ಹೋಲೋಗ್ರಾಂ ಕೊರತೆ: 1 ಲಕ್ಷ ಹೊಸ ಮತದಾರರಿಗಿಲ್ಲ ವೋಟರ್ ಐಡಿ
ಬೆಂಗಳೂರು, ಏಪ್ರಿಲ್ 26: ಮೊದಲ ಬಾರಿಯ ಮತದಾರರನ್ನು ಮತದಾನ ಮಾಡುವಂತೆ ಪ್ರೇರೇಪಿಸಲು ಚುನಾವಣಾ ಆಯೋಗ ಇನ್ನಿಲ್ಲದ ಕಸರತ್ತು ಮಾಡುತ್ತಿದೆ. ಆದರೆ ಹೋಲೋಗ್ರಾಂ ಪೂರೈಕೆಯಲ್ಲಾದ ಕೊರತೆಯಿಂದ ಒಂದು ಲಕ್ಷ ಹೊಸ ಮತದಾರರು ಈವರೆಗೂ ಗುರುತಿನ ಚೀಟಿ ಪಡೆದುಕೊಂಡಿಲ್ಲ.
ಮೊದಲ ಬಾರಿಗೆ ಮತದಾನ ಮಾಡುವ ಆಸೆ ಹೊಂದಿರುವ ಹೊಸ ಮತದಾರರಿಗೆ ಚುನಾವಣಾ ಆಯೋಗವೇ ತಣ್ಣೀರು ಹಾಕುತ್ತಿರುವಂತೆ ಕಾಣುತ್ತಿದೆ. ಬೆಂಗಳೂರು ನಗರ ಜಿಲ್ಲೆ ವ್ಯಾಪ್ತಿಯ 28 ವಿಧಾನಸಭಾ ಕ್ಷೇತ್ರಗಳಲ್ಲಿ ಮೂರು ಲಕ್ಷಕ್ಕೂ ಹೆಚ್ಚಿನವರು ಹೊಸ ಮತದಾರರಿದ್ದಾರೆ, ಅಲ್ಲದೆ, ಮತದಾರರ ಪಟ್ಟಿಯಲ್ಲಿನ ಹೆಸರು ಬದಲಾವಣೆ, ವಿಳಾಸ ಬದಲಾವಣೆ ಸೇರಿ ಇನ್ನಿತರೆ ಕಾರಣಗಳಿಗಾಗಿ 1.5 ಲಕ್ಷಕ್ಕೂ ಹೆಚ್ಚಿನವರು ಅರ್ಜಿ ಸಲ್ಲಿಸಿದ್ದಾರೆ.
ಒಟ್ಟಾರೆ 4.5 ಲಕ್ಷಕ್ಕೂ ಹೆಚ್ಚಿನವರಿಗೆ ಹೊಸದಾಗಿ ಮತದಾರರ ಚೀಟಿ ನೀಡಬೇಕಿದೆ. ಅದರಲ್ಲಿ ಈಗಾಗಲೇ 3.5 ಲಕ್ಷಕ್ಕೂ ಹೆಚ್ಚಿನವರಿಗೆ ಗುರುತಿನ ಚೀಟಿ ನೀಡಲಾಗಿದ್ದು, ಉಳಿದ ಒಂದು ಲಕ್ಷ ಮತದಾರರಿಗೆ ಗುರುತಿನ ಚೀಟಿ ಲಭ್ಯವಾಗಿಲ್ಲ. ಬೆಂಗಳೂರು ದಕ್ಷಿಣ , ಪದ್ಮನಾಭನಗರ, ಯಶವಂತಪುರ ಸೇರಿ ಇನ್ನಿತರ ಕಡೆಗಳಲ್ಲಿ ಹೋಲೋಗ್ರಾಂ ಕೊರತೆ ಉಂಟಾಗಿದೆ.

ಈ ಬಗ್ಗೆ ಕೇಂದ್ರಗಳ ಸಿಬ್ಬಂದಿಯನ್ನು ಕೇಳಿದರೆ, ಹೋಲೋಗ್ರಾಂ ಕೊರತೆಯಿದೆ. ಹೀಗಾಗಿ ಹೊಸದಾಗಿ ಮತದಾರರ ಚೀಟಿ ನೀಡಲಾಗುತ್ತಿಲ್ಲ ಎಂದು ಹೇಳಲಾಗುತ್ತಿದೆ. ಆದರೆ, ಚುನಾವಣಾ ಅಧಿಕಾರಿಗಳು ಹೋಲೋಗ್ರಾಂ ಕೊರತೆಯುಂಟಾಗಿಲ್ಲ. ನಿಗದಿತ ಎಲ್ಲ ಕೇಂದ್ರಗಳಿಗೂ ಹೋಲೋಗ್ರಾಂ ಪೂರೈಸಲಾಗಿದೆ ಎಂದು ಹೇಳುತ್ತಿದ್ದಾರೆ.
-
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು












Click it and Unblock the Notifications