ಮತದಾನಕ್ಕೆ ಅನಿವಾಸಿ ಭಾರತೀಯ ಕನ್ನಡಿಗರ ನಿರಾಸಕ್ತಿ
ಬೆಂಗಳೂರು, ಏಪ್ರಿಲ್ 24: ಅನಿವಾಸಿ ಭಾರತೀಯರು ಕಳೆದ ಮೂರು ವರ್ಷಗಳಲ್ಲಿ ಭಾರತದಲ್ಲಿ ಸಾಗರದಾಚೆಗಿನ ಭಾರತೀಯರು ಕೆಟಗರಿಯಡಿ ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರು ನೋಂದಣಿ ಮಾಡಿಕೊಳ್ಳುತ್ತಿರುವ ಪ್ರಮಾಣ ಎರಡು ಪಟ್ಟು ಹೆಚ್ಚಳವಾಗಿದೆ.
ಆದರೆ ಮೇ 12 ರಂದು ವಿಧಾನಸಭೆಗೆ ನಡೆಯುವ ಚುನಾವಣೆಗೆ ಕೇವಲ ಅರ್ಧ ಡಜನ್ ಅನಿವಾಸಿ ಭಾರತೀಯ ಕನ್ನಡಿಗರು ಮಾತ್ರ ತಮ್ಮ ಹೆಸರನ್ನು ಮತದಾರರ ಪಟ್ಟಿಯಲ್ಲಿ ಸೇರ್ಪಡೆ ಮಾಡಿಕೊಂಡಿದ್ದಾರೆ.
ರಾಜ್ಯದ ಹೆಚ್ಚುವರಿ ಮುಖ್ಯ ಚುನಾವಣಾಧಿಕಾರಿ ಕೆ.ಎನ್.ರಮೇಶ್ ಅವರು ಹೇಳುವಂತೆ, ಒಬ್ಬ ಮಹಿಳೆ ಸೇರಿ ಕೇವಲ ಆರು ಮಂದಿ ಅನಿವಾಸಿ ಭಾರತೀಯ ಕನ್ನಡಿಗರು ಈ ಬಾರಿ ಮತದಾರರ ಪಟ್ಟಿ ಪರಿಷ್ಕರಣೆ ವೇಳೆ ಸಾಗರೋತ್ತರ ಭಾರತೀಯರು ವಿಭಾಗದಡಿ ತಮ್ಮ ಹೆಸರು ನೋಂದಣಿ ಮಾಡಿಕೊಂಡಿದ್ದಾರೆ.

ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರು ನೋಂದಾಯಿಸಲು ಅನಿವಾಸಿ ಭಾರತೀಯರು ನಮೂನೆ 6ಎ ನಲ್ಲಿ ಭರ್ತಿ ಮಾಡಿ ಖುದ್ದಾಗಿ ಆಯೋಗಕ್ಕೆ ಸಲ್ಲಿಸಬೇಕಾಗುತ್ತದೆ. ಕೆಲ ತಿಂಗಳ ಹಿಂದಿನವರೆಗೂ ರಾಜ್ಯದಲ್ಲಿ ಕೇವಲ ಒಬ್ಬ ಎನ್ಆರ್ಐ ಕನ್ನಡಿಗರು ತಮ್ಮ ಹೆಸರು ನೋಂದಾಯಿಸಿಕೊಂಡಿದ್ದರು. ಈ ಬಗ್ಗೆ ಚುನಾವಣಾ ಆಯೋಗ ಸಾಕಷ್ಟು ಪ್ರಚಾರ ಮಾಡಿದರೂ ಅಷ್ಟಾಗಿ ಪ್ರತಿಕ್ರಿಯೆ ವ್ಯಕ್ತವಾಗುತ್ತಿಲ್ಲ.
ನಾವು ಹೆಸರು ನೋಂದಣಿಗೆ ಒತ್ತಾಯ ಹೇರಲು ಬರುವುದಿಲ್ಲ. ಒಂದು ವೇಳೆ ಹೆಸರು ನೋಂದಾಯಿಸಿದರೂ ಮತ ಚಲಾಯಿಸಲು ಬರಲು ಆಗುವುದಿಲ್ಲ ಎಂಬ ಭಾವನೆ ಅವರಲ್ಲಿ ಇರಬಹುದು. ಆದರೂ ಕೂಡ ನಾವು ಸಾಕಷ್ಟು ಪ್ರೋತ್ಸಾಹ ಹಾಗೂ ಪ್ರಚಾರ ನೀಡಿ, ಹೆಚ್ಚು ಎನ್ಆರ್ಐಗಳು ಹೆಸರು ಸೇರ್ಪಡೆ ಮಾಡುವಂತೆ ಪ್ರಯತ್ನಿಸುತ್ತಿದ್ದೇವೆ ಎನ್ನುತ್ತಾರೆ ರಮೇಶ್.
ಕರ್ನಾಟಕದ 10ರಿಂದ 12 ಲಕ್ಷ ಅನಿವಾಸಿ ಭಾರತೀಯ ಕನ್ನಡಿಗರು ಜಗತ್ತಿನ ಬೇರೆ ಬೇರೆ ರಾಷ್ಟ್ರಗಳಲ್ಲಿ ನೆಲೆಸಿದ್ದಾರೆ. ಅವರಲ್ಲಿ 3-4 ಲಕ್ಷ ಜನರಿಗೆ ನೋಂದಣಿಗೆ ಅರ್ಹತೆ ಇರುತ್ತದೆ. ಅಂಥವರು ತಮ್ಮ ತವರು ನೆಲದಲ್ಲಿ ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆ ಮಾಡುವಂತೆ ಸಾಕಷ್ಟು ಉತ್ತೇಜನ ನೀಡುತ್ತಿದ್ದೇವೆ ಎನ್ನುತ್ತಾರೆ ಅನಿವಾಸಿ ಭಾರತೀಯರ ವೇದಿಕೆಯ ಅಧ್ಯಕ್ಷೆ ಆರತಿ ಕೃಷ್ಣ.
ಪ್ರಜಾಪ್ರತಿನಿಧಿ ಕಾಯ್ದೆ ತಿದ್ದುಪಡಿ ವಿಧೇಯಕ 2017ರ ಅನ್ವಯ ಸಾಗರೋತ್ತರ ಭಾರತೀಯರಿಗೂ ಮತದಾನದ ಅವಕಾಶ ನೀಡಲಾಗಿದ್ದು, ಅಲ್ಲಿಂದ ಬಾರದೇ ಇರುವವರು ಇಲ್ಲಿರುವ ಒಬ್ಬ ವ್ಯಕ್ತಿಗೆ ಮತ ಚಲಾವಣೆ ಅಧಿಕಾರ ನೀಡಲು ಕಾನೂನಿನಲ್ಲಿ ಅವಕಾಶವಿದೆ. ಆದರೆ ಒಬ್ಬ ಎನ್ಆರ್ಐ ಪರವಾಗಿ ಒಬ್ಬ ವ್ಯಕ್ತಿ ಒಂದೇ ಬಾರಿ ಮತ ಚಲಾವಣೆ ಮಾಡಬಹುದು.
-
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
ವೈಭವ್ ಸೂರ್ಯವಂಶಿ ಆಕ್ರಮಣಕಾರಿ ಆಟಕ್ಕೆ ಇಂಗ್ಲೆಂಡ್ ಮೈಕೆಲ್ ವಾಘನ್ ಫಿದಾ; ಬಿಸಿಸಿಐಗೆ ವಿಶೇಷ ಮನವಿ -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ












Click it and Unblock the Notifications