತರು ಯಡಿಯೂರಪ್ಪ ಅವರೇ ಮುಖ್ಯಮಂತ್ರಿ ಆಗಲಿ ಎಂದಿದ್ದಾರೆ, 23% ಲಿಂಗಾಯತರು ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಲಿ ಎಂದಿದ್ದಾರೆ. 17% ಲಿಂಗಾಯತರು ಕುಮಾರಸ್ವಾಮಿ ಪರ ಇದ್ದಾರೆ.
ಅಷ್ಟೆ ಅಲ್ಲದೆ ಲಿಂಗಾಯತ ಪ್ರತ್ಯೇಕ ಧರ್ಮ ವಿಷಯ ಈ ಬಾರಿಯ ಚುನಾವಣೆಯ ಮುಖ್ಯ ವಿಷಯವಾಗಲಿದೆಯೇ ಎಂಬ ಪ್ರಶ್ನೆಗೆ 52% ಮಂದಿ ಹೌದು ಎಂದಿದ್ದಾರೆ. ಆದರೆ ಈ ಸಮೀಕ್ಷೆಯಲ್ಲಿ ಸಣ್ಣ ಕೊರತೆ ಇದೆ.

ಈ ಲಿಂಗಾಯತ ಸಮೀಕ್ಷೆಯಲ್ಲಿ ಎದ್ದಿರುವ ಪ್ರಶ್ನೆ ಎಂದರೆ ಸಮೀಕ್ಷೆ ನಡೆಸುವಾಗ ವೀರಶೈವ ಅಥವಾ ಲಿಂಗಾಯತ ಎಂದು ವಿಭಾಗ ಮಾಡದೇ ಸಮೀಕ್ಷೆ ಮಾಡಿರುವುದು. ಸಮೀಕ್ಷೆ ಕೇವಲ ವೀರಶೈವ ಹಾಗೂ ಲಿಂಗಾಯತ ಎರಡನ್ನೂ ಒಂದೇ ಎಂದು ಪರಿಗಣಿಸಿ ಸಮೀಕ್ಷೆ ಮಾಡಿರುವುದು ಮೇಲ್ನೋಟಕ್ಕೆ ಕಾಣುತ್ತಿದೆ. ಹಾಗಾದಲ್ಲಿ ಈ ಸಮೀಕ್ಷೆ ಸತ್ಯಕ್ಕೆ ಹತ್ತಿರ ಬಾರದೇ ಹೋಗುವ ಅಪಾಯ ಇದೆ.
ವೀರಶೈವ ಮತ್ತು ಲಿಂಗಾಯತ ಎರಡೂ ಪ್ರತ್ಯೇಕ ಗೊಂಡಿದ್ದು, ಪ್ರತ್ಯೇಕಗೊಳ್ಳುವುದು ಲಿಂಗಾಯತರ ಬೇಡಿಕೆ ಆಗಿತ್ತು, ಪ್ರತ್ಯೇಕತೆಗೆ ವೀರಶೈವರ ವಿರೋಧ ಇತ್ತು. ಆದರೆ ಈ ಸಮೀಕ್ಷೆ ವೀರಶೈವ ಹಾಗೂ ಲಿಂಗಾಯತ ಎರಡನ್ನೂ ಒಟ್ಟು ಮಾಡಿ ಸಮೀಕ್ಷೆ ನಡೆಸಿರುವುದು ಸರಿಯಾದ ಫಲಿತಾಂಶ ತಂದಿದೆ ಎಂದೇನು ಎನಿಸುವುದಿಲ್ಲ.
-
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ -
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ












Click it and Unblock the Notifications