ಭದ್ರತಾ ಲೋಪ: ಮಮತಾ ಬ್ಯಾನರ್ಜಿ ಆಕ್ರೋಶಕ್ಕೆ ಎಚ್ಡಿಕೆ ಕಸಿವಿಸಿ!
Recommended Video

ಬೆಂಗಳೂರು, ಮೇ 24: ಎಚ್ ಡಿ ಕುಮಾರಸ್ವಾಮಿಯವರ ಪ್ರಮಾಣವಚನ ಕಾರ್ಯಕ್ರಮ ನಿನ್ನೆ ಅದ್ಧೂರಿಯಾಗಿ ನೆರವೇರಿದೆ. ರಾಷ್ಟ್ರದ ನಾನಾ ರಾಜ್ಯದ ಮುಖ್ಯಮಂತ್ರಿಗಳು, ಗಣ್ಯರು ಆಗಮಿಸಿದ್ದ ಈ ಕಾರ್ಯಕ್ರಮದ ನಂತರ ರಾಜ್ಯದ ನೂತನ ಮುಖ್ಯಮಂತ್ರಿಗೆ ಕಸಿವಿಸಿಯಾಗಿದ್ದು ನಿಜ.
#WATCH: West Bengal CM Mamata Banerjee reprimands DIG Neelamani Raju as she came to Karnataka Vidhana Soudha for oath taking ceremony because reportedly had to walk a few metres, also expressed discontentment to HD Deve Gowda & HD Kumaraswamy. #Bengaluru pic.twitter.com/WZ2n0QVE9b
— ANI (@ANI) 23 May 2018
ನಿನ್ನೆ ವಿಧಾನಸೌಧದ ಸುತ್ತ ಮುತ್ತ ಮತ್ತು ಬೆಂಗಳೂರಿನ ಹಲವೆಡೆ ಸುರಿದ ಭಾರೀ ಮಳೆಯಿಂದಾಗಿ ಸಂಚಾರ ಅಸ್ತವ್ಯಸ್ಥವಾಗಿತ್ತು. ಬೆಂಗಳೂರಿನ ಟ್ರಾಫಿಕ್ಕಿನ ವಿರಾಟ ದರ್ಶನ ಪಶ್ಚಿ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯವರಿಗೂ ಆಯಿತು! ರಸ್ತೆಯ ಮೇಲೆ ತಟಸ್ಥವಾಗಿ ನಿಂತ ವಾಹನಗಳನ್ನು ಕಂಡು ರೋಸಿಹೋದ ಮಮತಾ ಬ್ಯಾನರ್ಜಿ ಚಾಲುಕ್ಯ ವೃತ್ತದಿಂದ, ವಿಧಾನಸೌಧದವರೆಗೆ ನಡೆದೇ ಬಂದರು! ಇನ್ನೂ ಬೇಸರದ ಸಂಗತಿಯೆಂದರೆ ಅವರೊಂದಿಗೆ ಯಾವುದೇ ಭದ್ರತಾ ಸಿಬ್ಬಂದಿ ಇರಲಿಲ್ಲ!

ನಂತರ ಮುಖ್ಯಮಂತ್ರಿ ಕುಮಾರಸ್ವಾಮಿ ಮತ್ತು ಮಾಜಿ ಪ್ರಧಾನಿ ದೇವೇಗೌಡರ ಬಳಿ ಟ್ರಾಫಿಕ್ ಕುರಿತು ತಮ್ಮ ಕಹಿ ಅನುಭವಗಳನ್ನು ಹೊರಹಾಕಿದ್ದ ಬ್ಯಾನರ್ಜಿ ಆಕ್ರೋಶ ವ್ಯಕ್ತಪಡಿಸಿದ್ದರು. ಇದರಿಂದ ಕಸಿವಿಸಿಗೊಂಡ ಮುಖ್ಯಮಂತ್ರಿ ಕುಮಾರಸ್ವಾಮಿ ಅಧಿಕಾರ ವಹಿಸಿಕೊಮಡ ಮರುದಿನವೇ ಬೆಳ್ಳಂಬೆಳಗ್ಗೆ ತಮ್ಮ ಜೆಪಿ ನಗರದ ನಿವಾಸಕ್ಕೆ ರಾಜ್ಯ ಪೊಲೀಸ್ ಮಹಾನಿರ್ದೇಶಕಿ ನೀಲಮಣಿ ರಾಜು ಮತ್ತು ಗುಪ್ತಚರ ಇಲಾಖೆ ಎಡಿಜಿಪಿ ಅಮರ್ ಕುಮಾರ್ ಅವರನ್ನು ಕರೆದು ಭದ್ರತಾ ವೈಫಲ್ಯದ ಕುರಿತು ಪ್ರಶ್ನಿಸಿದ್ದಾರೆ.
ಈ ಕುರಿತು ಸ್ಪಷ್ಟನೆ ನೀಡುವಂತೆಯೂ ತಿಳಿಸಿದ್ದಾರೆ.
-
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
KSRTC: ಸಾರಿಗೆ ಲೋಕಕ್ಕೆ 'ಪಲ್ಲಕ್ಕಿ' ಮೆರುಗು: ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ 115 ಹೊಸ ಬಸ್ಗಳ ಲೋಕಾರ್ಪಣೆ -
ಬೆಂಗಳೂರಲ್ಲಿ ಗ್ಯಾಸ್ ಏಜೆನ್ಸಿಗಳ ಭರ್ಜರಿ ದಂಧೆ: ಸಿಲಿಂಡರ್ ಸಿಗದೇ ಗ್ರಾಹಕರು ಕಂಗಾಲು; ಕಾಳಸಂತೆಯಲ್ಲಿ ₹3,000ಕ್ಕೆ ಮಾರಾಟ -
LPG Gas: ಎಲ್ಪಿಜಿ ನಿಯಮಗಳಲ್ಲಿ ಭಾರೀ ಬದಲಾವಣೆ; ಗ್ರಾಹಕರು ದೂರು ನೀಡಲು ಸಹಾಯವಾಣಿ ಸಂಖ್ಯೆಗಳ ಬಿಡುಗಡೆ -
Gold Rate March 13: ಸತತ 3ನೇ ದಿನವೂ ಚಿನ್ನ - ಬೆಳ್ಳಿ ಬೆಲೆ ಭರ್ಜರಿ ಕುಸಿತ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ -
Resort: ಕರ್ನಾಟಕದಲ್ಲಿ ಶುರುವಾಯ್ತು ರೆಸಾರ್ಟ್ ರಾಜಕೀಯ: ‘ಅವರು ನಮ್ಮ ಅತಿಥಿಗಳು’ ಎಂದ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ -
Horoscope March 13: ಈ ರಾಶಿಯವರ ಬದುಕಲ್ಲಿ ಸಕಾರಾತ್ಮಕ ಬೆಳವಣಿಗೆ, ಅಧಿಕ ಲಾಭ; ದಿನ ಭವಿಷ್ಯ












Click it and Unblock the Notifications