'ನನ್ನ ಕನಸಿನ ಕರ್ನಾಟಕದಲ್ಲಿ ಯುವಕರಿಗೆ ಆದ್ಯತೆ ಸಿಗಬೇಕು'
Recommended Video
ಶಿವಮೊಗ್ಗ, ಮೇ 07 : 'ನನ್ನ ಕನಸಿನ ಕರ್ನಾಟಕದಲ್ಲಿ ಯುವಕರಿಗೆ ಕೌಶಲ್ಯ ಆಧಾರಿತ ತರಬೇತಿ ಸಿಗಬೇಕು. ಯುವಕರಿಗೆ ಉದ್ಯೋಗ ಸೃಷ್ಟಿಯಾಗಬೇಕು' ಎಂದು ಸೊರಬ ಕ್ಷೇತ್ರದ ನಿವಾಸಿ ನೀಲಕಂಠ ಶೇಷಗಿರಿ ಹೇಳಿದರು.
ಒನ್ ಇಂಡಿಯಾ ಕನ್ನಡದ ಜೊತೆ ಮಾತನಾಡಿದ ನೀಲಕಂಠ ಶೇಷಗಿರಿ ಅವರು, ಕನಸಿನ ಕರ್ನಾಟಕ ಹೇಗಿರಬೇಕು? ಎಂಬ ಬಗ್ಗೆ ಅಭಿಪ್ರಾಯವನ್ನು ಹಂಚಿಕೊಂಡರು. 'ಚುನಾವಣೆಯಲ್ಲಿ ಯುವಕರಿಗೆ ಹೆಚ್ಚಿನ ಆದ್ಯತೆ ನೀಡಬೇಕು. ಆಗ ಜನರು ಸಹ ಭರವಸೆ ಇಟ್ಟು ಮತದಾನ ಮಾಡುತ್ತಾರೆ' ಎಂದರು.
ಕರ್ನಾಟಕ ಚುನಾವಣೆ : ಸೊರಬ ಕ್ಷೇತ್ರದ ಸಮಸ್ಯೆಗಳು
'ಇಡೀ ದೇಶದಲ್ಲಿಯೆ ಕರ್ನಾಟಕ ಅತ್ಯುತ್ತಮ ಸಂಪತ್ತನ್ನು ಹೊಂದಿದೆ. ರಾಜ್ಯದಲ್ಲಿ ಯುವಕರಿಗೆ ಹೆಚ್ಚಿನ ಆದ್ಯತೆ ಸಿಗಬೇಕು. ಅವರಿಗೆ ಕೌಶಲ್ಯ ಆಧಾರಿತ ತರಬೇತಿ ಸಿಗಬೇಕು. ಉದ್ಯೋಗ ಸಿಗಬೇಕು. ರಾಜಕೀಯ ಪಕ್ಷಗಳು ಯುವಕರಿಗೆ ಹೆಚ್ಚಿನ ಆದ್ಯತೆ ನೀಡಬೇಕು' ಎಂದು ಹೇಳಿದರು.
ಸಂಬಂಧ ಅರ್ಥ ಮಾಡಿಕೊಳ್ಳುವ ತಿಳುವಳಿಕೆ ಕೊಡಲಿ : ಕುಮಾರ್ ಬಂಗಾರಪ್ಪ ಸಂದರ್ಶನ
'ನಮ್ಮದು ಕೃಷಿ ಪ್ರಧಾನವಾದ ರಾಜ್ಯವಾಗಿದೆ. ಉತ್ತರ ಕರ್ನಾಟಕ ಮತ್ತು ಈಶಾನ್ಯ ಕರ್ನಾಟಕದಲ್ಲಿ ಕೃಷಿಕರು ಹೆಚ್ಚಿದ್ದಾರೆ. ಇಲ್ಲಿ ನೀರಾವರಿ ವ್ಯವಸ್ಥೆಯನ್ನು ಮಾಡಿದರೆ ರೈತರು ಆರ್ಥಿಕವಾಗಿ ಮತ್ತು ಸಾಮಾಜಿಕವಾಗಿ ಸದೃಢರಾಗುತ್ತಾರೆ ಎಂಬ ನಂಬಿಕೆ ಇದೆ' ಎಂದು ಅಭಿಪ್ರಾಯವನ್ನು ಹಂಚಿಕೊಂಡರು.