ನಮ್ಮ ಸಂಸ್ಕೃತಿ ಮುಂದಿನ ಪೀಳಿಗೆಗೂ ದಾಟಬೇಕು: ಶಾಸಕ ದೇವರಾಜ್
Recommended Video

ನಮ್ಮ ಪೀಳಿಗೆಯವರು ಪರಂಪರಾಗತವಾಗಿ ಬಂದ ಸಂಸ್ಕೃತಿಯನ್ನು ಮರೆಯುತ್ತಿದ್ದಾರೆ. ಅವರಿಗೆ ಅವುಗಳ ಪರಿಚಯ ಮಾಡಿಸಬೇಕು. ಅವುಗಳ ಮಹತ್ವ ತಿಳಿಸಬೇಕು. ಈ ಮೂಲಕ ಭವ್ಯ ಸಂಸ್ಕೃತಿಯ ಸಂಪತ್ತನ್ನು ಉಳಿಸಬೇಕು ಎನ್ನುವುದು ಚಿಕ್ಕಪೇಟೆ ಶಾಸಕ ಆರ್.ವಿ. ದೇವರಾಜ್ ಅವರ ಕನಸು.
ತಮ್ಮ ಕನಸಿನ ಕರ್ನಾಟಕ ಹೇಗಿರಬೇಕು ಎಂಬ ಬಗ್ಗೆ ಒನ್ ಇಂಡಿಯಾದೊಂದಿಗೆ ಕೆಲವು ಮಾತುಗಳನ್ನು ಅವರು ಹಂಚಿಕೊಂಡಿದ್ದಾರೆ.
ಇಂದು ಐಟಿ-ಬಿಟಿ ವೇಗವಾಗಿ ಬೆಳೆದಿದೆ. ಅದರ ಲಾಭ ನಮ್ಮ ಹಳ್ಳಿ ಹುಡುಗರಿಗೆ ಸಿಗುತ್ತಿದೆ. ಈ ಮುಂಚೆ ಹಳ್ಳಿ ಮಕ್ಕಳು ಹೋಟೆಲ್ ಅಲ್ಲಿ ಇಲ್ಲಿ ಕೆಲಸ ಮಾಡುತ್ತಿದ್ದರು. ಈಗ ಐಟಿ ಹಬ್ಗಳಲ್ಲಿ ದುಡಿಯುತ್ತಿದ್ದಾರೆ. ಅಧಿಕ ಸಂಬಳ ಸಿಗುತ್ತಿದೆ. ಇದು ಖುಷಿ ಕೊಡುವ ವಿಚಾರ ಎನ್ನುತ್ತಾರೆ ದೇವರಾಜ್.

ದೇವಸ್ಥಾನ, ಮಸೀದಿ, ದರ್ಗಾಗಳು ನಮ್ಮ ನೂರಾರು ವರ್ಷದ ಸಂಸ್ಕೃತಿಯನ್ನು ಸಾರುತ್ತವೆ. ಹಳೆಯ ಸಂಸ್ಕೃತಿಯನ್ನು ಬಿಂಬಿಸುವ ದೇವಸ್ಥಾನಗಳನ್ನು ಅಭಿವೃದ್ಧಿಪಡಿಸಬೇಕು. ಅವುಗಳ ಬಗ್ಗೆ ಯುವಜನರಲ್ಲಿ ತಿಳಿವಳಿಕೆ ಮೂಡಿಸಬೇಕು ಎಂದು ಅವರು ಹೇಳಿದ್ದಾರೆ.
ನಮ್ಮದು ಹಸಿರ ವನಸಿರಿ, ಪ್ರಾಣಿ ಪಕ್ಷಿಗಳ ವೈವಿಧ್ಯವಿರುವ ನಾಡು. ಅದನ್ನು ಉಳಿಸುವ ಜವಾಬ್ದಾರಿ ಕೂಡ ನಮ್ಮ ಮೇಲಿದೆ. ಅರಣ್ಯ ಪ್ರದೇಶಗಳನ್ನು ವಿಸ್ತರಿಸಬೇಕು. ಕಾವೇರಿ ಸೇರಿದಂತೆ ಎಲ್ಲ ನದಿಗಳನ್ನು ರಕ್ಷಿಸುವ ಕೆಲಸ ತ್ವರಿತವಾಗಿ ನಡೆಯಬೇಕು ಎನ್ನುತ್ತಾರೆ ಅವರು.
ಬೆಂಗಳೂರಿನಲ್ಲಿ ಕೆಂಪೇಗೌಡರು ಸಾಕಷ್ಟು ಕೆರೆಗಳನ್ನು ನಿರ್ಮಿಸಿದ್ದರು. ನಮ್ಮ ಸರ್ಕಾರ ಬರುವ ಮುನ್ನ ಅನೇಕ ಕೆರೆಗಳನ್ನು ಮುಚ್ಚಿಸಲಾಗಿದೆ. ಕೆರೆ ಮತ್ತು ಕಲ್ಯಾಣಿಗಳ ನಮ್ಮ ಜೀವನಾಡಿಗಳು. ಅವುಗಳ ಪುನರುತ್ಥಾನದ ಕೆಲಸ ಹೆಚ್ಚಾಗಿ ನಡೆಯಬೇಕು. ನಮ್ಮ ಪೂರ್ವಿಕರ ಶ್ರಮ ವ್ಯರ್ಥವಾಗಬಾರದು ಎಂಬ ಬಯಕೆಗಳನ್ನು ಹಂಚಿಕೊಂಡಿದ್ದಾರೆ.
ಎಲ್ಲರಿಗೂ ವಿದ್ಯೆ ಸಿಗಬೇಕು. ಶಿಕ್ಷಣ ಇದ್ದರೆ ಎಲ್ಲಿ ಬೇಕಾದರೂ ಬದುಕಬಹುದು. ಇಂದು ಭಾರತೀಯರು ಅನೇಕ ದೇಶಗಳಲ್ಲಿದ್ದಾರೆ. ವಿದ್ಯೆ ಇಲ್ಲದಿದ್ದರೆ ಎಲ್ಲಿಯೂ ಬದುಕಲು ಆಗುವುದಿಲ್ಲ. ಇಷ್ಟೆಲ್ಲ ಇದ್ದಾರೆ ನಮ್ಮ ಹಳ್ಳಿ, ನಮ್ಮ ನಾಡು ಎಲ್ಲವೂ ಅಭಿವೃದ್ಧಿ ಆಗುತ್ತವೆ ಎಂದು ಹೇಳಿದ್ದಾರೆ.
-
ಮಾರ್ಚ್ 30ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
ಕೊಹ್ಲಿ ಭಾಯ್ಗೆ ಮೈದಾನದಲ್ಲಿ ಕೆಣಕ್ಬೇಡಿ, ತುಂಬಾ ಸಮಯ ನಿಲ್ಲಲು ಬಿಡಬೇಡಿ; ಎಸ್ಆರ್ಎಚ್ ಸಹ ಆಟಗಾರರಿಗೆ ಇಶಾನ್ ಎಚ್ಚರಿಕೆ ಸಂದೇಶ -
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Bengaluru Property Tax: ಆಸ್ತಿ ತೆರಿಗೆ ಸ್ವೀಕಾರಕ್ಕಾಗಿ ರಾತ್ರಿ 10ಗಂಟೆವರೆಗೆ ಪಾಲಿಕೆ ಕಚೇರಿ ಓಪನ್ -
Arecanut Price: ದಾವಣಗೆರೆ ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಧಾರಣೆ ಭರ್ಜರಿ ಏರಿಕೆ: ಇಲ್ಲಿದೆ ಮಾರ್ಚ್ 30ರ ದರಪಟ್ಟಿ -
Hardik Pandya: ಕೇವಲ 35 ದಿನಗಳಲ್ಲಿ ಕೋಟಿ.. ಕೋಟಿ ಖರ್ಚು ಮಾಡಿದ ಹಾರ್ದಿಕ್ ಪಾಂಡ್ಯ; ಇಲ್ಲಿದೆ ಪಟ್ಟಿ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ












Click it and Unblock the Notifications