ರಾಷ್ಟ್ರೀಕೃತ ಬ್ಯಾಂಕುಗಳ ಸಾಲಮನ್ನಾ: ಸಿಎಂ ಯಡಿಯೂರಪ್ಪ ಘೋಷಣೆ?
Recommended Video

ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದ ಯಡಿಯೂರಪ್ಪ | Oneindia Kannada
ಬೆಂಗಳೂರು, ಮೇ 17: ಕರ್ನಾಟಕ ರಾಜ್ಯದ 24 ನೇ ಮುಖ್ಯಮಂತ್ರಿಯಾಗಿ ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪನವರು(75) ಇಂದು(ಮೇ 17) ಬೆಳಿಗ್ಗೆ 9 ಗಂಟೆಗೆ ಪ್ರಮಾಣವಚನ ಸ್ವೀಕರಿಸಿದ್ದಾರೆ.
ರಾಜಭವನದ ಗ್ಲಾಸ್ ಹೌಸ್ ನಲ್ಲಿ ನಡೆದ ಸಮಾರಂಭದಲ್ಲಿ ಯಡಿಯೂರಪ್ಪರು ಪ್ರಮಾಣ ವಚನ ಸ್ವೀಕರಿಸಿದ್ದು, ಅವರೊಂದಿಗೆ ಯಾವುದೇ ಮಂತ್ರಿಗಳು ಪ್ರಮಾಣ ವಚನ ಸ್ವೀಕರಿಸಿಲ್ಲ. ಬಿಜೆಪಿ ಮುಖಂಡರಾದ ಶ್ರೀರಾಮುಲು, ಗೋವಿಂದ ಕಾರಜೋಳ, ಆರ್ ಅಶೋಕ್ ಮತ್ತು ಕೆ ಎಸ್ ಈಶ್ವರಪ್ಪ ಸಹ ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎನ್ನಲಾಗಿತ್ತು. ಪ್ರಮಾಣವಚನದ ಕ್ಷಣ ಕ್ಷಣದ ಮಾಹಿತಿಯನ್ನು ಒನ್ ಇಂಡಿಯಾ ಕನ್ನಡ ನೀಡಲಿದೆ.

ಮೊದಲ ಕ್ಯಾಬಿನೇಟ್ ಮೀಟಿಂಗ್ ನಲ್ಲಿ ಸಿಎಂ ಯಡಿಯೂರಪ್ಪ ರಾಷ್ಟ್ರೀಕೃತ ಬ್ಯಾಂಕುಗಳ ಸಾಲಮನ್ನಾ ಮಾಡುವ ನಿರೀಕ್ಷೆಯಿದೆ.
ಬೆಂಗಳೂರಿನ ಮಲ್ಲೇಶ್ವರಂ ನಲ್ಲಿರುವ ಬಿಜೆಪಿ ಕಚೇರಿಗೆ ಬಿ ಎಸ್ ಯಡಿಯೂರಪ್ಪ ಆಗಮಿಸಲಿರುವ ಸಾಧ್ಯತೆ ಇರುವುದರಿಂದ ಬಿಜೆಪಿ ಕಚೇರಿಯಲ್ಲಿ ಭದ್ರತಾ ಸಿಬ್ಬಂದಿ ತಪಾಸಣೆ ನಡೆಸಿದ್ದಾರೆ. ಬಾಂಬ್ ನಿಷ್ಕ್ರಿಯ ದಳ, ಶ್ವಾನ ದಳದಿಂದ ತಪಾಸಣೆ ನಡೆಸಲಾಗಿದೆ.
ಮುಖ್ಯಮಂತ್ರಿ ಕಚೇರಿಯಲ್ಲಿ ವಿಶೇಷ ಪೂಜೆ ಸಲ್ಲಿಸಿ, ಮುಖ್ಯಮಂತ್ರಿ ಕುರ್ಚಿಯಲ್ಲಿ ಕುಳಿತು ಅಧಿಕಾರ ಸ್ವೀಕರಿಸಿದ ಬಿ ಎಸ್ ಯಡಿಯೂರಪ್ಪ
ಯಡಿಯೂರಪ್ಪ ಪ್ರಮಾಣ ವಚನ ಸ್ವೀಕಾರ ವಿರೋಧಿಸಿ ವಿಧಾನಸೌಧದ ಗಾಂಧಿ ಪ್ರತಿಮೆ ಎದುರು ಕಾಂಗ್ರೆಸ್ ನಾಯಕರ ಪ್ರತಿಭಟನೆ
ಹಸಿರು ಶಾಲು ಹೊದ್ದ ಯಡಿಯೂರಪ್ಪ ದೇವರು ಮತ್ತು ರೈತರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು.
ಬಿ ಎಸ್ ಯಡಿಯೂರಪ್ಪ ಎಂಬ ಹೆಸರಿನವನಾದ ನಾನು... ಎಂದು ಪ್ರಮಾಣವಚನ ಸ್ವೀಕರಿಸುತ್ತಿದ್ದಂತೆಯೇ ಮುಗಿಲುಮುಟ್ಟಿದ ಅಭಿಮಾನಿಗಳ ಹರ್ಷೋದ್ಘಾರ
ರಾಜಭವನದಲ್ಲಿ ಪ್ರಮಾಣವಚನ ಸಮಾರಂಭ ಆರಭವಾಗಿದ್ದು, ರಾಜ್ಯ ಪಾಲ ವಾಜುಭಾಯ್ ವಾಲಾ ಅವರು ವೇದಿಕೆ ಆರಂಭಿಸಿದ್ದಾರೆ.
ರಾಜಭವನದೆದುರು ಬಿ ಎಸ್ ಯಡಿಯೂರಪ್ಪ ಅವರನ್ನು ಸ್ವಾಗತಿಸುತ್ತಿರುವ ಬಿಜೆಪಿ ಮುಖಂಡರಾದ ಶ್ರೀರಾಮುಲು ಮತ್ತು ಗೋವಿಂದ ಕಾರಜೋಳ.
ಈಗಾಗಲೇ ಬಿ ಎಸ್ ಯಡಿಯೂರಪ್ಪನವರು ರಾಜಭವನಕ್ಕೆ ಹಾಜರಾಗಿದ್ದು, ಕಾರ್ಯಕರ್ತರಲ್ಲಿ ಸಂಭ್ರಮ ಮುಗಿಲುಮುಟ್ಟಿದೆ.
ವಿಧಾನಸಭೆಯಲ್ಲಿ ನಾವು ಬಹುಮತ ಸಾಬೀತುಪಡಿಸುತ್ತೇವೆ. ಯಡಿಯೂರಪ್ಪನವರು 5 ವರ್ಷಗಳ ಕಾಲ ಉತ್ತಮ ಆಡಳಿತ ನೀಡಲಿದ್ದಾರೆ- ಅನಂತ ಕುಮಾರ್, ಕೇಂದ್ರ ಸಚಿವ
ಯಡಿಯೂರಪ್ಪ ಅವರು ರಾಜ್ಯದ 24ನೇ ಮುಖ್ಯಮಂತ್ರಿಯಾಗಿ 9 ಗಂಟೆಗೆ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.
ರಾಜಭವನಕ್ಕೆ ಕರ್ನಾಟಕ ಬಿಜೆಪಿ ಚುನಾವಣಾ ಉಸ್ತುವಾರಿ ಪ್ರಕಾಶ್ ಜಾವಡೇಕರ್ ಸೇರಿದಂತೆ ಹಲವು ನಾಯಕರ ಆಗಮನ
ಬಿಳಿಯ ಸಫಾರಿ ಸೂಟು ಧರಿಸಿ, ಹಸಿರು ಶಾಲು ಹೊದ್ದಿರುವ ಯಡಿಯೂರಪ್ಪ ಜನರತ್ತ ಕೈ ಬೀಸುತ್ತಾ ರಾಜಭವನಕ್ಕೆ ಆಗಮಿಸುತ್ತಿದ್ದಾರೆ
ಮೇ 15 ರಂದು ಹೊರಬಿದ್ದ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ 104, ಕಾಂಗ್ರೆಸ್ 78, ಜೆಡಿಎಸ್ 38, ಇತರರು 2 ಸ್ಥಾನಗಳಲ್ಲಿ ಜಯಗಳಿಸಿದ್ದರು. ಅತಂತ್ರ ವಿಧಾನಸಭೆಯ ಹಿನ್ನೆಲೆಯಲ್ಲಿ ಕಾಂಗ್ರೆಸ್ ಜೆಡಿಎಸ್ ಪಕ್ಷಗಳು ಮೈತ್ರಿ ಸರ್ಕಾರ ರಚಿಸಲು ಮುಂದಾಗಿದ್ದವು.
ಸಂಪೂರ್ಣ ಬಹುಮತವಿಲ್ಲದಿದ್ದರೂ ಯಡಿಯೂರಪ್ಪ ಅವರಿಗೆ ಸರ್ಕಾರ ರಚನೆಗೆ ಆಮಂತ್ರಿಸಿದ ರಾಜ್ಯಪಾಲರ ನಡೆಯನ್ನು ಖಂಡಿಸಿ ಜೆಡಿಎಸ್ ಮತ್ತು ಕಾಂಗ್ರೆಸ್ ಪಕ್ಷಗಳು ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದವು. ಬೆಳಗ್ಗಿನ ಜಾವ 1:45 ರಿಂದ ಈ ಕುರಿತು ತುರ್ತು ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಯಡಿಯೂರಪ್ಪ ಅವರ ಪ್ರಮಾಣವಚನಕ್ಕೆ ತಡೆನೀಡಲು ನಿರಾಕರಿಸಿದೆ.
ಸಂಪೂರ್ಣ ಬಹುಮತವಿಲ್ಲದಿದ್ದರೂ ಯಡಿಯೂರಪ್ಪ ಅವರಿಗೆ ಸರ್ಕಾರ ರಚನೆಗೆ ಆಮಂತ್ರಿಸಿದ ರಾಜ್ಯಪಾಲರ ನಡೆಯನ್ನು ಖಂಡಿಸಿ ಜೆಡಿಎಸ್ ಮತ್ತು ಕಾಂಗ್ರೆಸ್ ಪಕ್ಷಗಳು ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದವು. ಬೆಳಗ್ಗಿನ ಜಾವ 1:45 ರಿಂದ ಈ ಕುರಿತು ತುರ್ತು ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಯಡಿಯೂರಪ್ಪ ಅವರ ಪ್ರಮಾಣವಚನಕ್ಕೆ ತಡೆನೀಡಲು ನಿರಾಕರಿಸಿದೆ.
More From
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್












Click it and Unblock the Notifications