ತ್ವರಿತ ಅಲರ್ಟ್ ಗಳಿಗಾಗಿ
For Daily Alerts
ರಾಷ್ಟ್ರೀಕೃತ ಬ್ಯಾಂಕುಗಳ ಸಾಲಮನ್ನಾ: ಸಿಎಂ ಯಡಿಯೂರಪ್ಪ ಘೋಷಣೆ?
Recommended Video
ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದ ಯಡಿಯೂರಪ್ಪ | Oneindia Kannada
ಬೆಂಗಳೂರು, ಮೇ 17: ಕರ್ನಾಟಕ ರಾಜ್ಯದ 24 ನೇ ಮುಖ್ಯಮಂತ್ರಿಯಾಗಿ ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪನವರು(75) ಇಂದು(ಮೇ 17) ಬೆಳಿಗ್ಗೆ 9 ಗಂಟೆಗೆ ಪ್ರಮಾಣವಚನ ಸ್ವೀಕರಿಸಿದ್ದಾರೆ.
ರಾಜಭವನದ ಗ್ಲಾಸ್ ಹೌಸ್ ನಲ್ಲಿ ನಡೆದ ಸಮಾರಂಭದಲ್ಲಿ ಯಡಿಯೂರಪ್ಪರು ಪ್ರಮಾಣ ವಚನ ಸ್ವೀಕರಿಸಿದ್ದು, ಅವರೊಂದಿಗೆ ಯಾವುದೇ ಮಂತ್ರಿಗಳು ಪ್ರಮಾಣ ವಚನ ಸ್ವೀಕರಿಸಿಲ್ಲ. ಬಿಜೆಪಿ ಮುಖಂಡರಾದ ಶ್ರೀರಾಮುಲು, ಗೋವಿಂದ ಕಾರಜೋಳ, ಆರ್ ಅಶೋಕ್ ಮತ್ತು ಕೆ ಎಸ್ ಈಶ್ವರಪ್ಪ ಸಹ ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎನ್ನಲಾಗಿತ್ತು. ಪ್ರಮಾಣವಚನದ ಕ್ಷಣ ಕ್ಷಣದ ಮಾಹಿತಿಯನ್ನು ಒನ್ ಇಂಡಿಯಾ ಕನ್ನಡ ನೀಡಲಿದೆ.
ಯಡಿಯೂರಪ್ಪ ಪ್ರಮಾಣವಚನಕ್ಕೆ ಶುಭಾಶಯಗಳ ಸುರಿಮಳೆ
Newest FirstOldest First
ಮೊದಲ ಕ್ಯಾಬಿನೇಟ್ ಮೀಟಿಂಗ್ ನಲ್ಲಿ ಸಿಎಂ ಯಡಿಯೂರಪ್ಪ ರಾಷ್ಟ್ರೀಕೃತ ಬ್ಯಾಂಕುಗಳ ಸಾಲಮನ್ನಾ ಮಾಡುವ ನಿರೀಕ್ಷೆಯಿದೆ.
ಬೆಂಗಳೂರಿನ ಮಲ್ಲೇಶ್ವರಂ ನಲ್ಲಿರುವ ಬಿಜೆಪಿ ಕಚೇರಿಗೆ ಬಿ ಎಸ್ ಯಡಿಯೂರಪ್ಪ ಆಗಮಿಸಲಿರುವ ಸಾಧ್ಯತೆ ಇರುವುದರಿಂದ ಬಿಜೆಪಿ ಕಚೇರಿಯಲ್ಲಿ ಭದ್ರತಾ ಸಿಬ್ಬಂದಿ ತಪಾಸಣೆ ನಡೆಸಿದ್ದಾರೆ. ಬಾಂಬ್ ನಿಷ್ಕ್ರಿಯ ದಳ, ಶ್ವಾನ ದಳದಿಂದ ತಪಾಸಣೆ ನಡೆಸಲಾಗಿದೆ.
ಮುಖ್ಯಮಂತ್ರಿ ಕಚೇರಿಯಲ್ಲಿ ವಿಶೇಷ ಪೂಜೆ ಸಲ್ಲಿಸಿ, ಮುಖ್ಯಮಂತ್ರಿ ಕುರ್ಚಿಯಲ್ಲಿ ಕುಳಿತು ಅಧಿಕಾರ ಸ್ವೀಕರಿಸಿದ ಬಿ ಎಸ್ ಯಡಿಯೂರಪ್ಪ
ಯಡಿಯೂರಪ್ಪ ಪ್ರಮಾಣ ವಚನ ಸ್ವೀಕಾರ ವಿರೋಧಿಸಿ ವಿಧಾನಸೌಧದ ಗಾಂಧಿ ಪ್ರತಿಮೆ ಎದುರು ಕಾಂಗ್ರೆಸ್ ನಾಯಕರ ಪ್ರತಿಭಟನೆ
Advertisement
ಬಿ ಎಸ್ ಯಡಿಯೂರಪ್ಪ ಎಂಬ ಹೆಸರಿನವನಾದ ನಾನು... ಎಂದು ಪ್ರಮಾಣವಚನ ಸ್ವೀಕರಿಸುತ್ತಿದ್ದಂತೆಯೇ ಮುಗಿಲುಮುಟ್ಟಿದ ಅಭಿಮಾನಿಗಳ ಹರ್ಷೋದ್ಘಾರ
ರಾಜಭವನದಲ್ಲಿ ಪ್ರಮಾಣವಚನ ಸಮಾರಂಭ ಆರಭವಾಗಿದ್ದು, ರಾಜ್ಯ ಪಾಲ ವಾಜುಭಾಯ್ ವಾಲಾ ಅವರು ವೇದಿಕೆ ಆರಂಭಿಸಿದ್ದಾರೆ.
Advertisement
ರಾಜಭವನದೆದುರು ಬಿ ಎಸ್ ಯಡಿಯೂರಪ್ಪ ಅವರನ್ನು ಸ್ವಾಗತಿಸುತ್ತಿರುವ ಬಿಜೆಪಿ ಮುಖಂಡರಾದ ಶ್ರೀರಾಮುಲು ಮತ್ತು ಗೋವಿಂದ ಕಾರಜೋಳ.
ಈಗಾಗಲೇ ಬಿ ಎಸ್ ಯಡಿಯೂರಪ್ಪನವರು ರಾಜಭವನಕ್ಕೆ ಹಾಜರಾಗಿದ್ದು, ಕಾರ್ಯಕರ್ತರಲ್ಲಿ ಸಂಭ್ರಮ ಮುಗಿಲುಮುಟ್ಟಿದೆ.
ವಿಧಾನಸಭೆಯಲ್ಲಿ ನಾವು ಬಹುಮತ ಸಾಬೀತುಪಡಿಸುತ್ತೇವೆ. ಯಡಿಯೂರಪ್ಪನವರು 5 ವರ್ಷಗಳ ಕಾಲ ಉತ್ತಮ ಆಡಳಿತ ನೀಡಲಿದ್ದಾರೆ- ಅನಂತ ಕುಮಾರ್, ಕೇಂದ್ರ ಸಚಿವ
ರಾಜಭವನಕ್ಕೆ ಕರ್ನಾಟಕ ಬಿಜೆಪಿ ಚುನಾವಣಾ ಉಸ್ತುವಾರಿ ಪ್ರಕಾಶ್ ಜಾವಡೇಕರ್ ಸೇರಿದಂತೆ ಹಲವು ನಾಯಕರ ಆಗಮನ
ಬಿಳಿಯ ಸಫಾರಿ ಸೂಟು ಧರಿಸಿ, ಹಸಿರು ಶಾಲು ಹೊದ್ದಿರುವ ಯಡಿಯೂರಪ್ಪ ಜನರತ್ತ ಕೈ ಬೀಸುತ್ತಾ ರಾಜಭವನಕ್ಕೆ ಆಗಮಿಸುತ್ತಿದ್ದಾರೆ
ಮೇ 15 ರಂದು ಹೊರಬಿದ್ದ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ 104, ಕಾಂಗ್ರೆಸ್ 78, ಜೆಡಿಎಸ್ 38, ಇತರರು 2 ಸ್ಥಾನಗಳಲ್ಲಿ ಜಯಗಳಿಸಿದ್ದರು. ಅತಂತ್ರ ವಿಧಾನಸಭೆಯ ಹಿನ್ನೆಲೆಯಲ್ಲಿ ಕಾಂಗ್ರೆಸ್ ಜೆಡಿಎಸ್ ಪಕ್ಷಗಳು ಮೈತ್ರಿ ಸರ್ಕಾರ ರಚಿಸಲು ಮುಂದಾಗಿದ್ದವು.
ಸಂಪೂರ್ಣ ಬಹುಮತವಿಲ್ಲದಿದ್ದರೂ ಯಡಿಯೂರಪ್ಪ ಅವರಿಗೆ ಸರ್ಕಾರ ರಚನೆಗೆ ಆಮಂತ್ರಿಸಿದ ರಾಜ್ಯಪಾಲರ ನಡೆಯನ್ನು ಖಂಡಿಸಿ ಜೆಡಿಎಸ್ ಮತ್ತು ಕಾಂಗ್ರೆಸ್ ಪಕ್ಷಗಳು ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದವು. ಬೆಳಗ್ಗಿನ ಜಾವ 1:45 ರಿಂದ ಈ ಕುರಿತು ತುರ್ತು ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಯಡಿಯೂರಪ್ಪ ಅವರ ಪ್ರಮಾಣವಚನಕ್ಕೆ ತಡೆನೀಡಲು ನಿರಾಕರಿಸಿದೆ.
ಸಂಪೂರ್ಣ ಬಹುಮತವಿಲ್ಲದಿದ್ದರೂ ಯಡಿಯೂರಪ್ಪ ಅವರಿಗೆ ಸರ್ಕಾರ ರಚನೆಗೆ ಆಮಂತ್ರಿಸಿದ ರಾಜ್ಯಪಾಲರ ನಡೆಯನ್ನು ಖಂಡಿಸಿ ಜೆಡಿಎಸ್ ಮತ್ತು ಕಾಂಗ್ರೆಸ್ ಪಕ್ಷಗಳು ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದವು. ಬೆಳಗ್ಗಿನ ಜಾವ 1:45 ರಿಂದ ಈ ಕುರಿತು ತುರ್ತು ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಯಡಿಯೂರಪ್ಪ ಅವರ ಪ್ರಮಾಣವಚನಕ್ಕೆ ತಡೆನೀಡಲು ನಿರಾಕರಿಸಿದೆ.
Comments
karnataka election results 2018 yediyurappa karnataka assembly elections 2018 ಕರ್ನಾಟಕ ವಿಧಾನಸಭೆ ಚುನಾವಣೆ 2018 ಫಲಿತಾಂಶ
English summary
Karnataka Election results 2018: BJP state chief BS Yeddurappa to be sworn in as 24th chief minister of Karnataka today at 9 am. Here are LIVE updates.