ಲಿಂಗಾಯತರ ಪ್ರೀತಿ ಯಡಿಯೂರಪ್ಪ ಕಡೆಗೆ? ಸಮೀಕ್ಷೆಯಲ್ಲಿ ಇದೆಯಾ ನೂನ್ಯತೆ?
ಕರ್ನಾಟಕ ವಿಧಾನಸಭಾ ಚುನಾವಣೆ 2018ಗಾಗಿ ಇಂಡಿಯಾ ಟುಡೇ -ಕಾರ್ವಿ ಸಂಸ್ಥೆ ನಡೆಸಿದ ಬೃಹತ್ ಸಮೀಕ್ಷೆ-ಜನಾಭಿಪ್ರಾಯ ಸಂಗ್ರಹದ ವರದಿ ಇದೀಗ ಪ್ರಕಟವಾಗಿದೆ. ಅದರ ಪ್ರಕಾರ ಲಿಂಗಾಯತರ ಪ್ರೀತಿ ಯಡಿಯೂರಪ್ಪ ಅವರ ಕಡೆಗೆ ಹೆಚ್ಚು ಇದೆ.
ಮುಖ್ಯಮಂತ್ರಿ ಯಾರಾಗಬೇಕು ಎಂದು ಲಿಂಗಾಯತರಿಗೆ ಕೇಳಲಾದ ಪ್ರಶ್ನೆಗೆ, 39% ಜನ ಲಿಂಗಾಯತರು ಯಡಿಯೂರಪ್ಪ ಅವರೇ ಮುಖ್ಯಮಂತ್ರಿ ಆಗಲಿ ಎಂದಿದ್ದಾರೆ, 23% ಲಿಂಗಾಯತರು ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಲಿ ಎಂದಿದ್ದಾರೆ. 17% ಲಿಂಗಾಯತರು ಕುಮಾರಸ್ವಾಮಿ ಪರ ಇದ್ದಾರೆ.
ಅಷ್ಟೆ ಅಲ್ಲದೆ ಲಿಂಗಾಯತ ಪ್ರತ್ಯೇಕ ಧರ್ಮ ವಿಷಯ ಈ ಬಾರಿಯ ಚುನಾವಣೆಯ ಮುಖ್ಯ ವಿಷಯವಾಗಲಿದೆಯೇ ಎಂಬ ಪ್ರಶ್ನೆಗೆ 52% ಮಂದಿ ಹೌದು ಎಂದಿದ್ದಾರೆ. ಆದರೆ ಈ ಸಮೀಕ್ಷೆಯಲ್ಲಿ ಸಣ್ಣ ಕೊರತೆ ಇದೆ.

ಈ ಲಿಂಗಾಯತ ಸಮೀಕ್ಷೆಯಲ್ಲಿ ಎದ್ದಿರುವ ಪ್ರಶ್ನೆ ಎಂದರೆ ಸಮೀಕ್ಷೆ ನಡೆಸುವಾಗ ವೀರಶೈವ ಅಥವಾ ಲಿಂಗಾಯತ ಎಂದು ವಿಭಾಗ ಮಾಡದೇ ಸಮೀಕ್ಷೆ ಮಾಡಿರುವುದು. ಸಮೀಕ್ಷೆ ಕೇವಲ ವೀರಶೈವ ಹಾಗೂ ಲಿಂಗಾಯತ ಎರಡನ್ನೂ ಒಂದೇ ಎಂದು ಪರಿಗಣಿಸಿ ಸಮೀಕ್ಷೆ ಮಾಡಿರುವುದು ಮೇಲ್ನೋಟಕ್ಕೆ ಕಾಣುತ್ತಿದೆ. ಹಾಗಾದಲ್ಲಿ ಈ ಸಮೀಕ್ಷೆ ಸತ್ಯಕ್ಕೆ ಹತ್ತಿರ ಬಾರದೇ ಹೋಗುವ ಅಪಾಯ ಇದೆ.
ವೀರಶೈವ ಮತ್ತು ಲಿಂಗಾಯತ ಎರಡೂ ಪ್ರತ್ಯೇಕ ಗೊಂಡಿದ್ದು, ಪ್ರತ್ಯೇಕಗೊಳ್ಳುವುದು ಲಿಂಗಾಯತರ ಬೇಡಿಕೆ ಆಗಿತ್ತು, ಪ್ರತ್ಯೇಕತೆಗೆ ವೀರಶೈವರ ವಿರೋಧ ಇತ್ತು. ಆದರೆ ಈ ಸಮೀಕ್ಷೆ ವೀರಶೈವ ಹಾಗೂ ಲಿಂಗಾಯತ ಎರಡನ್ನೂ ಒಟ್ಟು ಮಾಡಿ ಸಮೀಕ್ಷೆ ನಡೆಸಿರುವುದು ಸರಿಯಾದ ಫಲಿತಾಂಶ ತಂದಿದೆ ಎಂದೇನು ಎನಿಸುವುದಿಲ್ಲ.
-
ಅಕ್ಷಯ ತೃತೀಯ 2026: ಏಪ್ರಿಲ್ 19ಕ್ಕೆ ಚಿನ್ನದಂತಹ ಹಬ್ಬ; ಶುಭ ಮುಹೂರ್ತ, ಪೂಜಾ ವಿಧಿವಿಧಾನ, ವಿವರ -
ಪ್ರವಾಸೋದ್ಯಮ ಇಲಾಖೆಯಿಂದ ಎಸ್ಸಿ,ಎಸ್ಟಿ ಅಭ್ಯರ್ಥಿಗಳಿಗೆ ಆತಿಥ್ಯ ಕ್ಷೇತ್ರದಲ್ಲಿ ಉಚಿತ ಕೌಶಲ್ಯಾಭಿವೃದ್ಧಿ ತರಬೇತಿ -
ಎಲ್ಪಿಜಿ ಸಿಲಿಂಡರ್ ಪೂರೈಕೆ ಸ್ಥಗಿತ: ನಾಳೆಯಿಂದ ಬೆಂಗಳೂರಿನಾದ್ಯಂತ ಹೋಟೆಲ್ಗಳು ಬಂದ್ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣಕ್ಕೆ ಈ ಪ್ರದೇಶ ಬೆಸ್ಟ್: ಉದ್ಯಮಿ ಕಿರಣ್ ಮಜುಂದಾರ್ ಶಾ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು












Click it and Unblock the Notifications